AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹು-ಧಾ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ: ಬಿಜೆಪಿಗೆ 1 ಮತ ಪ್ಲಸ್-ಕಾಂಗ್ರೆಸ್‌ಗೆ ಬಿಗ್ ಶಾಕ್

ಜಿದ್ದಾಜಿದ್ದಿಯಿಂದ ಕೂಡಿರುವ ಹುಬ್ಬಳ್ಳಿ-ಧಾರವಾಡ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್​ ಆರಂಭಿಕ ಆಘಾತವಾಗಿದೆ.

ಹು-ಧಾ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ: ಬಿಜೆಪಿಗೆ 1 ಮತ ಪ್ಲಸ್-ಕಾಂಗ್ರೆಸ್‌ಗೆ ಬಿಗ್ ಶಾಕ್
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
ರಮೇಶ್ ಬಿ. ಜವಳಗೇರಾ
|

Updated on: Jun 20, 2023 | 9:27 AM

Share

ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (hubballi dharwad municipal corporation ) ಮೇಯರ್ ಹಾಗೂ ಉಪಮೇಯರ್ ಚುನಾವಣೆ ಇಂದು(ಜೂನ್ 20) ನಡೆಯಲಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರ ಕಸರತ್ತು ನಡೆಸಿವೆ. ಎರಡು ಪಕ್ಷಗಳ ನಾಯಕರು ಈ ಚುನಾವಣೆಯನ್ನು ಜಿದ್ದಿಗೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದೊಂದು ಮತವು ಸಹ ಈಗ ಬಹುಳ ಮುಖ್ಯವಾಗಿದೆ. ಇದರ ಮಧ್ಯೆ ಕಾಂಗ್ರೆಸ್​ಗೆ ಒಂದು ಬಿಗ್​ ಶಾಕ್ ಆಗಿದೆ. ಹೌದು… ಹು-ಧಾ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಯ ಜನಪ್ರತಿನಿಧಿಗಳ ಮತದಲ್ಲಿ ಕಾಂಗ್ರೆಸ್​ ಒಂದು ಮತ ಕಳೆದುಕೊಂಡಿದೆ. ಇದರಿಂದ ಬಿಜೆಪಿಗೆ ಒಂದು ಮತ ಪ್ಲಸ್ ಆಗಿದೆ.

ಇದನ್ನೂ ಓದಿ: ಹು-ಧಾ ಮೇಯರ್-ಉಪಮೇಯರ್ ಗದ್ದುಗೆಗಾಗಿ ಕೈ, ಕಮಲ ಕಸರತ್ತು, ಬಿಜೆಪಿಗೆ ಅಡ್ಡಮತದಾನದ ಭೀತಿ

ಮತದಾನದ ಹಕ್ಕು ಪಡೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಇಬ್ಬರು ಜನಪ್ರತಿನಿಧಿಗಳು ಕೋರ್ಟ್ ಮೊರೆ ಹೋಗಿದ್ದರು. ಈ ಪೈಕಿ ಕಾಂಗ್ರೆಸ್​ಗೆ ಹಿನ್ನಡೆಯಾಗಿದೆ. ಧಾರವಾಡ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಅವರಿಗೆ ಹುಬ್ಬಳ್ಳಿ ಧಾರವಾಡ ಮೇಯರ್-ಉಪಮೇಯರ್​ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಸಿಕ್ಕಿಲ್ಲ. ಬದಲಾಗಿ ಬಿಜೆಪಿಯ ಎಂಎಲ್‌ಸಿ ಎಸ್.ವಿ. ಸಂಕನೂರ ಅವರಿಗೆ ಮತದಾನಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ಜನಪ್ರತಿನಿಧಿಗಳ ಮತದಲ್ಲಿ ಕಾಂಗ್ರೆಸ್​ಗೆ ಒಂದು ಮತ ಮನಸ್ ಆಗಿದ್ದರೆ, ಬಿಜೆಪಿಗೆ ಒಂದು ಪ್ಲಸ್ ಆಗಿದೆ.

ಹೌದು.. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಮೇಯರ್-ಉಪಮೇಯರ್ ಮತದಾನಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಅರ್ಜಿ ತಿರಸ್ಕರಿಸಿದೆ. ಇದರಿಂದ ಕಾಂಗ್ರೆಸ್​ಗೆ ಒಂದು ಮತ ಕೈತಪ್ಪಿದೆ. ಇನ್ನು ಬಿಜೆಪಿ ಎಂಎಲ್‌ಸಿ ಸಂಕನೂರ ಮತದಾನಕ್ಕೆ ಪಾಲಿಕೆ ನಿರಾಕರಣೆ ಮಾಡಿತ್ತು. ಇದರ ವಿರುದ್ಧವಾಗಿ ಸಂಕನೂರ ಹೈಕೋರ್ಟ್​ ಮೊರೆ ಹೋಗಿದ್ದು, ಇದೀಗ ಕೋರ್ಟ್​ ಸಹ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಬಿಜೆಪಿ ಬುಟ್ಟಿಗೆ ಒಂದು ಮತ ಸೇರಿದಂತಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದ್ದು, ಅಧಿಕಾರ ಹಿಡಿಯಲು 46 ಮತಗಳು ಬೇಕು. ಸದ್ಯ ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿದೆ. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿವೆ. ಈಗಾಗಲೇ ಬಿಜೆಪಿಗೆ ಮೂವರು ಪಕ್ಷೇತರ ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಇದರಿಂದ ಬಿಜೆಪಿ ಬಹುಮತ ಪಡೆದುಕೊಂಡಿದೆ. ಆದ್ರೆ, ಅಡ್ಡಮತದಾನದ ಭೀತಿ ಶುರುವಾಗಿದೆ.

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದ್ದರೆ, ಉಪಮೇಯರ್ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಈ ಎರಡು ಸ್ಥಾನಕ್ಕೆ ಇಂದು (ಜೂನ್ 20) ಬೆಳಗ್ಗೆ 9 ರಿಂದ 11 ಗಂಟೆಯಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ಇದ್ದು, ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್​ ಈ ಚುನಾವಣೆಯನ್ನು ನಡೆಯಿಸಿ ಕೊಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಯಾರಿಗೆ ಗೆಲುವಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ