AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಸಂಸ್ಕೃತಿ ಶುರುವಾಗಿದ್ದೆ ಕಾಂಗ್ರೆಸ್​​ನಿಂದ, ಕಾಂಗ್ರೆಸ್ ಟ್ವೀಟ್​ಗೆ ಸಿಎಂ ಬೊಮ್ಮಾಯಿ ಟಾಂಗ್

ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಕಾಂಗ್ರೆಸ್ ನಾಯಕ ದಿನೇಶ ಗುಂಡುರಾವ್ ಮಾಡಿದ ಸರಣಿ ಟ್ವಿಟ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಎಲ್ಲ ಸಂಸ್ಕೃತಿ ಶುರುವಾಗಿದ್ದೆ ಕಾಂಗ್ರೆಸ್​​ನಿಂದ, ಕಾಂಗ್ರೆಸ್ ಟ್ವೀಟ್​ಗೆ ಸಿಎಂ ಬೊಮ್ಮಾಯಿ ಟಾಂಗ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡು ರಾವ್
TV9 Web
| Edited By: Rakesh Nayak Manchi|

Updated on:Jan 12, 2023 | 2:40 PM

Share

ಹುಬ್ಬಳ್ಳಿ: ಸ್ಯಾಂಟ್ರೋ ರವಿ (Santro Ravi) ಬಿಜೆಪಿ ಕಾರ್ಯಕರ್ತ ಹೌದು ಅಲ್ವಾ ಅನ್ನೋದನ್ನು ಪರಿಶೀಲನೆ ಮಾಡಲು ಹೇಳಿದ್ದೇನೆ. ಕಾಂಗ್ರೆಸ್​ನಲ್ಲಿ ಎಂಥವರು ಇದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇತಂಹ ಸಂಸ್ಕೃತಿ ಆರಂಭವಾಗಿದ್ದೆ ಕಾಂಗ್ರೆಸ್ ನಿಂದ ಎಂದು ಹೇಳುವ ಮೂಲಕ ಕಾಂಗ್ರೆಸ್ ಟ್ವೀಟ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಕಾಂಗ್ರೆಸ್ ನಾಯಕ ದಿನೇಶ ಗುಂಡುರಾವ್ (Dinesh Gundu Rao) ಮಾಡಿದ ಸರಣಿ ಟ್ವಿಟ್ ಮಾಡಿದ್ದರು.

ದಿನೇಶ್ ಗುಂಡೂರಾವ್ ಟ್ವೀಟ್ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅಂತಹ ತಲೆಹಿಡುಕರು ಕಾಂಗ್ರೆಸ್​​ನಲ್ಲಿ ಮಾತ್ರ ಇರಲು ಸಾಧ್ಯ ಎಂದರಲ್ಲದೆ, ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಗೊತ್ತಿಲ್ಲ. ನಾನು ವಿಮಾನದಲ್ಲಿದ್ದೆ ಎಂದರು. ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ಹೋಗಿದೆ. ಹೀಗಾಗಿ ಅವರು (ಕಾಂಗ್ರೆಸ್) ಹತಾಶರಾಗಿದ್ದಾರೆ. ಅದಕ್ಕೆ ಉಚಿತ ಯೋಜನೆಗಳ ಬಗ್ಗೆ ಹೇಳುತ್ತಿದ್ದಾರೆ. ಕಾಂಗ್ರೆಸ್​ನವರು ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದರು.

ಇದನ್ನೂ ಓದಿ: ಎಸ್​ಸಿ ಎಸ್​ಟಿ ಮತಬೇಟೆಗೆ ಇಳಿದ ಕಾಂಗ್ರೆಸ್, ಎರಡು ಎಕರೆ ಜಮೀನು ನೀಡಲು ಪ್ಲಾನ್

ಯುವಜನೋತ್ಸವ ಸಮಾರಂಭಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಯುವಕರಿಂದ ದೇಶ ಕಟ್ಟಬಹುದು. ಯುವಕರಿಗೆ ಕೌಶಲ ತರಬೇತಿ ನೀಡಿದರೆ ದೇಶ ಕಟ್ಟಬಹುದು. ನೂತನ ಶಿಕ್ಷಣ ನೀತಿಯಿಂದ ಮೂರೇ ವರ್ಷದಲ್ಲಿ ಎರಡು ಪದವಿ ತೆಗೆದುಕೊಳ್ಳಬಹುದು. ಯುವಕರಿಗೆ ಮುದ್ರಾ ಯೋಜನೆ. ಖೇಲೋ ಇಂಡಿಯಾ ಸೇರಿದಂತೆ ಇತರೆ ಯೋಜನೆ ಜಾರಿಗೊಳಿಸಿದ್ದಾರೆ. ಮೋದಿಯವರು ಬರುತ್ತಿರುವುದರಿಂದ ಯುವಕರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದರು.

ಕಾಂಗ್ರೆಸ್ ಟ್ವೀಟ್​​ನಲ್ಲಿ ಏನಿದೆ?

ಸ್ಯಾಂಟ್ರೋ ರವಿ ವಿಚಾರ ಮುಂದಿಟ್ಟು ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಸರಣಿ ಟ್ವೀಟ್ ಮಾಡಿದ್ದಾರೆ. ನಾನು BJP ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು BJPಯಲ್ಲಿ ಮಾತ್ರ ಇರಲು ಸಾಧ್ಯ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ BJP ತುಂಬಿ ತುಳುಕುತ್ತಿದೆ. ಇಂತಹ ಭಂಡ BJPಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ.

ಸ್ಯಾಂಟ್ರೋ ರವಿಯಂತಹ ಪಿಂಪ್‌ BJP ಕಾರ್ಯಕರ್ತ, ಮತ್ತೊಂದು ಕಡೆ‌ ನಟೋರಿಯಸ್ ರೌಡಿ‌ ಶೀಟರ್‌ಗಳನ್ನು, ಪೋಲಿ‌ ಪುಡಾರಿಗಳನ್ನು BJPಯವರೇ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. BJPಯವರು ನೈತಿಕತೆಯ ಬಗ್ಗೆ‌ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. BJPಗೆ ಜನ ‘ಬ್ಲ್ಯೂ’ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ? ಎಂದು ಪ್ರಶ್ನಿಸಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ಧ FIR ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ. ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ BJPಯವರಿಗೆ ಅವನು ಸಲ್ಲಿಸಿದ ‘ಸೇವೆ’ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ? ಸ್ಯಾಂಟ್ರೋ ರವಿ ಬಂಧನ ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ವರದಿ: ವೀರೇಶ್ ದಾನಿ, ಟಿವಿ9 ಹುಬ್ಬಳ್ಳಿ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 12 January 23

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ