Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet expansion: ಹಿರಿಯೂರು ಶಾಸಕ ಡಿ.ಸುಧಾಕರ್​ಗೆ ಎರಡನೇ ಬಾರಿ ಒಲಿದ ಮಂತ್ರಿಗಿರಿ

ಹಿರಿಯೂರು ಶಾಸಕ ಡಿ.ಸುಧಾಕರ್(D Sudhakar)​ಗೆ ಮಂತ್ರಿಗಿರಿ ಒಲಿದಿದ್ದು, ಇಂದು (ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ಬಾರಿ ಶಾಸಕರಾಗಿರುವ ಜೈನ ಸಮುದಾಯದ ಏಕೈಕ ಶಾಸಕರ ಕುರಿತು ಮಾಹಿತಿ ಇಲ್ಲಿದೆ.

Karnataka Cabinet expansion: ಹಿರಿಯೂರು ಶಾಸಕ ಡಿ.ಸುಧಾಕರ್​ಗೆ ಎರಡನೇ ಬಾರಿ ಒಲಿದ ಮಂತ್ರಿಗಿರಿ
ಡಿ ಸುಧಾಕರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:17 PM

ಚಿತ್ರದುರ್ಗ: ಹಿರಿಯೂರು ಶಾಸಕ ಡಿ.ಸುಧಾಕರ್(D Sudhakar)​ಗೆ ಮಂತ್ರಿಗಿರಿ ಒಲಿದಿದ್ದು, ಇಂದು (ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶದಲ್ಲಿ 30322 ಮತಗಳ ಅಂತದಿಂದ 2018ರಲ್ಲಿ ಮೊದಲಬಾರಿ ಬಿಜೆಪಿಯಿಂದ ಸ್ಪರ್ಧಿಸಿ 12,857 ಮತಗಳ ಅಂತರದಿಂದ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್​ರವರ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು ಜೈನ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಶಾಸಕ ಡಿ.ಸುಧಾಕರ್ ಅವರು ನಾಲ್ಕು ಬಾರಿ ಶಾಸಕರಾಗಿದ್ದವರು. ಇವರು 2008ರಲ್ಲಿ ಪಕ್ಷೇತರರಾಗಿ ಗೆದ್ದು ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಇಂದು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್​ ಆಪ್ತ ಆಗಿರುವ ಕಾರಣ ಉತ್ತಮ ಖಾತೆಯ ನಿರೀಕ್ಷೆಯಿದೆ ಎಂದಿದ್ದಾರೆ.

ಡಿ.ಸುಧಾಕರ್​ ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಕ್ತಿ ಪ್ರದರ್ಶನ ಮಾಡಿದ್ದ ಬೆಂಬಲಿಗರು

ನಾಲ್ಕು ಬಾರಿ ಶಾಸಕರಾಗಿರುವ ಜೈನ ಸಮುದಾಯದ ಏಕೈಕ ಪ್ರತಿನಿಧಿ ಡಿ.ಸುಧಾಕರ್​ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಇದೇ ಮೇ.24 ರಂದು ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮನೆಗಳ ಎದುರು ಬ್ಲಾಕ್​ ಕಾಂಗ್ರೆಸ್​ನ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ:ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ; ಸಚಿವ ಸ್ಥಾನ ದಕ್ಕಿದ ದಿನವೇ ಅಜ್ಜಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಇನ್ನು ಈ ವೇಳೆ ಮಾತನಾಡಿದ್ದ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್​ ‘ನಾವು ಸುಧಾಕರ್​ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿಲ್ಲ. ಬದಲಿಗೆ ಪಕ್ಷದ ವರಿಷ್ಟರಿಗೆ ಸಚಿವ ಸ್ಥಾನ ನೀಡಬೇಕಿರುವ ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಬೇಕು. 2018ರಿಂದ ಜಿಲ್ಲೆಯಲ್ಲಿ ಕೇವಲ ಒಬ್ಬರೆ ಶಾಸಕರಾಗಿದ್ದರು, ಈ ಬಾರಿ ಐದು ಜನ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಿಸಿದ ಸುಧಾಕರ್​ ಅವರು ಇದಕ್ಕೆ ಅರ್ಹರು, ಪಕ್ಷ ಈ ವಿಷಯವನ್ನ ಗಂಭೀರವಾಗಿ ಪರಿಗಣಿಸಬೇಕೆಂದಿದ್ದರು. ಅದರಂತೆ ಪಕ್ಷ ಇದೀಗ ಇವರಿಗೆ ಸಚಿವ ಸ್ಥಾನ ನೀಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Sat, 27 May 23

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ