AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ, ವಿರೋಧ ಪಕ್ಷದ ನಾಯಕನಾದ್ರೆ ಮಜಾ ಇರುತ್ತೆ: ಶಾಸಕ ಯತ್ನಾಳ್

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನು ಅಪೇಕ್ಷೆಪಟ್ಟಿಲ್ಲ. ಕಾಂಗ್ರೆಸ್​ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದರು.

ಗಂಗಾಧರ​ ಬ. ಸಾಬೋಜಿ
|

Updated on: May 24, 2023 | 6:10 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನು ಅಪೇಕ್ಷೆಪಟ್ಟಿಲ್ಲ. ಕಾಂಗ್ರೆಸ್​ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೆ. ನಾನು ವಿರೋಧ ಪಕ್ಷದ ನಾಯಕನಾದರೆ ಮಜಾ ಇರುತ್ತೆ ಎಂದು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಐಎಬಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವರ ಭ್ರಷ್ಟಾಚಾರ, ಗೂಂಡಾಗಿರಿ 6 ತಿಂಗಳು ಇರುವುದಿಲ್ಲ ಎಂದು ವಾಗ್ದಾಳಿ ಮಾಡಿದರು. ಯೂಟಿ ಖಾದರ್, ಜಮೀರ್ ಯಾರೆ ಆದರೂ ಸಂವಿಧಾನದಲ್ಲಿ ಅವಕಾಶವಿದೆ. ಯಾರೆ ಆದರೂ ಸಂವಿಧಾನದಂತೆ ನಡೆಯಬೇಕು ಎಂದು ಹೇಳಿದರು.

ಕಾಂಗ್ರೆಸ್ ವಿರುದ್ದ ಶಾಸಕ ಯತ್ನಾಳ್​ ವಾಗ್ದಾಳಿ

ಡಿಕೆ ಶಿವಕುಮಾರ್ ಪೊಲೀಸ್ ಠಾಣೆಗಳನ್ನ ಹಸರಿಕರಣ ಮಾಡಿ ಪಾಕಿಸ್ತಾನ ಮಾಡಲು ಹೊರಟಿದ್ದಾರಾ? ಕೇಸರಿ ಈ ಧರ್ಮದ ದೇಶದ ಸಂಕೇತವಿದೆ. ಪೊಲೀಸರು ಕೇಸರಿಶಾಲು ಹಾಕ್ಕೊಂಡ್ರೆ ತಪ್ಪೇನಿದೆ. ಕೇಸರಿಯನ್ನು ವಿರೋಧ ಮಾಡಿದ್ರು ಉಳಿಗಾಲವಿಲ್ಲ. ಕೆಲ ಗ್ಯಾರಂಟಿ ಕಾರ್ಡಗಳಿಂದ ಆರಿಸಿ ಬಂದಿದ್ದಾರೆ. ಶೀಘ್ರದಲ್ಲೇ ಗ್ಯಾರಂಟಿ ಕಾರ್ಡಗಳು ಮುಗಿಯುತ್ತವೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಬಂದ ಮೇಲೆ ದೇಶ ದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ

2024ಕ್ಕೆ ಮತ್ತೆ ಮೋದಿ ಪ್ರಧಾನಿಯಾಗಲಿದ್ದಾರೆ. ದೇಶ ಹಿಂದೂ ದೇಶವಾಗಲಿದೆ. ಇಂತಹ ನೂರು ಡಿಕೆ ಶಿವಕುಮಾರ್​ಗಳು ಬಂದರು ಏನು ಆಗೋದಿಲ್ಲ. ಕಾಂಗ್ರೆಸ್​ನವರು ಏನು ಬಹಳ ಸಾಚಾ ಇದ್ದಾರ ನೊಡೋಣ.  ಕಾಂಗ್ರೆಸ್ ಬಂದ ಮೇಲೆ ದೇಶ ದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಪಾಕಿಸ್ತಾನ ಧ್ವಜಗಳು ಹಾರಾಡುತ್ತಿವೆ.

ರಾಜ್ಯದಲ್ಲಿ ಬಿಜೆಪಿ ಮುಗಿದು ಹೋಗಿಲ್ಲ, ನಾವು ಹೋರಾಡ ಮಾಡುತ್ತೇವೆ. 66 ಜನ ನಾವು ವಿರೋಧ ಪಕ್ಷದಲ್ಲಿದ್ದೇವೆ. ಐದು ವರ್ಷ ಅವರು ಏನ್ಮಾಡಿದ್ರು ನಡೆಯುತ್ತೆ ಅನ್ನೋದಿಲ್ಲ. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು 135 ಅಲ್ಲ 200 ಬಂದ್ರು ಏನು ಬೇಕಾದರೂ ಆಗಬಹುದು. ಮಹಾರಾಷ್ಟ್ರದಲ್ಲಿ ಏನಾಯಿತು ಅನ್ನೂದು ಗೊತ್ತಲ್ವ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

ಕೆಐಎಬಿಯಲ್ಲಿ ನೂತನ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ, ಆದಷ್ಟು ಬೇಗ ಆಗಬೇಕಿದೆ. ಸರ್ಕಾರ ಹೇಗೆ ಆಡಳಿತ ನೀಡುತ್ತದೆ ಅಂತಾ ಹೇಳಲು 6 ತಿಂಗಳು ಬೇಕು ಎಂದು ಹೇಳಿದರು.

6 ತಿಂಗಳಿಂದ 1 ವರ್ಷ ಸಮಯಬೇಕೆಂದು ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ಏನೋ ಹೇಳ್ತಾರೆಂದು ನಾವು ಹೇಳಲು ಆಗೋದಿಲ್ಲ. ಯತ್ನಾಳ್ ಗಿರಾಕಿಗೆ ಯಾರು ಉತ್ತರ ಕೊಡೋರು. ಅವನು ಹೇಳಿದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನರೇಂದ್ರ ಮೋದಿಯವರ 15 ಲಕ್ಷದ ವಿಚಾರ ಮೊದಲು ಹೇಳಲಿ ಎಂದು ಕಿಡಿಕಾರಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..