AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ಸಿಎಂ ಎಂದ ಕೋನರೆಡ್ಡಿ, ನಾನು ಹೋಮ್​ ಮಿನಿಸ್ಟರ್​ ಪರ ಎಂದ ಸಂತೋಷ್​ ಲಾಡ್; ಉಭಯ ನಾಯಕರ ವಿಡಿಯೋ ವೈರಲ್​

ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಚಿವ ಸಂತೋಷ್​ ಲಾಡ್​​ ಮತ್ತು ಶಾಸಕ ಕೋನರೆಡ್ಡಿ ನಡೆಸಿರುವ ಸಂಭಾಷಣೆ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಸಚಿವ ಸಂತೋಷ್​ ಲಾಡ್​​, ನಾನು ಗೃಹ ಸಚಿವ ಜಿ ಪರಮೇಶ್ವರ್​​ ಅವರ ಪರ ಎಂದು ಹೇಳಿದ್ದಾರೆ. ಮತ್ತು ಶಾಸಕ ಕೋನರೆಡ್ಡಿ ನಾನೇ ಸಿಎಂ ಎಂದಿದ್ದಾರೆ.

ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on:Nov 07, 2023 | 9:56 AM

Share

ಹುಬ್ಬಳ್ಳಿ ನ.07: ಕರ್ನಾಟಕ ಕಾಂಗ್ರೆಸ್​​ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಸಚವರೇ ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತ್ತಿದ್ದಾರೆ. ಇನ್ನು ಪಕ್ಷದಲ್ಲಿ ಬಣ ರಾಜಕೀಯ ಶುರುವಾಗಿದ್ದು, ಕೆಲ ಶಾಸಕರು ಮತ್ತು ಸಚಿವರು ನಾನು ಸಿಎಂ ಸಿದ್ದರಾಮಯ್ಯ (Siddaramaiah) ಪರ ಮತ್ತು ಇನ್ನು ಕೆಲ ಶಾಸಕರು ಮತ್ತು ಸಚಿವರು ನಾನು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪರ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಡುತ್ತಿದ್ದಾರೆ. ಈ ಎರಡು ವಿಚಾರಗಳು ಪಕ್ಷದ ವರ್ಚಸ್ಸಿಗೆ ಮತ್ತು ಸರ್ಕಾರಕ್ಕೆ ಸಂಕಟ ತಂದಿವೆ. ಈ ಬಗ್ಗೆ ಯಾರು ಹೇಳಿಕೆ ನೀಡಬಾರದು ಎಂದು ಸಿಎಂ ಮತ್ತು ಡಿಸಿಎಂ ಸೂಚನೆ ನೀಡಿದ್ದಾರೆ. ಆದರೂ ಕೂಡ ನವಲಗುಂದ ಶಾಸಕ ಕೋನರೆಡ್ಡಿ ನಾನೇ ಸಿಎಂ ಎಂದು ಹೇಳಿರುವ ವಿಡಿಯೋ ವೈರಲ್​ ಆಗಿದೆ.​

ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಚಿವ ಸಂತೋಷ್​ ಲಾಡ್​​ ಮತ್ತು ಶಾಸಕ ಕೋನರೆಡ್ಡಿ ನಡೆಸಿರುವ ಸಂಭಾಷಣೆ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಸಚಿವ ಸಂತೋಷ್​ ಲಾಡ್​​, ನಾನು ಗೃಹ ಸಚಿವ ಜಿ ಪರಮೇಶ್ವರ್​​ ಅವರ ಪರ ಎಂದು ಹೇಳಿದ್ದಾರೆ. ಮತ್ತು ಶಾಸಕ ಕೋನರೆಡ್ಡಿ ನಾನೇ ಸಿಎಂ ಎಂದಿದ್ದಾರೆ.

ಇದನ್ನೂ ಓದಿ: 2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಸಂತೋಷ್​ ಲಾಡ್​: ನಮ್ಮನ್ನು ಸರಿಯಾಗಿ ನೋಡಿಕೊಳ್ಳಬೇಕು ನಾವು ಹೋಮ್​ ಮಿನಿಸ್ಟರ್​ ಕಡೆಯವರು. ಹೀಗೆಲ್ಲ ನೋಡಿಕೊಂಡರೆ ಹೇಗೆ? ಹೌದು ನಾವು ಹೋಮ್ ಮಿನಿಸ್ಟರ್ ಕಡೆಯವರೇ. ಅವರ ಯಾರ ಕಡೆಯಾದರೂ ಇರಲಿ, ನಾವು ಮಾತ್ರ ಹೋಮ್ ಮಿನಿಸ್ಟರ್ ಕಡೆಯವರು ಎಂದು ಎರಡು ಬಾರಿ ಉಚ್ಚರಿಸಿದರು.

ಎನ್​ಹೆಚ್​ ಕೋನರೆಡ್ಡಿ: ನಾನೇ ಸಿಎಂ

ಸಂತೋಷ್​ ಲಾಡ್​: ಈತ ಯಾವ ಸಿಎಂ, ಹೋಮ್​​ ಮಿನಿಸ್ಟರ್​ ಇದ್ದಲ್ಲೇ ಇವನು ಸಿಎಂ. ನಮ್ಮ ಸಿಎಂ ಇವನೇ, ಅವರು ಯಾರು ಎಂದು ಸಚಿವ ಸಂತೋಷ್​ ಲಾಡ್​ ಹೇಳಿದರು.

ಉಭಯ ನಾಯಕರ 48 ಸೆಕೆಂಡಿನ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Tue, 7 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!