AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ಮುಂದಾಗಿದ್ದು, ನಗರದ ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. ಜತೆಗೆ ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್
ಗಂಗಾಧರ​ ಬ. ಸಾಬೋಜಿ
|

Updated on:Jun 16, 2023 | 4:04 PM

Share

ಬೆಂಗಳೂರು: ನಗರದಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ (G Parameshwara) ಹೇಳಿದರು. ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.

ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರು ಬರಬಾರದು

ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್​​ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು. ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಹೇಳಿದರು.

ಇದನ್ನೂ ಓದಿ: ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ

ಮೂರು ತಿಂಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಟ್ರಾಫಿಕ್ ವಿಚಾರವಾಗಿ ಮಾತನಾಡಿ, ಬೆಂಗಳೂರು ಟ್ರಾಫಿಕ್​ ಕೆಟ್ಟದ್ದು ಎಂಬ ವಿಚಾರ ಇದೆ. ಈ ಅಪಕೀರ್ತಿ ತೆಗೆದುಹಾಕಬೇಕೆಂದು ನಿರ್ಧಾರ ಮಾಡಿದ್ದೇವೆ. ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಟ್ರಾಫಿಕ್​ನ ಸಿಬ್ಬಂದಿಗಳಿಂದ ಹಿರಿಯ ಅಧಿಕಾರಿಗಳು ಫೀಲ್ಡ್​​ನಲ್ಲಿರಬೇಕು. ಬೆಳಿಗ್ಗೆ 2 ಗಂಟೆ, ಸಂಜೆ 2 ಗಂಟೆ ಫೀಲ್ಡ್​​ನಲ್ಲಿರಬೇಕು. ದೂರು ಬಂದ ಏರಿಯಾದ ಡಿಸಿಪಿರವರೇ ರೆಸ್ಪಾಂಡ್ ತೆಗೆದುಕೊಳ್ಳಬೇಕು.

ಠಾಣೆಯಿಂದಲೂ ಸಹ ಅಡಿಷನಲ್ ಸಿಬ್ಬಂದಿಗಳನ್ನು ಸಪ್ಲಿಮೆಂಟ್ ಮಾಡಲಾಗುವುದು. ಸಿವಿಲ್​ ನಂ 10 ಸಿಬ್ಬಂದಿಗಳನ್ನು ನೀಡಲಾಗುತ್ತೆ. ಇನ್ನು ಮೂರು ತಿಂಗಳಲ್ಲಿ ಟ್ರಾಫಿಕ್ ದೂರು ಇರಬಾರದು. ಬೆಂಗಳೂರು ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಬೇಕು ಮತ್ತು ಆ ಕಳಂಕ ಹೊಗಬೇಕು ಎಂದರು.

ಇದನ್ನೂ ಓದಿ: 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ

ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಇತ್ತು

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಸರ್ಕಾರ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಕಾನೂನು ವಿರುದ್ಧದ ಕೆಲವೊಂದು ಮುನ್ನಡೆಗಳು ಇತ್ತು. ಸಾಂವಿಧಾನಿಕವಾಗಿ ಎನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇವೆ. ಈ ಹಿಂದೆಯೂ ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಇತ್ತು ಎಂದರು.

ಇಬ್ಬರು ಆರೋಪಿಗಳು ಅರೆಸ್ಟ್, ಮತ್ತೋರ್ವನಿಗಾಗಿ ಹುಡುಕಾಟ

ಮರಳು ಸಾಗಣೆ ಟ್ರ್ಯಾಕ್ಟರ್​ ಹರಿಸಿ ಹೆಡ್​ ಕಾನ್ಸ್​ಟೇಬಲ್​ ಹತ್ಯೆ ವಿಚಾರವಾಗಿ ಮಾತನಾಡಿ, ಈಗಾಗಲೇ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಭೀಮಾತೀರದಲ್ಲಿ ಮೊದಲಿನಿಂದಲೂ ಈ ದಂಧೆ ನಡೆಯುತ್ತಿದೆ. ಡಿಸಿ ಸಹಕಾರದೊಂದಿಗೆ ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Fri, 16 June 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ