AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು: ಮತ್ತೆ ಸಚಿವ ಸ್ಥಾನದ ಆಕಾಂಕ್ಷೆ ಬಿಚ್ಚಿಟ್ಟ ಶಾಸಕ ಕೋನರೆಡ್ಡಿ

ತಾನು ಕೃಷಿ ಸಚಿವನಾಗಬೇಕು ಎಂದು ನವಲಗುಂದ ಕಾಂಗ್ರೆಸ್ ಶಾಸಕ ಕೋನರೆಡ್ಡಿ ಅವರು ಮತ್ತೊಮ್ಮೆ ಆಕಾಂಕ್ಷೆ ಹೊರಹಾಕಿದ್ದಾರೆ. ಒಬ್ಬ ಶಾಸಕನಾಗಿ ನಾನು ನನ್ನ ಹಕ್ಕು ಕೇಳಿದ್ದೇನೆ. ಒಂದು ಸಾರಿ ಕೃಷಿ ಮಂತ್ರಿ ಮಾಡಿ ಎಂದು ಕೇಳಿದ್ದೇನೆ. ಆದರೆ, ನನಗೆ ಮಂತ್ರಿಗಿರಿ ಸಿಗಲಿ ಅಥವಾ ಸಿಗದೇ ಇರಲಿ. ಕಾರ್ಯಕರ್ತನಾಗಿ ಸೇವೆ ಮಾಡುತ್ತೇನೆ ಎಂದರು.

ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು: ಮತ್ತೆ ಸಚಿವ ಸ್ಥಾನದ ಆಕಾಂಕ್ಷೆ ಬಿಚ್ಚಿಟ್ಟ ಶಾಸಕ ಕೋನರೆಡ್ಡಿ
ಎನ್​ ಹೆಚ್​ ಕೋನಾರೆಡ್ಡಿ
ಶಿವಕುಮಾರ್ ಪತ್ತಾರ್
| Edited By: |

Updated on: Dec 17, 2023 | 1:36 PM

Share

ಹುಬ್ಬಳ್ಳಿ, ಡಿ.17: ನವಲಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್​ಎಚ್​ ಕೋನರೆಡ್ಡಿ (NH Konareddy) ಅವರು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು. ಒಬ್ಬ ಶಾಸಕನಾಗಿ ನಾನು ನನ್ನ ಹಕ್ಕು ಕೇಳಿದ್ದೇನೆ. ಒಂದು ಸಾರಿ ಕೃಷಿ ಮಂತ್ರಿ ಮಾಡಿ ಎಂದು ಕೇಳಿದ್ದೇನೆ ಎಂದರು.

ನಮಗೆ ಹೈಕಮಾಂಡ್ ಇದೆ, ಪಕ್ಷದ ಅಧ್ಯಕ್ಷರಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೋಡೆತ್ತು. ಕಾರ್ಪೋರೆಟ್​ಗಳು ಮೇಯರ್ ಆಗಬೇಕು ಅಂತಾರೆ. ಶಾಸಕರು ಮಂತ್ರಿ ಆಗಬೇಕು ಅಂತಾರೆ. ಆದರೆ ಎಲ್ಲರನ್ನು ಮಂತ್ರಿ ಮಾಡಲು ಆಗುವುದಿಲ್ಲ. ಮಂತ್ರಿಯನ್ನಾಗಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಪರಮಾಧಿಕಾದಕ್ಕೆ ನಾವು ಬದ್ದರಾಗಿದ್ದೇವೆ. ನನಗೆ ಮಂತ್ರಿ ಸ್ಥಾನ ಸಿಗದಿದ್ದರೂ ಕಾರ್ಯಕರ್ತನಾಗಿ ಸೇವೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ನಾನೇ ಸಿಎಂ ಎಂದ ಕೋನರೆಡ್ಡಿ, ನಾನು ಹೋಮ್​ ಮಿನಿಸ್ಟರ್​ ಪರ ಎಂದ ಸಂತೋಷ್​ ಲಾಡ್; ಉಭಯ ನಾಯಕರ ವಿಡಿಯೋ ವೈರಲ್​

ಕೋನರೆಡ್ಡಿ ಅವರು ತಾನು ಕೃಷಿ ಮಂತ್ರಿ ಆಗಬೇಕು ಎಂದು ಹೇಳಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಕೃಷಿ ಸಚಿವನಾಗಬೇಕು ಎಂದು ಹೇಳಿಕೆ ನೀಡಿದ್ದರು. ನನಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವನಾಗಬೇಕು ಎಂಬ ಆಸೆ ಇದೆ ಎಂದು ಹೇಳಿಕೆ ನೀಡಿದ್ದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವಂತೆ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಒತ್ತಾಯಿಸಿದ್ದಾರೆ. ಇವರ ಮಾತಿಗೆ ದನಿಗೂಡಿಸಿದ ಕೋನರೆಡ್ಡಿ, ಟಿಪ್ಪು ಒಬ್ಬ ಹೋರಾಟಗಾರ, ವಿಮಾನ ನಿಲ್ದಾಣಕ್ಕೆ ಇವರ ಹೆಸರಿಡುವ ಬಗ್ಗೆ ಬೇಡಿಕೆ ಇದೆ. ಅದರಲ್ಲಿ ತಪ್ಪೇನು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್