AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು

ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಸಚಿವರ ಪಟ್ಟಿಯಲ್ಲಿ ಸ್ಥಾನ ದೊರೆತಿಲ್ಲ, ಹೀಗಾಗಿ ಅವರ ಮೊಮ್ಮಗಳು ಬೇಸರ ವ್ಯಕ್ತಪಡಿಸಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
ರಮೇಶ್ ಬಿ. ಜವಳಗೇರಾ
|

Updated on: May 29, 2023 | 11:28 AM

Share

ತುಮಕೂರು: ಸಿದ್ದರಾಮಯ್ಯನವರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 34 ಜನರು ಸರ್ಕಾರ ರಚನೆಯಾಗಿದೆ. ಆದ್ರೆ, ಸಚಿವ ಸ್ತಾನದ ಆಕಾಂಕ್ಷಿಗಳಾಗಿದ್ದ ಕೆಲ ಹಿರಿಯ ಶಾಸಕರುಗಳಿಗೆ ಕಾಂಗ್ರೆಸ್​ ಹೈಕಮಾಂಡ್ ಕೊಕ್​ ನೀಡಿದೆ. ಈ ಪಟ್ಟಿಯಲ್ಲಿ ಟಿಬಿ ಜಯಚಂದ್ರ(Congress MLA TB Jayachandra) ಕೂಡ ಒಬ್ಬರು. ಈ ಬಾರಿ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ  ಟಿಬಿ ಜಯಚಂದ್ರ ಅವರಿಗೆ ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಇನ್ನು ಜಯಚಂದ್ರ ಅವರ ಮೊಮ್ಮಗಳು(TB Jayachandra’s granddaughter) ಸಹ ಬೇಸರ ವ್ಯಕ್ತಪಡಿಸಿದ್ದು,  ತಮ್ಮ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ತಮ್ಮ ತಾತನ ಪರವಾಗಿ ಲಾಬಿ ಮಾಡಿದ್ದಾಳೆ.

ಇದನ್ನೂ ಓದಿ: Karnataka Portfolio Allocation: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ನಮ್ಮ ತಾತನಿಗೆ ಸಚಿವ ಸ್ಥಾನ ನೀಡದಿರುವುದು ತುಂಬ ಬೇಸರ ಆಗಿದೆ. ಸಚಿವ ಸ್ಥಾನಕ್ಕೆ ಅವರು ಸೂಕ್ತವಾದ ವ್ಯಕ್ತಿ. ಅವರು ಶ್ರಮ ಜೀವಿ, ಜನರಿಗೆ ಸಹಾಯ ಮಾಡುತ್ತಾರೆ. ಅದಕ್ಕೆ ಅವರು ಸಚಿವರಾಗಬೇಕು ಎಂದು ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ರಾಹುಲ್​ ಗಾಂಧಿಗೆ ಪತ್ರ ಬರೆದಿದ್ದಾಳೆ. ಅಲ್ಲದೇ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ.

ನಮ್ಮ ತಾತ ಜನರನ್ನು ತುಂಬಾ ಪ್ರೀತಿ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ಕೊಡುವಂತೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ದಯವಿಟ್ಟು ಈ ಪತ್ರವನ್ನು ಓದಿ ಎಂದು ಆಕೆ ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ಅವರನ್ನು ಸಚಿವರನ್ನಾಗಿ ಮಾಡುವಂತೆ ಗಾಂಧಿಗೆ ಮನವಿ ಮಾಡಿದ್ದಾರೆ, ಟಿಬಿ ಜಯಚಂದ್ರ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲು ಹೈಕಮಾಂಡ್ ನಿರ್ಧರಿಸಿತ್ತು. ಕೆಸಿ ವೇಣುಗೋಪಾಲ್, ಸುರ್ಜೆವಾಲಾ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಟಿಬಿ ಜಯಚಂದ್ರ ಅವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದರು. ಆದರೆ, ಅವರು ಒಪ್ಪಲು ನಿರಾಕರಿಸಿದ್ದರು. ಅಲ್ಲದೇ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ತಪ್ಪಲು ಕಾರಣ ಎಂದು ತಿಳಿದುಬಂದಿದೆ.

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ