AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆ ಬಿಜೆಪಿ ಸೋಲಿಗೆ ಕಾರಣವೇನು? ಶಾಸಕ ಅರವಿಂದ್ ಬೆಲ್ಲದ್ ಸ್ಫೋಟಕ ಆಡಿಯೋ ವೈರಲ್

ವಿಧಾನಸಭೆ ಚುನಾವಣೆಯಲ್ಲಿ ಸೋಲಿಕೆ ಕಾರಣವೇನೆಂದು ಬಿಜೆಪಿ ನಾಯಕರು ಹುಡುಕುತ್ತಿದ್ದಾರೆ. ಕೆಲ ನಾಯಕರು ನಾನಾ ಕಾರಣಗಳು ಹೇಳುತ್ತಿದ್ದಾರೆ. ಇನ್ನು ಇದೇ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಆಡಿಯೋ ವೈರಲ್ ಆಗಿದೆ.

ವಿಧಾನಸಭಾ ಚುನಾವಣೆ ಬಿಜೆಪಿ ಸೋಲಿಗೆ ಕಾರಣವೇನು? ಶಾಸಕ ಅರವಿಂದ್ ಬೆಲ್ಲದ್ ಸ್ಫೋಟಕ ಆಡಿಯೋ ವೈರಲ್
ಬಿಜೆಪಿ ಶಾಸಕ ಅರವಿಂದ ಬೆಲ್ಲದ್Image Credit source: deccanherald.com
Follow us
Shivaraj
| Updated By: ರಮೇಶ್ ಬಿ. ಜವಳಗೇರಾ

Updated on: Jun 28, 2023 | 1:55 PM

ಹುಬ್ಬಳ್ಳಿ: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2o023) ಸೋಲಿನ ಬಳಿಕ ಬಿಜೆಪಿ(BJP) ಮನೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸೋಲಿನ ಆತ್ಮಾವಲೋಕನ ಮಾಡಿಕೊಳ್ಳುತ್ತಿರುವ ಕೇಸರಿ ಮನೆಯಲ್ಲಿ ಹೊಂದಾಣಿಕೆಯ ಬೆಂಕಿ ಭುಗಿಲೆದ್ದಿದೆ. ಕಳೆದ ವಾರ ಸಂಸದ ಪ್ರತಾಪ್ ಸಿಂಹ ಸಿಡಿಸಿದ್ದ ಹೊಂದಾಣಿಕೆ ಕಿಡಿ, ಈಗಲೂ, ಈ ಕ್ಷಣಕ್ಕೂ ಕಮಲ ಮನೆಯನ್ನ ಸುಡುತ್ತಿದೆ. ನಮ್ಮನವರೇ ನಮ್ಮನ್ನು ಸೋಲಿಸಿದ್ದಾರೆ ಎನ್ನುವ ಮಾತುಗಳು ಬಿಜೆಪಿಯಲ್ಲಿ ಹರಿದಾಡುತ್ತಿವೆ. ಇದಕ್ಕೆ ಶಾಸಕ ಅರವಿಂದ ಬೆಲ್ಲದ್ (Arvind Bellad,) ಧ್ವನಿಗೂಡಿಸಿದ್ದಾರೆ. ಜನ ನಮ್ಮನ್ನು ಮನೆಗೆ ಕಳಿಸಿಲ್ಲ, ನಮ್ಮ ಪಕ್ಷದವರೇ ಮನೆಗೆ ಕಳಿಸಿದ್ದಾರೆ ಎಂದು ಅರವಿಂದ ಬೆಲ್ಲದ್, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ; ಪಕ್ಷದ ಘನತೆಗೆ ಧಕ್ಕೆ ತರುವಂಥ ಹೇಳಿಕೆ ನೀಡದಂತೆ ನಳಿನ್ ಕುಮಾರ್ ಕಟೀಲ್ ಸೂಚನೆ

ಜನ ನಮ್ಮನ್ನು ಮನೆಗೆ ಕಳಿಸಿಲ್ಲ, ನಮ್ಮ ಪಕ್ಷದವರೇ ಮನೆಗೆ ಕಳಿಸಿದ್ದಾರೆ. ಅಧಿಕಾರದಲ್ಲಿದ್ದಾಗ ಕಾರ್ಯಕರ್ತರಿಗೆ ತೃಪ್ತಿ ಆಗುವ ಕೆಲಸ ಮಾಡಿಲ್ಲ.vಕೆಲವರು ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದಕ್ಕೆ ಸೋಲಾಯ್ತು ಅಂತಾರೆ‌. ಮುಸ್ಲಿಮರು ಯಾವಾಗ ಬಿಜೆಪಿಗೆ ವೋಟ್ ಹಾಕಿದ್ದಾರೆ? ಯಾಕೆ ಸೀಟ್ ಕಳೆದುಕೊಂಡೆವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ‌ ಇಲ್ಲ. ಕ್ರೈಸ್ತರು, ಮುಸ್ಲಿಮರು ಎಲ್ಲರೂ ಒಂದೇ ಎಂದು ಮತಾಂತರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಮುಸ್ಲಿಮರು, ಕ್ರೈಸ್ತ ಧರ್ಮದವರು ನಮಗೆ ಜಾತಿ‌ ಇಲ್ಲ ಅಂತಾರೆ. ಕಾನೂನು, ಸಂವಿಧಾನದ ವಿರುದ್ಧವಾಗಿ ಮೀಸಲಾತಿ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್, JDS ಸರ್ಕಾರ ಅವರಿಗೆ ಶೇ. 23ರಷ್ಟು ಮೀಸಲಾತಿ ಕೊಟ್ರು. ಇದನ್ನು ಸರಿಪಡಿಸುವ ಕೆಲಸ ನಾವು ಮಾಡಿದ್ವಿ. RSS ಸಲುವಾಗಿ ಮುಸ್ಲಿಮರು ಒಂದಾದರು ಎಂದು ಕೆಲವರು ಹೇಳುತ್ತಾರೆ. ಮುಸ್ಲಿಂ ಸಮಾಜದವರು ಯಾವಾಗಲೂ ಒಗ್ಗಟ್ಟಾಗಿದ್ದಾರೆ. ಎಸ್​​ಟಿ ಮೀಸಲು 16 ಕ್ಷೇತ್ರಗಳಲ್ಲಿ ನಾವು ಸೋತಿದ್ದೇವೆ ಎಂದಿದ್ದಾರೆ.

ಬೇರೆ ಸಮಾಜದವರನ್ನು ಕಡೆಗಣಿಸಿರುವುದೇ ಸೋಲಿಗೆ ಕಾರಣ. ಕೇವಲ ಎಸ್​​ಟಿ ಸಮಾಜದ ವೋಟ್​ನಿಂದ ಶಾಸಕ, ಸಚಿವರು ಆಗಲ್ಲ. ಕ್ಷೇತ್ರದಲ್ಲಿ ಎಲ್ಲರನ್ನು ಎಸ್​ಟಿ ಸಮಾಜದ ಅಧಿಕಾರಿಗಳನ್ನು ಹಾಕುತ್ತಾರೆ. ಎಸ್​​ಟಿ ಮೀಸಲು ಕ್ಷೇತ್ರಗಳಲ್ಲಿ ಇದೇ ನಮ್ಮ ಸೋಲಿಗೆ ಕಾರಣವಾಗಿದೆ ಎಂದು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ ಎನ್ನಲಾದ ಅರವಿಮದ್ ಬೆಲ್ಲದ್ ಅವರ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು