AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಭೇಟಿ

ಇಬ್ರಾಹಿಂ ಜೆಡಿಎಸ್​ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.

Karnataka Politics: ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಭೇಟಿ
ಸಿಎಂ ಇಬ್ರಾಹಿಂ, ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: ganapathi bhat|

Updated on:Jan 28, 2022 | 5:25 PM

Share

ಬೆಂಗಳೂರು: ಹಿರಿಯ ರಾಜಕಾರಿಣಿ, ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸಿ.ಎಂ. ಇಬ್ರಾಹಿಂ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿ.ಎಂ ಇಬ್ರಾಹಿಂ ಈ ಮೊದಲು ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರುವ ಸುಳಿವು ಬಿಟ್ಟುಕೊಟ್ಟಿದ್ದರು. ಇಬ್ರಾಹಿಂ ಜೆಡಿಎಸ್​ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.

ಇಬ್ರಾಹಿಂ ನಮ್ಮವರು

ಇಂದು (ಜನವರಿ 28) ರಾಮನಗರದಲ್ಲಿ ಮಾತನಾಡಿದ್ದ ಹೆಚ್.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಅವರಿಗೆ ನಾನು ಸ್ವಾಗತ ಮಾಡುತ್ತೇನೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು.

ಪುಟ್ಟರಾಜು & ಸಿದ್ದರಾಮಯ್ಯ ಭೇಟಿ ಬಗ್ಗೆ ಗೊತ್ತಿಲ್ಲ

ಇದೇ ವೇಳೆ, ಸಿ.ಎಸ್.ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತಾರೋ ಅದನ್ನು ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು ಎಂದು ಕುಮಾರಸ್ವಾಮಿ ಹೇಳಿದ್ದರು.

ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗುತ್ತಾರೆ. ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ. ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನು ಬೆಳೆಸುವ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ಮಾಜಿ ಸಿಎಂ ತಿಳಿಸಿದ್ದರು.

ಇದನ್ನೂ ಓದಿ: ಸಿಎಂ ಇಬ್ರಾಹಿಂ ನನ್ನ ಸ್ನೇಹಿತ, ಅವರು ಕಾಂಗ್ರೆಸ್​​ನಲ್ಲಿರುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಇದನ್ನೂ ಓದಿ: ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ರಾಜಕೀಯ ಮಾಡ್ತಿದ್ದಾರೆ: ಡಿಕೆ ಬ್ರದರ್ಸ್​ಗೆ ಕುಟುಕಿದ ಹೆಚ್​ಡಿ ಕುಮಾರಸ್ವಾಮಿ

Published On - 5:25 pm, Fri, 28 January 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ