AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ: ಕೆ. ಸುಧಾಕರ್

ಲೋಕಸಭಾ ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇರುವಾಗಲೆ ಮಾಜಿ ಸಚಿವ ಡಾ.ಕೆ ಸುಧಾಕರ್​ ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹೌದು ದೇವಮೂಲೆಯಾದ ಚೇಳೂರು ತಾಲೂಕಿನ ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ರಾಶ್ಚರವು, ಚಾಕವೇಲು, ಸಜ್ಜಲವಾರಪಲ್ಲಿ ನಲ್ಲಗುಟ್ಲಪಲ್ಲಿ ಗಂಗಮ್ಮ ಬೆಟ್ಟ, ಪಾಳ್ಯಾಕೆರೆ ಗ್ರಾಮಗಳಿಂದ ಇಂದು (ಫೆ.04) ಚುನಾವಣಾ ಪ್ರಚಾರ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ: ಕೆ. ಸುಧಾಕರ್
ಮಾಜಿ ಸಚಿವ ಕೆ ಸುಧಾಕರ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 04, 2024 | 10:46 PM

Share

ಚಿಕ್ಕಬಳ್ಳಾಫುರ, ಫೆಬ್ರವರಿ 04: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಮಾಜಿ ಸಚಿವ ಡಾ.ಕೆ ಸುಧಾಕರ್ (K Sudhakar)​ ಪಕ್ಷದ ಚಟುವಟಿಕೆಗಳಲ್ಲಿ ಅಷ್ಟೊಂದು ಆಕ್ಟಿವ್​ ಆಗಿ ಇರಲ್ಲಿಲ್ಲ. ಆದರೆ ಕೆ. ಸುಧಾಕರ್​ ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಅವರನ್ನು ಭೇಟಿಯಾಗಿದ್ದರು. ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ ಬಳಿಕ ಸುಧಾಕರ್​ ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಿಂಚಿನ ಸಂಚಾರ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಹೌದು ದೇವಮೂಲೆಯಾದ ಚೇಳೂರು ತಾಲೂಕಿನ ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ರಾಶ್ಚರವು, ಚಾಕವೇಲು, ಸಜ್ಜಲವಾರಪಲ್ಲಿ ನಲ್ಲಗುಟ್ಲಪಲ್ಲಿ ಗಂಗಮ್ಮ ಬೆಟ್ಟ, ಪಾಳ್ಯಾಕೆರೆ ಗ್ರಾಮಗಳಿಂದ ಇಂದು (ಫೆ.04) ಚುನಾವಣಾ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ನನ್ನ ಸ್ಪರ್ಧೆಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ. ಒಬ್ಬ ಸಂಸದ ಏನು ಮಾಡಬಹುದೆಂದು ತೋರಿಸುತ್ತೇನೆ. ಕೆ. ಸುಧಾಕರ್ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಸುಧಾಕರ್. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಮ್ಮ ಪಾತ್ರವೂ ಇದೆ. ಎಂಟಿಬಿ ನಾಗರಾಜ್, ನಾನು ರಿಸ್ಕ್ ತೆಗೆದುಕೊಂಡು ಬಿಜೆಪಿ ಸೇರಿದ್ದೆವು. ಆದರೆ, ನಮ್ಮ ತ್ಯಾಗಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯವಾಗಿದೆ. ದೇಶ ಅಭಿವೃದ್ಧಿಯಾಗಬೇಕು ಅಂದರೆ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಎಸ್​ಎ ರಾಮದಾಸ್

ಇನ್ನು ಜೆಡಿಎಸ್​ ಪ್ರಾಬಲ್ಯವಿರುವ ಕ್ಷೇತ್ರವನ್ನು ನಮ್ಮ ವರಿಷ್ಠರು ಬಿಜೆಪಿಗೆ ಬಿಟ್ಟುಕೊಟ್ಟರಾ ಎಂಬ ಗೊಂದಲ ಚಿಕ್ಕಬಳ್ಳಾಪುರ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡಿದ್ದು, ಗೊಂದಲಕ್ಕೆ ಕಾರಣವಾಗಿದೆ.

ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಸುಧಾಕರ್ ಅವರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ಪ್ರದೀಪ್ ಈಶ್ವರ್ ವಿರುದ್ಧ ಸೋಲುಕಂಡಿದ್ದಾರೆ. ಹೀಗಾಗಿ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಅಖಾಡಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ.

ಈಗಾಗಲೇ ಚಿಕ್ಕಬಳ್ಳಾಪುರದಲ್ಲಿ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡ ಇದ್ದಾರೆ. ಆದ್ರೆ, ಅವರು ಹೆಚ್ಚು ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. ಅಲ್ಲದೇ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದ ಪುತ್ರ ಶರತ್​ಗೆ ಬೆಂಬಲಿಸಿದ್ದರು ಎನ್ನುವ ಆರೋಪಗಳು ಕೇಳಿಬಂದಿದೆ. ಹೀಗಾಗಿ ಅವರಿಗೆ ಈ ಬಾರಿ ಟಿಕೆಟ್ ಕಟ್ ಆಗುವುದು ಪಕ್ಕಾ ಆಗಿದೆ. ಹೀಗಾಗಿ ತಯಾರಾಗುವಂತೆ ಸುಧಾಕರ್​ಗೆ ಸೂಚನೆಗ ಬಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ