Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಇಂದು ಕಾಂಗ್ರೆಸ್​ ಸೇರಲಿರುವ ಮಾಜಿ ಎಂಎಲ್​ಎ

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಇಂದು(ಅಕ್ಟೋಬರ್ 20) ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಡುಗೊಲ್ಲ ಸಮುದಾಯದ ನಾಯಕರ ಅಸಮಾಧಾನ ನಡುವೆಯೂ ಪೂರ್ಣಿಮಾ ಕಾಂಗ್ರೆಸ್ ಸೇರುತ್ತಿದ್ದಾರೆ.

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಇಂದು ಕಾಂಗ್ರೆಸ್​ ಸೇರಲಿರುವ ಮಾಜಿ ಎಂಎಲ್​ಎ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2023 | 8:37 AM

ಬೆಂಗಳೂರು, (ಅಕ್ಟೋಬರ್, 20): ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಅವರು ಇಂದು(ಅಕ್ಟೋಬರ್ 20) ಕಾಂಗ್ರೆಸ್(Congress) ಸೇರ್ಪಡೆಯಾಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಗುಡ್​ಬೈ ಹೇಳಿ ಕೈ ಹಿಡಿಯಲಿದ್ದಾರೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಕಾಂಗ್ರೆಸ್‌ ಸೇರುತ್ತಿದ್ದಾರೆ. ಆದ್ರೆ, ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯದ ಹಲವರಿಂದ ವಿರೋಧ ವ್ಯಕ್ತವಾಗಿದೆ.

ಕಾಡುಗೊಲ್ಲ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆಯದೇ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ವಿರೋಧ ವ್ಯಕ್ತವಾಗಿವೆ. ಅಲ್ಲದೇ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ವಿರೋಧಿ ಎಂದು ಪೋಸ್ಟ್ ಗಳನ್ನು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಕಾಡುಗೊಲ್ಲ ಸಮುದಾಯದ ನಾಯಕರ ಅಸಮಾಧಾನ ನಡುವೆಯೂ ಪೂರ್ಣಿಮಾ ಕಾಂಗ್ರೆಸ್ ಸೇರುತ್ತಿದ್ದಾರೆ.

ದಂಪತಿಗಳಿಬ್ಬರ ರಾಜಕೀಯಕ್ಕೆ ಸಮುದಾಯ ಬಲಿಯಾಗುತ್ತಿದೆ. ಹಿರಿಯೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿರುವ ಕಾಡುಗೊಲ್ಲ ಸಮುದಾಯ ಕೆ ಪೂರ್ಣಿಮಾ ಶ್ರೀನಿವಾಸ್ ಅವರನ್ನ ಬೆಂಬಲಿಸಿತ್ತು. 2014ರಲ್ಲಿ ಪೂರ್ಣಿಮಾ ತಂದೆ ಎ ಕೃಷ್ಣಪ್ಪ ಅವರು ಕಾಂಗ್ರೆಸ್ ನಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅವರನ್ನು ಬೆಂಬಲಿಸಿದ್ದರು. ಆದ್ರೆ, ಎ ಕೃಷ್ಣಪ್ಪ ಅವರು ಅಕಾಲಿಕ ಮರಣ ಹೊಂದಿದ ಬಳಿಕ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ ಸಮುದಾಯದ ಒಗ್ಗಟ್ಟಾಗಿ ಬೆಂಬಲಿಸಿದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾದ ಕೆ ಪೂರ್ಣಿಮಾ 2023ರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರು. ಸೋತ ಮೂರ್ನಾಲ್ಕು ತಿಂಗಳಲ್ಲೇ ಇದೀಗ ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ. ದಂಪತಿಗಳಿಬ್ಬರು ರಾಜಕೀಯ ಅಸ್ತಿತ್ವವ ಕಂಡುಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ