AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿ: ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ 

ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ  ಧಾರವಾಡದಲ್ಲಿ ನಡೆದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಹೇಳಿದ್ದಾರೆ.

ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿ: ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ 
ಡೀಪಕ್​ ಚಿಂಚೋರೆ
TV9 Web
| Edited By: ವಿವೇಕ ಬಿರಾದಾರ|

Updated on: Jul 24, 2022 | 2:54 PM

Share

ಧಾರವಾಡ: ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ ಎಂದು ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ  ಧಾರವಾಡದಲ್ಲಿ ನಡೆದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಹೇಳಿದ್ದಾರೆ. ಪಕ್ಷದ ಪ್ರತಿ ಕಾರ್ಯಕರ್ತನೂ ಸಿಎಂ ಆಗಲು ಅರ್ಹನಾಗಿದ್ದಾನೆ.  ವಿಪಕ್ಷ ನಾಯಕ ಸಿದ್ದರಾಮಯ್ಯ ಬಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಬಣ ಅನ್ನೋದೇನೂ ಇಲ್ಲ. ವಿವಿಧತೆಯಲ್ಲಿ ಏಕತೆ ಅನ್ನೋದು ಪಕ್ಷದ ಸಿದ್ಧಾಂತವಾಗಿದೆ.  ಪ್ರತಿ ಕಾಂಗ್ರೆಸ್ಸಿಗ ಸಿಎಂ ಆಗಲು ಅರ್ಹನಾಗಿದ್ದಾನೆ.

ಹೀಗಾಗಿ ನಾನೇಕೆ ಆಗಲು ಸಾಧ್ಯವಿಲ್ಲ? ನನಗೆ ಸಿಎಂ ಆಗಲು ಅವಕಾಶ ಸಿಕ್ಕಿಲ್ಲ. ನಮ್ಮಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಕಾಂಗ್ರೆಸ್ ಹೂವಿನ ತೋಟವಿದ್ದಂತೆ. ಅಲ್ಲಿ ಯಾವ ಹೂ ಆಕರ್ಷಕವಾಗಿತ್ತೋ ಅದನ್ನು ಎತ್ತಿಕೊಳ್ಳಲಾಗುತ್ತೆ. ಅಂಥವರೇ ಸಿಎಂ ಆಗುತ್ತಾರೆ. ಸಿದ್ದರಾಮಯ್ಯ ಸಿಎಂ ಇದ್ದಾಗ ಐದು ವರ್ಷ ಒಬ್ಬರೇ ಇದ್ದರು ಇದೀಗ ಬಿಜೆಪಿ ಎರಡು ವರ್ಷದಲ್ಲಿ ಇಬ್ಬರನ್ನು ಸಿಎಂ ಮಾಡಿದೆ ಎಂದು ಕಾಲೆಳೆದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಷ್ಟದಲ್ಲಿದೆ ಎಂದು ಕಾಂಗ್ರೆಸ್ ಅಧಿಕಾರಕ್ಕಾಗಿ ಹುಟ್ಟಿದ ಪಕ್ಷವಲ್ಲ. ಕಾಂಗ್ರೆಸ್ ಸಿದ್ಧಾಂತ  ಸಮಾಜದ ಎಲ್ಲ ವರ್ಗಗಳ ಹಿತ ಕಾಪಾಡುತ್ತದೆ. ಇವತ್ತು ದೇಶದಲ್ಲಿ ಏನಾಗುತ್ತಿದೆ ಅನ್ನೋದನ್ನು ಮನೆ ಮನೆಗೆ ತಲುಪಿಸಬೇಕಿದೆ. ಈ ಜವಾಬ್ದಾರಿಯ ಸಂಕಲ್ಪ ನಾವು ಮಾಡಬೇಕಿದೆ. ಪಕ್ಷ ಕಟ್ಟುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.

ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಿದೆ. 40 ಪರ್ಸೆಂಟೇಜ್ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ. ವಿಧಾನಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದ ಸಂಕಲ್ಪ‌ ಮಾಡಬೇಕಿದೆ. ಸಂವಿಧಾನದ ರಕ್ಷಣೆ ಮಾಡುವ ಸಂಕಲ್ಪ ಮಾಡಬೇಕಿದೆ ಎಂದು ತಿಳಿಸಿದರು.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ