AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಭೇಟಿ

ಇಬ್ರಾಹಿಂ ಜೆಡಿಎಸ್​ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.

Karnataka Politics: ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಭೇಟಿ
ಸಿಎಂ ಇಬ್ರಾಹಿಂ, ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Jan 28, 2022 | 5:25 PM

Share

ಬೆಂಗಳೂರು: ಹಿರಿಯ ರಾಜಕಾರಿಣಿ, ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸಿ.ಎಂ. ಇಬ್ರಾಹಿಂ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿ.ಎಂ ಇಬ್ರಾಹಿಂ ಈ ಮೊದಲು ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರುವ ಸುಳಿವು ಬಿಟ್ಟುಕೊಟ್ಟಿದ್ದರು. ಇಬ್ರಾಹಿಂ ಜೆಡಿಎಸ್​ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.

ಇಬ್ರಾಹಿಂ ನಮ್ಮವರು

ಇಂದು (ಜನವರಿ 28) ರಾಮನಗರದಲ್ಲಿ ಮಾತನಾಡಿದ್ದ ಹೆಚ್.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಅವರಿಗೆ ನಾನು ಸ್ವಾಗತ ಮಾಡುತ್ತೇನೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು.

ಪುಟ್ಟರಾಜು & ಸಿದ್ದರಾಮಯ್ಯ ಭೇಟಿ ಬಗ್ಗೆ ಗೊತ್ತಿಲ್ಲ

ಇದೇ ವೇಳೆ, ಸಿ.ಎಸ್.ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತಾರೋ ಅದನ್ನು ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು ಎಂದು ಕುಮಾರಸ್ವಾಮಿ ಹೇಳಿದ್ದರು.

ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗುತ್ತಾರೆ. ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ. ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನು ಬೆಳೆಸುವ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ಮಾಜಿ ಸಿಎಂ ತಿಳಿಸಿದ್ದರು.

ಇದನ್ನೂ ಓದಿ: ಸಿಎಂ ಇಬ್ರಾಹಿಂ ನನ್ನ ಸ್ನೇಹಿತ, ಅವರು ಕಾಂಗ್ರೆಸ್​​ನಲ್ಲಿರುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಇದನ್ನೂ ಓದಿ: ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ರಾಜಕೀಯ ಮಾಡ್ತಿದ್ದಾರೆ: ಡಿಕೆ ಬ್ರದರ್ಸ್​ಗೆ ಕುಟುಕಿದ ಹೆಚ್​ಡಿ ಕುಮಾರಸ್ವಾಮಿ

Published On - 5:25 pm, Fri, 28 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ