AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ಆಯ್ಕೆ ಮಾಡಿದ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ: ಪರಮೇಶ್ವರ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಹಿಂದೂ ಕಾರ್ಯಕರ್ತರ ವಿರುದ್ಧ ವಿಚಾರಣೆ ನಡೆಸುವ ನೆಪದಲ್ಲಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದವು. ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಲೇ ಇದೆ. ರಾಮ ಜನ್ಮಭೂಮಿ ಹೋರಾಟ ಪ್ರಕರಣ ರೀಓಪನ್, ಶ್ರೀಕಾಂತ್ ಪೂಜಾರಿ ಬಂಧನ, ಬಾಬ ಬುಡನ್​ಗಿರಿ ಪ್ರಕರಣ ರೀಓಪನ್​​ ನಂತರ ಈ ಆರೋಪಗಳು ಹೆಚ್ಚಾಗತೊಡಗಿವೆ.

ಕಾಂಗ್ರೆಸ್ ಸರ್ಕಾರ ಆಯ್ಕೆ ಮಾಡಿದ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ: ಪರಮೇಶ್ವರ್
ಗೃಹಸಚಿವ ಡಾ.ಜಿ.ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Jan 05, 2024 | 10:03 AM

Share

ಬೆಂಗಳೂರು, ಜ.5: ನಮ್ಮ ಸರ್ಕಾರವನ್ನ ಜನ ಆರಿಸಿದ್ದಾರೆ. ನಮ್ಮನ್ನ ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (Dr.G.Parameshwar) ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಕ್ರೀದ್ ಹಬ್ಬದಲ್ಲಿ ಭಾಗಿಯಾಗಿದ್ದ ಪರಮೇಶ್ವರ್, ಅಲ್ಲಾನ ಕೃಪೆಯಿಂದಲೇ ಕಾಂಗ್ರೆಸ್ ಗೆದ್ದಿದೆ, ನಿಮ್ಮ ಆಶೀರ್ವಾದದಿಂದಲೇ ನಾನು ಗೃಹಮಂತ್ರಿಯಾಗಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಸ್ಲಿಂ ಮತಗಳಿಂದಲೇ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ಹೇಳುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣವನ್ನು ರೀ ಓಪನ್ ಮಾಡಿ ಕ್ರಮಕ್ಕೆ ಮುಂದಾದ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ನಾನು ಕೇಸ್ ರೀ ಓಪನ್ ಮಾಡಿಲ್ಲ. ಪೊಲೀಸ್ ಠಾಣೆಯಲ್ಲಿ ಇರುವ ಪ್ರಕರಣಗಳ ವಿರುದ್ಧ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದರೆ ರೀ ಓಪನ್ ಮಾಡಿದ್ದೀರಾ ಅಂತ ಕೇಳಿದರೆ ಹೇಗೆ? ಕೋರ್ಟ್ ಸೂಚನೆ ಕೊಟ್ಟಿದ್ದರೆ ನಾವು ಕೇಳಬಾರದಾ? ಬಿಜೆಪಿಯವರು ಕೋರ್ಟ್, ಕಾನೂನಿಗೂ ಬೆಲೆ ಕೊಡುವುದಿಲ್ಲ ಎಂದರು.

ಇದನ್ನೂ ಓದಿ: ಹಿಂದೂ ಕಾರ್ಯಕರ್ತರು ಹೆದರಿ ಮನೆಯಲ್ಲೇ ಕೂರುವ ವಾತಾವರಣ ಕಾಂಗ್ರೆಸ್ ಸರ್ಕಾರ ಸೃಷ್ಟಿಸುತ್ತಿದೆ: ಆರ್ ಅಶೋಕ, ವಿಪಕ್ಷ ನಾಯಕ

16 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯ ವಿಷಯಕ್ಕೆ ಇಷ್ಟು ದೊಡ್ಡದು ಮಾಡಿ ಇಡೀ ದೇಶದಲ್ಲಿ ದೊಡ್ಡದು ಮಾಡಲು ಹೊರಟಿದ್ದೀರಾ? ಬಿಜೆಪಿಯವರು ಅಪರಾಧಿಯನ್ನ ಬೆಂಬಲಿಸುತ್ತಿದ್ದಾರೆ. ಒಂಬತ್ತು ಸಾರಾಯಿ ಕೇಸ್ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ಆತನ ಮೇಲಿದೆ. ಅ ಲೀಸ್ಟ್​ನಲ್ಲಿ ಬೇರೆ ಹಿಂದೂಗಳು ಇದ್ದಾರೆ ಅಲ್ಲವಾ? ಎಂದು ಪರಮೇಶ್ವರ್ ಕಿಡಿಕಾರಿದ್ದಾರೆ.

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ರಾಜಕೀಯ ಚರ್ಚೆ

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಚಿವರ ಸಭೆ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ಡಿನ್ನರ್ ಮೀಟಿಂಗ್ ಇತ್ತು, ಊಟ ಮಾಡಿ ಬಂದೆ. ರಾಜಕೀಯ ಬಗ್ಗೆಯೂ ಚರ್ಚೆ ಆಗಿದೆ. ಅದನ್ನು ಬಹಿರಂಗಪಡಿಸಲು ಆಗುತ್ತಾ? ನಾವು ರಾಜಕಾರಣಿಗಳು, ರಾಜಕೀಯ ಬಗ್ಗೆ ಮಾತಾಡಿಯೇ ಇರುತ್ತೇವೆ ಎಂದರು.

ಚುನಾವಣೆ ಮೊದಲು ಚಿತ್ರದುರ್ಗದಲ್ಲಿ ಎಸ್​ಸಿ ಎಸ್​ಟಿ ಸಮಾವೇಶ ಮಾಡಿ 10 ನಿರ್ಣಯಗಳನ್ನು ತೆಗೆದುಕೊಂಡಿದ್ದೆವು. ಸರ್ಕಾರ ಬಂದಾಗ ಅದನ್ನ ಮಾಡುತ್ತೇವೆ ಅಂತ ಘೋಷಣೆ ಮಾಡಿದ್ದೆವು. ಈಗ ಸರ್ಕಾರ ಬಂದಿದೆ. ಅದನ್ನ ಜಾರಿ ಮಾಡಬೇಕು. ಅ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More