AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ: ಕುಮಾರಸ್ವಾಮಿ ಈ ಮಾತು ಹೇಳಿದ್ಯಾರಿಗೆ?

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಮತ್ತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದಿದ್ದಾರೆ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ...ಕಳ್ಳನ ಮನಸ್ಸು ಹುಳ್ಳುಳ್ಳಗೆ..ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಅಷ್ಟಕ್ಕೂ ಹೆಚ್​ಡಿಕೆ ಈ ಮಾತುನ್ನು ಡಿಕೆ ಶಿವಕುಮಾರ್ ಅವರಿಗೆ ಹೇಳಿದ್ಯಾಕೆ?

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ: ಕುಮಾರಸ್ವಾಮಿ ಈ ಮಾತು ಹೇಳಿದ್ಯಾರಿಗೆ?
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: Oct 15, 2023 | 5:13 PM

Share

ಬೆಂಗಳೂರು, (ಅಕ್ಟೋಬರ್ 15): ಡಿಕೆ ಶಿವಕುಮಾರ್ (DK Shivakumar) ಹಾಗೂ ಹೆಚ್​ಡಿ ಕುಮಾರಸ್ವಾಮಿ(HD Kumaraswamy)  ಈ ಹಿಂದೆ ರಾಜ್ಯ ರಾಜಕಾರಣದ ಜೋಡೆತ್ತುಗಳಾಗಿ ಗುರುತಿಸಿಕೊಂಡಿದ್ದರು. ಆದ್ರೆ, ಇದೀಗ ಅದೇನಾಯ್ತೋ ಏನೋ ಮಾಜಿ ಸಿಎಂ ಕುಮಾರಸ್ವಾಮಿ ಅಕ್ಷರಶಃ ಡಿಕೆ ಬ್ರದರ್ಸ್​ ವಿರುದ್ಧ ಸಿಡಿದೆದ್ದಿದ್ದು, ನಿಂತರೂ, ಕುಂತರೂ, ಎಲ್ಲಿ ಹೋದರೂ ಸಹ ಡಿಕೆ ಬ್ರದರ್ಸ್​ ವಿರುದ್ಧ ಕೆಂಡಕಾರುತ್ತಿದ್ದಾರೆ. ಇದೀಗ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ…ಕಳ್ಳನ ಮನಸ್ಸು ಹುಳ್ಳುಳ್ಳಗೆ..ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ” ಎಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ ಎಂದರು.

ಇದನ್ನೂ ಓದಿ: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ? 40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ? ಎಂದು ಪ್ರಶ್ನಿಸಿದರು.

ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು. ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್