Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು

ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಸಚಿವರ ಪಟ್ಟಿಯಲ್ಲಿ ಸ್ಥಾನ ದೊರೆತಿಲ್ಲ, ಹೀಗಾಗಿ ಅವರ ಮೊಮ್ಮಗಳು ಬೇಸರ ವ್ಯಕ್ತಪಡಿಸಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
Follow us
ರಮೇಶ್ ಬಿ. ಜವಳಗೇರಾ
|

Updated on: May 29, 2023 | 11:28 AM

ತುಮಕೂರು: ಸಿದ್ದರಾಮಯ್ಯನವರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 34 ಜನರು ಸರ್ಕಾರ ರಚನೆಯಾಗಿದೆ. ಆದ್ರೆ, ಸಚಿವ ಸ್ತಾನದ ಆಕಾಂಕ್ಷಿಗಳಾಗಿದ್ದ ಕೆಲ ಹಿರಿಯ ಶಾಸಕರುಗಳಿಗೆ ಕಾಂಗ್ರೆಸ್​ ಹೈಕಮಾಂಡ್ ಕೊಕ್​ ನೀಡಿದೆ. ಈ ಪಟ್ಟಿಯಲ್ಲಿ ಟಿಬಿ ಜಯಚಂದ್ರ(Congress MLA TB Jayachandra) ಕೂಡ ಒಬ್ಬರು. ಈ ಬಾರಿ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ  ಟಿಬಿ ಜಯಚಂದ್ರ ಅವರಿಗೆ ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಇನ್ನು ಜಯಚಂದ್ರ ಅವರ ಮೊಮ್ಮಗಳು(TB Jayachandra’s granddaughter) ಸಹ ಬೇಸರ ವ್ಯಕ್ತಪಡಿಸಿದ್ದು,  ತಮ್ಮ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ತಮ್ಮ ತಾತನ ಪರವಾಗಿ ಲಾಬಿ ಮಾಡಿದ್ದಾಳೆ.

ಇದನ್ನೂ ಓದಿ: Karnataka Portfolio Allocation: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ನಮ್ಮ ತಾತನಿಗೆ ಸಚಿವ ಸ್ಥಾನ ನೀಡದಿರುವುದು ತುಂಬ ಬೇಸರ ಆಗಿದೆ. ಸಚಿವ ಸ್ಥಾನಕ್ಕೆ ಅವರು ಸೂಕ್ತವಾದ ವ್ಯಕ್ತಿ. ಅವರು ಶ್ರಮ ಜೀವಿ, ಜನರಿಗೆ ಸಹಾಯ ಮಾಡುತ್ತಾರೆ. ಅದಕ್ಕೆ ಅವರು ಸಚಿವರಾಗಬೇಕು ಎಂದು ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ರಾಹುಲ್​ ಗಾಂಧಿಗೆ ಪತ್ರ ಬರೆದಿದ್ದಾಳೆ. ಅಲ್ಲದೇ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ.

ನಮ್ಮ ತಾತ ಜನರನ್ನು ತುಂಬಾ ಪ್ರೀತಿ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ಕೊಡುವಂತೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ದಯವಿಟ್ಟು ಈ ಪತ್ರವನ್ನು ಓದಿ ಎಂದು ಆಕೆ ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ಅವರನ್ನು ಸಚಿವರನ್ನಾಗಿ ಮಾಡುವಂತೆ ಗಾಂಧಿಗೆ ಮನವಿ ಮಾಡಿದ್ದಾರೆ, ಟಿಬಿ ಜಯಚಂದ್ರ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲು ಹೈಕಮಾಂಡ್ ನಿರ್ಧರಿಸಿತ್ತು. ಕೆಸಿ ವೇಣುಗೋಪಾಲ್, ಸುರ್ಜೆವಾಲಾ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಟಿಬಿ ಜಯಚಂದ್ರ ಅವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದರು. ಆದರೆ, ಅವರು ಒಪ್ಪಲು ನಿರಾಕರಿಸಿದ್ದರು. ಅಲ್ಲದೇ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ತಪ್ಪಲು ಕಾರಣ ಎಂದು ತಿಳಿದುಬಂದಿದೆ.

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ