AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ; ಜೆಡಿಎಸ್ ಗುಬ್ಬಿ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ

ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ; ಜೆಡಿಎಸ್ ಗುಬ್ಬಿ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ
I am very happy to Expulsion from JDS said Gubbi MLA SR Srinivas
TV9 Web
| Edited By: |

Updated on:Jun 23, 2022 | 11:57 AM

Share

ತುಮಕೂರು: ನಿನ್ನೆ (ಜೂನ್ 22) ನಡೆದ ಕೋರ್ ಕಮಿಟಿ ಸಭೆಯಲ್ಲಿ ಗುಬ್ಬಿ ಶ್ರೀನಿವಾಸ್ ಮತ್ತು ಕೋಲಾರ ಶ್ರೀನಿವಾಸ ಗೌಡ ಅವರನ್ನು ಉಚ್ಚಾಟನೆ ಮಾಡಿ ಜೆಡಿಎಸ್ (JDS) ಆದೇಶ ನೀಡಿದೆ. ಈ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಬ್ಬಿ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ (SR Srinivas), ಜೆಡಿಎಸ್ನಿಂದ ಉಚ್ಚಾಟನೆ ಮಾಡಿದ್ದರಲ್ಲಿ ಹೊಸದೇನಿಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಈ ಬೆಳವಣಿಗೆ ಮುಜುಗರ, ಅವಮಾನ ಎಂದು ಅನಿಸಲ್ಲ. ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಇಬ್ಬರು ಶಾಸಕರು ಉಚ್ಚಾಟನೆ: ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಕೋಲಾರ ಶಾಸಕ ಕೆ ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಇಬ್ಬರನ್ನೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ನಿನ್ನೆ ಉಚ್ಛಾಟನೆ ಮಾಡಿದೆ. ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ಶೀಘ್ರ ದೂರು ನೀಡಲಾಗುವುದು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ನಾಳೆ ಅಥವಾ ನಾಡಿದ್ದು ಸ್ಪೀಕರ್​ಗೆ ದೂರು ನೀಡಲು ಜೆಡಿಎಸ್ ತೀರ್ಮಾನ ನೀಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Column: ಹಾದಿಯೇ ತೋರಿದ ಹಾದಿ; ‘ಋತುಮತಿಯಾಗಿದ್ದರೂ ಗಂಡುಬೀರಿಯರಂತಿದ್ದಾರೆ’ ಎಂದಿದ್ದರು ಹಳ್ಳಿಗರು

ಇದನ್ನೂ ಓದಿ
Image
Column: ಹಾದಿಯೇ ತೋರಿದ ಹಾದಿ; ‘ಋತುಮತಿಯಾಗಿದ್ದರೂ ಗಂಡುಬೀರಿಯರಂತಿದ್ದಾರೆ’ ಎಂದಿದ್ದರು ಹಳ್ಳಿಗರು
Image
Edible Oil Price: ಅದಾನಿ ವಿಲ್ಮರ್, ಮದರ್​ ಡೇರಿಯಂಥ ಪ್ರಮುಖ ಬ್ರ್ಯಾಂಡ್​ಗಳ ಖಾದ್ಯತೈಲ ಬೆಲೆಗಳಲ್ಲಿ ಇಳಿಕೆ
Image
Rumeli Dhar: ಮಿಥಾಲಿ ಬೆನ್ನಲ್ಲೇ ಮತ್ತೋರ್ವ ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಕ್ರಿಕೆಟ್ ಲೋಕಕ್ಕೆ ವಿದಾಯ
Image
ಕಿತ್ತು ಹೋಗುತ್ತಿದೆ ಪ್ರಧಾನಿ ಬಂದಾಗ ನಿರ್ಮಿಸಿದ್ದ ರಸ್ತೆ! ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲು

ಕಾಂಗ್ರೆಸ್​ಗೆ ಸೇರುತ್ತೇನೆ- ಶ್ರೀನಾಥ್: ಕಳೆದ ಕೆಲ ದಿನಗಳ ಹಿಂದೆ ಜೆ.ಡಿ.ಎಸ್​ಗೆ ರಾಜೀನಾಮೆ ನೀಡಿದ್ದ ಮಾಜಿ ಎಂಎಲ್​ಸಿ ಹೆಚ್.ಆರ್ ಶ್ರೀನಾಥ್​, ನಾನು ಜುಲೈ ಮೂರರಂದು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ ಎಂದು ಜಿಲ್ಲೆಯ ಗಂಗಾವತಿಯಲ್ಲಿ ಹೇಳಿಕೆ ನೀಡಿದರು. ನಾನು ಕೂಡಾ ಗಂಗಾವತಿ ವಿಧಾನಸಭಾ ಕ್ಷೇತ್ರದ ಮುಂಬರೋ ಚುನಾಚಣೆಗೆ ನಾನು ಆಕಾಂಕ್ಷಿ. ಕಾಂಗ್ರೆಸ್ ಸೇರೋ ವಿಚಾರವಾಗಿ ಇದುವರೆಗೂ ನಾನು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಜೊತೆ ಮಾತನಾಡಿಲ್ಲ. ನಮ್ಮ ಹಿರಿಯರು ಇಬ್ಬರನ್ನು ಸರಿ ಮಾಡುತ್ತಾರೆ. ಕಳೆದ ಬಾರಿ ಚುನಾವಣೆಯಲ್ಲಿ ಅನ್ಸಾರಿ ವಿರುದ್ದ ಬಂಡಾಯವೆದ್ದು ಶ್ರೀನಾಥ್ ಕಾಂಗ್ರೆಸ್​ನಿಂದ ಜೆಡಿಎಸ್ ಸೇರಿದ್ದರು. ಇದೀಗ ಮತ್ತೆ ಕೈ ಪಾಳಯಕ್ಕೆ ಶ್ರೀನಾಥ್ ಸೇರಲಿದ್ದಾರೆ. ಆದರು ಗಂಗಾವತಿ ಮಾಜಿ ಶಾಸಕ‌ ಇಕ್ಬಾಲ್ ಅನ್ಸಾರಿ, ಶ್ರೀನಾಥ್ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ನಾನು ಕೂಡಾ ಟಿಕೆಟ್ ಆಕಾಂಕ್ಷಿ ಎಂದು ಶ್ರೀನಾಥ್ ಬಹಿರಂಗವಾಗಿ ಹೇಳಿದ್ದಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡಬಾರದು ಅಂತೇನಿಲ್ಲ. ಕೆಲವು ಸಲ ವ್ಯಕ್ತಿ ಮೇಲೆ ಚುನಾವಣೆ ಎಂದು ಶ್ರೀನಾಥ್ ಹೇಳಿದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Thu, 23 June 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ