AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ಪಂಗಡಗಳ ಜನರಿಗೆ ಉಚಿತ ಪೌಷ್ಟಿಕ ಆಹಾರ, ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

ವಿಧಾನಸೌಧದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಸಭೆ ಮುಕ್ತಾಯ ಬಳಿಕ ಸಚಿವ H​.K.ಪಾಟೀಲ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಬುಡಕಟ್ಟು ಪಂಗಡಗಳಿಗೆ ಪೌಷ್ಟಿಕ ಆಹಾರ ಉಚಿತವಾಗಿ ಸರಬರಾಜು ಮಾಡುವ 120 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಕ್ಕೆ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬುಡಕಟ್ಟು ಪಂಗಡಗಳ ಜನರಿಗೆ ಉಚಿತ ಪೌಷ್ಟಿಕ ಆಹಾರ, ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ
ಸಚಿವ H​.K.ಪಾಟೀಲ್
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 21, 2023 | 9:20 PM

ಬೆಂಗಳೂರು, ಡಿಸೆಂಬರ್​ 21: ಬುಡಕಟ್ಟು ಪಂಗಡಗಳಿಗೆ (tribal people) ಪೌಷ್ಟಿಕ ಆಹಾರ ಉಚಿತವಾಗಿ ಸರಬರಾಜು ಮಾಡುವ 120 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಕ್ಕೆ ಸಂಪುಟ ಅನುಮೋದಿಸಿದೆ ಎಂದು ಸಚಿವ H​.K.ಪಾಟೀಲ್​ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನು ಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ 12 ತಿಂಗಳು ಪೌಷ್ಟಿಕ ಆಹಾರ ಉಚಿತವಾಗಿ ಪೂರೈಕೆ ಮಾಡಲಾಗುವುದು.

ಕೋವಿಡ್ ಸೋಂಕು ನಿಯಂತ್ರಣಕ್ಕೆ ಕ್ರಮ

ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯ ಕಾರ್ಯಯೋಜನೆ ಹಮ್ಮಿಕೊಳ್ಳಲು ಸಚಿವ ಸಂಪುಟ ಉಪಸಮಿತಿ ರಚಿಸಲು ನಿರ್ಧಾರ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಎರಡು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ನಗರದಲ್ಲಿ 136 ಸಂಚಾರಿ ಸಿಗ್ನಲ್ ವ್ಯವಸ್ಥೆ ಉನ್ನತೀಕರಿಸಲು ಮತ್ತು ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣ ಅಳವಡಿಸಿ ಸಿಂಕ್ರೋನೈಸೇಶನ್ ಮಾಡಲು ಹಾಗೂ 165 ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣ ಘಟಕಗಳನ್ನು 5 ವರ್ಷ ಅವಧಿಗೆ ನಿರ್ವಹಿಸುವ ಕಾಮಗಾರಿ ಒಟ್ಟು 58.54 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡದೆ ಎಂದು ಕಾನೂನು ಸಚಿವ H​.K.ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಇಬ್ರಾಹಿಂ

ವಿವಿಧ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿರುವ ಲ್ಯಾಬ್‌ಗಳಿಗೆ ಅಗತ್ಯವಿರುವ ರಾಸಾಯನಿಕಗಳು, ಕಂಪ್ಯೂಟರ್ ರೇಡಿಯಾಗ್ರಫಿ ಸಿಸ್ಟಂಗಳಿಗೆ ಡ್ರೈಲೇಸರ್ ಎಕ್ಸ್​​ರೇಗಳನ್ನು 50.15 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯಕವಿರುವ ಒಟ್ಟು 449 ಸಿಬ್ಬಂದಿ ಸೇವೆಯನ್ನು 11.30 ಕೋಟಿ ರೂ. ಮೊತ್ತದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಆಡಳಿತಾತ್ಮಕ ಅನುಮೋದಿಸಿದೆ. ಕಾನೂನು ಮತ್ತು ನೀತಿ-2023ಕ್ಕೆ ಅನುಮೋದನೆ ನೀಡಲಾಗಿದ್ದು, ಸಂಪುಟ ಉಪಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯಗೆ ಅಧಿಕಾರ ನೀಡಲಾಗಿದೆ. ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು 2023ಕ್ಕೆ ಅನುಮೋದಿಸಲಾಗಿದೆ.

ಸರ್ಕಾರಿ ಬಸ್‌ಗಳ ಕಾರ್ಯಾಚರಣೆಗೆ ಅನುಮೋದನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 450, ಕೆಎಸ್‌ಆರ್‌ಟಿಸಿಯಿಂದ 300 ಸರ್ಕಾರಿ ಬಸ್‌ಗಳ ಕಾರ್ಯಾಚರಣೆಗೆ ಸಚಿವ ಸಂಪುಟ ಅನುಮೋದಿಸಿದೆ.

ಇದನ್ನೂ ಓದಿ: ಕಲಾಪಕ್ಕೆ ಅಡ್ಡಿ: ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು

ಮೈಸೂರು ನಗರದಲ್ಲಿ ಅಂಬೇಡ್ಕರ್ ಭವನದ ಬಾಕಿ ಇರುವ ಕಾಮಗಾರಿ ಮುಡಾ ವತಿಯಿಂದ ಅಭಿವೃದ್ಧಿ, ನಗರ ಸಾರಿಗೆ ನಿಧಿಯಡಿ ಮಂಜೂರು ಮಾಡಿರುವ ಅನುದಾನದಿಂದ ಬಿಎಂಟಿಸಿ ಅನುಮೋದಿತ 20 ಎಲೆಕ್ಟ್ರಿಕ್ ಮಿನಿ ಬಸ್ ಖರೀದಿಸುವ ಬದಲಾಗಿ 20 ಎಸಿ ರಹಿತ ಎಲೆಕ್ಟ್ರಿಕ್ ಬಸ್​ಗಳನ್ನು ಜಿಸಿಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದಿಸಲಾಗಿದೆ.

ಕರ್ನಾಟಕ ನೀರಾವರಿ ನಿಗಮದ ವ್ಯಾಪ್ತಿ ಮತ್ತು ಆಡಳಿತ ನಿಯಂತ್ರಣದಲ್ಲಿರುವ ಕೆಲವು ಯೋಜನೆಗಳು ಕಾಮಗಾರಿಗಳ ಆಸ್ತಿ ಮತ್ತು ಹೊಣೆಗಾರಿಕೆಯನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ವರ್ಗಾಯಿಸಲು ಅನುಮೋದಿಸಲಾಗಿದೆ.

ಕರ್ನಾಟಕ ನೀರಾವರಿ ಕರ ವಿಧಿಸುವ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದ್ದು, ವಾಣಿಜ್ಯೋದ್ಯಮಗಳಿಗೆ ಕೆರೆ ಕಾಲುವೆ ಜಲಾಶಯಗಳಿಂದ ನೀರು ಒದಗಿಸುವುದಕ್ಕೆ ಪ್ರತಿ ಎಂಸಿಎಫ್​ಟಿ ನೀರಿಗೆ ಮೂರು ಲಕ್ಷ ರಾಜಧನ ನಿಗದಿ ಮಾಡಲಾಗಿದೆ. 2024 ರ ಫೆಬ್ರವರಿ ತಿಂಗಳಲ್ಲಿ ವಿಧಾನ ಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ.

ಸಂಸದೀಯ ಇಲಾಖೆ ಕಾರ್ಯದರ್ಶಿ ಜಿ. ಶ್ರೀಧರ್ ನಿವೃತ್ತಿ ಹಿನ್ನಲೆ ಹೊರಗುತ್ತಿಗೆಯಡಿ ಎರಡು ವರ್ಷಗಳ ಅವಧಿಗೆ ಸೇವೆ ಮುಂದುವರಿಸಲು, ಬಿಬಿಎಂಪಿ ಬಾಕಿ ತೆರಿಗೆ ಸಂಗ್ರಹಕ್ಕೆ ಇದ್ದ ಒನ್ ಟೈ ಸೆಟಲ್ ಮೆಂಟ್ ಅವಧಿ ವಿಸ್ತರಣೆಗೆ ಒಪ್ಪಿಗೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Thu, 21 December 23

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ