AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಛಾಯೆ: ವಿಧಾನಸಭೆ ವಿಶೇಷ ಅಧಿವೇಶನ ಕರೆಯುವಂತೆ ಕರ್ನಾಟಕ ಸರ್ಕಾರಕ್ಕೆ ಹೆಚ್​ಡಿ ರೇವಣ್ಣ ಒತ್ತಾಯ

ಹಾಸನ ಜಿಲ್ಲೆಯ ಲೋಕಸಭಾ ಕ್ಷೇತ್ರ ಹಾಗೂ ಏಳು ವಿಧಾನಸಭಾ ಕ್ಷೇತ್ರದಗಳಲ್ಲಿ ಮಳೆಯಿಲ್ಲದೆ ಬೆಳೆ ಹಾನಿಯಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ಕೂಡಲೇ ವಿಧಾನಸಭೆ ವಿಶೇಷ ಅಧಿವೇಶನ ಕರೆದು ಬರ ಎಂದು ಅಧಿಕೃತವಾಗಿ ಘೋಷಿಸಲಿ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಒತ್ತಾಯಿಸಿದರು.

ಬರ ಛಾಯೆ: ವಿಧಾನಸಭೆ ವಿಶೇಷ ಅಧಿವೇಶನ ಕರೆಯುವಂತೆ ಕರ್ನಾಟಕ ಸರ್ಕಾರಕ್ಕೆ ಹೆಚ್​ಡಿ ರೇವಣ್ಣ ಒತ್ತಾಯ
ಮಾಜಿ ಸಚಿವ ಹೆಚ್​ ಡಿ ರೇವಣ್ಣ
ಮಂಜುನಾಥ ಕೆಬಿ
| Updated By: Rakesh Nayak Manchi|

Updated on: Sep 03, 2023 | 7:05 PM

Share

ಹಾಸನ, ಸೆ.3: ಜಿಲ್ಲೆಯ ಲೋಕಸಭಾ ಕ್ಷೇತ್ರ ಹಾಗೂ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಲ್ಲದೆ ಬೆಳೆ ಹಾನಿಯಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ಕೂಡಲೇ ವಿಧಾನಸಭೆ ವಿಶೇಷ ಅಧಿವೇಶನ ಕರೆದು ಬರ ಎಂದು ಅಧಿಕೃತವಾಗಿ ಘೋಷಿಸುವಂತೆ ಮಾಜಿ ಸಚಿವ ಹೆಚ್​ಡಿ ರೇವಣ್ಣ (H.D.Revanna) ಒತ್ತಾಯಿಸಿದರು. ಹಾಸನದಲ್ಲಿ ಮಾತನಾಡಿದ ಅವರು, ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು ಎಂದರು.

ಕಳೆದ ಒಂದೂವರೆ ತಿಂಗಳಿಂದ 16 ಟಿಎಂಸಿ ನೀರು ಬಿಟ್ಟಿದ್ದಾರೆ. ಈ ನೀರಿನಲ್ಲಿ ನಮ್ಮ ಜಿಲ್ಲೆಯ ರೈತರು ಒಂದು ಬೆಳೆ ಬೆಳೆಯುತ್ತಿದ್ದರು. ನೀರಾವರಿ ಸಲಹಾ ಸಮಿತಿ ಸಭೆ ಮಾಡದೆ ಹೇಗೆ ನೀರು ಬಿಟ್ಟಿದ್ದಾರೆ? ಬೆಂಗಳೂರಿನಲ್ಲಿ ಕುಳಿತು ನೀವು ತೀರ್ಮಾನ ಮಾಡಿದರೆ ಹೇಗೆ ಎಂದು ರೇವಣ್ಣ ಪ್ರಶ್ನಿಸಿದರು.

ಚುನಾವಣೆ ಕಾರಣಕ್ಕೆ ತಮಿಳುನಾಡಿಗೆ ನೀರು ಹರಿಸುತ್ತಿರುವ ಕರ್ನಾಟಕ ಸರ್ಕಾರ

ರಾತ್ರೋರಾತ್ರಿ ಹೇಮಾವತಿ ಜಲಾಶಯದಿಂದ ನೀರು ಬಿಡುತ್ತಿದ್ದಾರೆ. ಬಹುಶಃ ಇವರು ತಮಿಳುನಾಡಿನ ಜೊತೆ ಶಾಮೀಲು ಆಗಿದ್ದಾರೆ ಎಂದು ಆರೋಪಿಸಿದ ರೇವಣ್ಣ, ಕರ್ನಾಟಕ ಕಾಗ್ರೆಸ್ ಮತ್ತು ತಮಿಳುನಾಡಿನವರು ಇಂಡಿಯಾ ಮೈತ್ರಿಯಲ್ಲಿ ಪಾಟ್ನರ್ಸ್ ಆಗಿದ್ದಾರೆ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀರು ಬಿಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣೆ ಕಾರಣದಿಂದ ತಮಿಳುನಾಡಿಗೆ ನೀರು ಬಿಟ್ಟಿದಾರೆ ಎಂದು ಕಿಡಿಕಾರಿದ ರೇವಣ್ಣ, ಕೆಲವು ಕಡೆ ನೀರಾವರಿ ಅಚ್ಚುಕಟ್ಟು ಪ್ರದೇಶ ಇಲ್ಲದ ಕಡೆಯು ನೀರು‌ ಹರಿಯುತ್ತಿದೆ. ಹೀಗಾಗಿ ವಿಶೇಷ ಅಧಿವೇಶ ಕರೆದು ಯಾವ ನಾಲೆಗೆ ಎಷ್ಟು ನೀರು ಬಿಟ್ಟಿದ್ದಾರೆ ಅಂಕಿ ಅಂಶ ನೀಡಲಿ ಎಂದು ರೇವಣ್ಣ ಒತ್ತಾಯಿಸಿದರು.

ಇದನ್ನೂ ಓದಿ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಸುಪ್ರೀಂಕೋರ್ಟ್​​​ನ ಮೊರೆ ಹೋಗಬೇಕು; ಹೆಚ್​ಡಿ ದೇವೇಗೌಡ

ನೀರು ಬಿಟ್ಟ ಮೇಲೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ ಏನು ಪ್ರಯೋಜನ ಎಂದು ಪ್ರಶ್ನಿಸಿದ ರೇವಣ್ಣ, ನಿಯೋಗ ಕಡೆದುಕೊಂಡು ಹೋದರೆ ತಮಿಳು‌ನಾಡಿಗೆ ಬಿಟ್ಟಿರುವ ನೀರನ್ನು ವಾಪಾಸ್ ಕೊಡುತ್ತಾರಾ? ನೀರು ವಾಪಸ್ ತರೊ ಮೆಷಿನ್ ಇದೆಯಾ? ನೀರು ಬಿಟ್ಟಾದ ಮೇಲೆ ಇನ್ನೆಂತಾ ನಿಯೋಗ ಎಂದು ಅಸಮಾಧಾನ ಹೊರಹಾಕಿದರು. ಅಲ್ಲದೆ, ರಾಜ್ಯದ ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ ಎಂದರು.

ಹಾಸನ ನಿಮ್ಮ ಗ್ಯಾರಂಟಿ ‌ಮಾಡಿಕೊಂಡು ಕೂತು ನಮ್ಮ ರೈತರನ್ನು ಹಾಳುಮಾಡಬೇಡಿ. ರೈತರ ಬೆಳೆ ಹಾಳಾಗಿ ಹೋಗಿದೆ. ಹಾಗಾಗಿ ಕೂಡಲೇ ಅದಿವೇಶನ ಕರೆದು ಚರ್ಚೆ ಮಾಡಿ ಎಂದು ರೇವಣ್ಣ ಒತ್ತಾಯಿಸಿದರು. ಕಾವೇರಿ ವಿಚಾರದಲ್ಲಿ ತಮಿಳುನಾಡಿನಲ್ಲಿ ಎಲ್ಲರೂ ಒಂದಾಗಿದ್ದಾರೆ. ಕಾವೇರಿ ಕೊಳ್ಳದ ಶಾಸಕರನ್ನ ಸಭೆಗೆ ಕರೆಯದೆ ಹೇಗೆ ಸಭೆ ಮಾಡುತ್ತೀರಿ? ನಾವೂ ಆರುಬಾರಿ ಶಾಸಕರಾದವರು. ನಮ್ಮ ಅಭಿಪ್ರಾಯ ಕೂಡ ಹೇಳಬಹುದಿತ್ತು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ