AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ: ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್​

ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಆಡಳಿತ ವ್ಯವಸ್ಥೆ ಹಾಗೂ ಬೇರೆ ಬೇರೆ ಕಾರಣಗಳಿಂದ ವೇತನ ನಿಲ್ಲಿಸಲಾಗುತ್ತಿದೆ. ನೌಕರರ ಸಂಬಳ‌ ತಡೆದು ಗ್ಯಾರಂಟಿ ಯೋಜನೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ: ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್​
ಗೃಹ ಸಚಿವ ಡಾ.ಜಿ.ಪರಮೇಶ್ವರ್
ಹರೀಶ್ ಜಿ.ಆರ್​.
| Edited By: |

Updated on:Aug 03, 2023 | 3:59 PM

Share

ದೆಹಲಿ, ಆಗಸ್ಟ್​ 03: ಆಡಳಿತ ವ್ಯವಸ್ಥೆ ಹಾಗೂ ಬೇರೆ ಬೇರೆ ಕಾರಣಗಳಿಂದ ವೇತನ ನಿಲ್ಲಿಸಲಾಗುತ್ತಿದೆ. ನೌಕರರ ಸಂಬಳ‌ ತಡೆದು ಗ್ಯಾರಂಟಿ ಯೋಜನೆ ನೀಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಹೇಳಿದರು. ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೋ ಕಾರಣಕ್ಕೆ ಯಾದಗಿರಿ ಎಸ್​ಪಿ ಸಂಬಳ ನಿಲ್ಲಿಸಿರಬಹುದು ಎಂದಿದ್ದಾರೆ.

ಗ್ಯಾರಂಟಿ ಯೋಜನೆಗೆ ಬೇಕಾದ ಹಣವನ್ನು ಬಜೆಟ್​ನಲ್ಲಿ ಇಟ್ಟಿದ್ದಾರೆ. ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ. ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ. ಸ್ಥಳೀಯ ಶಾಸಕರು, ನಾಯಕರಿಂದಲೂ ಕೆಲವು ಆಕ್ಷೇಪ ಬಂದಿತ್ತು. ಹೀಗಾಗಿ ತಡೆಹಿಡಿಯಲಾಗಿದೆ. ಎಚ್ಚರಿಕೆಯಿಂದ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಆಡಳಿತವೆಂಬುದು ತಮಾಷೆಯಾಗಿದೆ; ಬಿಜೆಪಿ ವ್ಯಂಗ್ಯ, ಕಾರಣ ಇಲ್ಲಿದೆ

ಸಚಿವ ನಿತಿನ್​​ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸಚಿವ ನಿತಿನ್​​ ಗಡ್ಕರಿ ಅವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದು, ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ ವೇ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದಾರೆ. ಅಪಘಾತ ಪ್ರಕರಣ ಹೆಚ್ಚಳ ಕುರಿತು ಮಾಹಿತಿ ನೀಡಿದ್ದಾರೆ. ಶಿರಾಡಿಘಾಟ್​ ಸುರಂಗ ಮಾರ್ಗ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, ಹೆದ್ದಾರಿಯಲ್ಲಿನ ಲೋಪ ದೋಷ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Siddaramaiah Meets PM Modi: ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ, ಇಲ್ಲಿವೆ ಫೋಟೋಸ್

ತುಂಗಭದ್ರಾ ನದಿ ನೀರು ಬಿಡಲು ಮನವಿ ಮಾಡಲಾಗಿದೆ: ಡಿ.ಕೆ.ಶಿವಕುಮಾರ್​

ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಮಾತನಾಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಭದ್ರಾ ನದಿಗೆ ನೀರು ಬಿಡುವಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಮಾಡುತ್ತಿದ್ದಾರೆ. ತುಂಗಭದ್ರಾ ಸಲಹಾ ಸಮಿತಿ ಅಧ್ಯಕ್ಷರಾಗಿ ಶಿವರಾಜ ತಂಗಡಗಿ ಆಯ್ಕೆ ಬಗ್ಗೆ ಆದೇಶ ಹೊರಡಿಸಲಿದ್ದೇವೆ ಎಂದರು.

ಜಲಾಶಯದಿಂದ 5,500 ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ. ಸರ್ಕಾರ ನೀರು ಬಿಡಲು ಆರಂಭಿಕ ಅನುಮತಿಯನ್ನು ನೀಡಿದೆ. ಮುಂದಿನ ಹಂತದಲ್ಲಿ ಚರ್ಚಿಸಿ ನೀರು ಬಿಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:48 pm, Thu, 3 August 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು