AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಯೂ ಟರ್ನ್​ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Nov 03, 2023 | 7:19 PM

Share

ಗದಗ, ನವೆಂಬರ್​​​​ 03: ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಯೂ ಟರ್ನ್​ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ. ನಗದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಹೈಕಮಾಂಡ್​ ಪಕ್ಷ. ಹಾಗಾಗಿ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಭಯ ನಾಯಕರು ಭಾಗಿ

ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​ ಭಾಗಿಯಾಗಿದ್ದು, ಜಾತಿಗಣತಿ ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಜಾತಿಗಣತಿ ವರದಿ ಸಲ್ಲಿಸಿದರೆ ಪರಿಶೀಲಿಸಿ ನಿರ್ಧರಿಸುತ್ತೇವೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ನಿನ್ನೆ ಸಿಎಂ ಸಿದ್ದರಾಮಯ್ಯ ಆಡಿದ ಈ ಮಾತು ಕಾಂಗ್ರೆಸ್​ನಲ್ಲಿ ಸಂಚಲನ ಎಬ್ಬಿಸಿತ್ತು. ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ ಅಂತಾ ಹೈಕಮಾಂಡ್ ಹೇಳಿದ್ದರೂ ಪ್ರತಿಯೊಬ್ಬ ನಾಯಕರು ಮಾತಾಡುವುದಕ್ಕೆ ಶುರು ಮಾಡಿದ್ದರು. ದಲಿತ ಸಿಎಂ ಕೂಗೂ ಎದ್ದಿದೆ.

ಇದನ್ನೂ ಓದಿ: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಡಿಸಿಎಂ ಹೇಳಿದ್ದಿಷ್ಟು…

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತಾ ಸಿದ್ದರಾಮಯ್ಯ ಹೇಳಿರುವ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ. ಯಾವ ಶೇರಿಂಗ್, ಹಂಚಿಕೊಳ್ಳುವುದಕ್ಕೆ ಯಾವ ಆಸ್ತಿನೂ ಇಲ್ಲ, ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದವರಿಗೆ ನೋಟಿಸ್ ಕೊಡುತ್ತೇವೆ ಎಂದಿದ್ದಾರೆ.

ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ: ಸಂಸದ ಡಿ.ಕೆ.ಸುರೇಶ್

ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್​ ಮಾತನಾಡಿದ್ದು, ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಇದ್ದಾಗ ಚರ್ಚಿಸಿದರೆ ಅರ್ಥ ಇರುತ್ತೆ. ಮುಂದಿನ ಸಿಎಂ ಬಗ್ಗೆ ಕೆಲವರ ಅಭಿಪ್ರಾಯ ಇರುತ್ತೆ. ಆಡಳಿತ ನಡೆಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ಗೆ ಗುರಿ ಇದೆ. ಸರ್ಕಾರ ಸುಭದ್ರವಾಗಿರಬೇಕು ಎನ್ನುವುದು ಇಬ್ಬರ ಗುರಿ ಎಂದು ಹೇಳಿದ್ದಾರೆ.

ಜಿ.ಪರಮೇಶ್ವರ್​​ಗೂ ಸಿಎಂ ಅವಕಾಶವಿದೆ: ಸಚಿವ ಕೆ.ಎನ್​.ರಾಜಣ್ಣ 

ಕಾಂಗ್ರೆಸ್​ ಸಿಎಂ ವಿಚಾರವಾಗಿ ಸಚಿವ ಕೆ.ಎನ್​.ರಾಜಣ್ಣ ಕೂಡ ಹೊಸ ಬಾಂಬ್​ ಸಿಡಿಸಿದ್ದಾರೆ. ಸಿದ್ದರಾಮಯ್ಯರಂತೆಯೇ ಗೃಹ ಸಚಿವ ಜಿ.ಪರಮೇಶ್ವರ್​​ಗೂ ಕೂಡ ಸಿಎಂ ಆಗುವ ಅವಕಾಶವಿದೆ. ಸದ್ಯ ಡಾ.ಜಿ.ಪರಮೇರ್​ ಹೋಂ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Fri, 3 November 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?