AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಭವಿಷ್ಯಕ್ಕೆ ಎರವಾದ ಚುನಾವಣಾ ಲಾಭದ ಅಗ್ಗದ ಗ್ಯಾರಂಟಿ: ಹೆಚ್​ಡಿ ಕುಮಾರಸ್ವಾಮಿ ಟೀಕೆ

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಕ್ಕಳ ಭವಿಷ್ಯಕ್ಕೆ ಎರವಾದ ಚುನಾವಣಾ ಲಾಭದ ಅಗ್ಗದ ಗ್ಯಾರಂಟಿ: ಹೆಚ್​ಡಿ ಕುಮಾರಸ್ವಾಮಿ ಟೀಕೆ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Jan 03, 2024 | 2:58 PM

Share

ಬೆಂಗಳೂರು, ಜನವರಿ 3: ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ (Congress Government) ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಬಸ್ ಹತ್ತಲಾಗದೆ ಪರದಾಡುತ್ತಿರುವ ಮತ್ತು ಮಕ್ಕಳು ಹತ್ತುತ್ತಿಂದತೆಯೇ ಬಸ್ ಮುಂದಕ್ಕೆ ಚಲಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿರುವ ಅವರು, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆಂದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನಿತ್ಯಾನಂದ ಸ್ವಾಮೀಜಿಯಂತೆ ಸಿದ್ದರಾಮಯ್ಯಗೂ ಭಕ್ತರಿದ್ದಾರೆ: ಬಿಕೆ ಹರಿಪ್ರಸಾದ್

ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ. ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು. ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:56 pm, Wed, 3 January 24

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!