ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ

ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಯೂ ಟರ್ನ್​ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 03, 2023 | 7:19 PM

ಗದಗ, ನವೆಂಬರ್​​​​ 03: ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಯೂ ಟರ್ನ್​ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ. ನಗದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಹೈಕಮಾಂಡ್​ ಪಕ್ಷ. ಹಾಗಾಗಿ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಭಯ ನಾಯಕರು ಭಾಗಿ

ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​ ಭಾಗಿಯಾಗಿದ್ದು, ಜಾತಿಗಣತಿ ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಜಾತಿಗಣತಿ ವರದಿ ಸಲ್ಲಿಸಿದರೆ ಪರಿಶೀಲಿಸಿ ನಿರ್ಧರಿಸುತ್ತೇವೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ನಿನ್ನೆ ಸಿಎಂ ಸಿದ್ದರಾಮಯ್ಯ ಆಡಿದ ಈ ಮಾತು ಕಾಂಗ್ರೆಸ್​ನಲ್ಲಿ ಸಂಚಲನ ಎಬ್ಬಿಸಿತ್ತು. ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ ಅಂತಾ ಹೈಕಮಾಂಡ್ ಹೇಳಿದ್ದರೂ ಪ್ರತಿಯೊಬ್ಬ ನಾಯಕರು ಮಾತಾಡುವುದಕ್ಕೆ ಶುರು ಮಾಡಿದ್ದರು. ದಲಿತ ಸಿಎಂ ಕೂಗೂ ಎದ್ದಿದೆ.

ಇದನ್ನೂ ಓದಿ: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಡಿಸಿಎಂ ಹೇಳಿದ್ದಿಷ್ಟು…

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತಾ ಸಿದ್ದರಾಮಯ್ಯ ಹೇಳಿರುವ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ. ಯಾವ ಶೇರಿಂಗ್, ಹಂಚಿಕೊಳ್ಳುವುದಕ್ಕೆ ಯಾವ ಆಸ್ತಿನೂ ಇಲ್ಲ, ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದವರಿಗೆ ನೋಟಿಸ್ ಕೊಡುತ್ತೇವೆ ಎಂದಿದ್ದಾರೆ.

ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ: ಸಂಸದ ಡಿ.ಕೆ.ಸುರೇಶ್

ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್​ ಮಾತನಾಡಿದ್ದು, ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಇದ್ದಾಗ ಚರ್ಚಿಸಿದರೆ ಅರ್ಥ ಇರುತ್ತೆ. ಮುಂದಿನ ಸಿಎಂ ಬಗ್ಗೆ ಕೆಲವರ ಅಭಿಪ್ರಾಯ ಇರುತ್ತೆ. ಆಡಳಿತ ನಡೆಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ಗೆ ಗುರಿ ಇದೆ. ಸರ್ಕಾರ ಸುಭದ್ರವಾಗಿರಬೇಕು ಎನ್ನುವುದು ಇಬ್ಬರ ಗುರಿ ಎಂದು ಹೇಳಿದ್ದಾರೆ.

ಜಿ.ಪರಮೇಶ್ವರ್​​ಗೂ ಸಿಎಂ ಅವಕಾಶವಿದೆ: ಸಚಿವ ಕೆ.ಎನ್​.ರಾಜಣ್ಣ 

ಕಾಂಗ್ರೆಸ್​ ಸಿಎಂ ವಿಚಾರವಾಗಿ ಸಚಿವ ಕೆ.ಎನ್​.ರಾಜಣ್ಣ ಕೂಡ ಹೊಸ ಬಾಂಬ್​ ಸಿಡಿಸಿದ್ದಾರೆ. ಸಿದ್ದರಾಮಯ್ಯರಂತೆಯೇ ಗೃಹ ಸಚಿವ ಜಿ.ಪರಮೇಶ್ವರ್​​ಗೂ ಕೂಡ ಸಿಎಂ ಆಗುವ ಅವಕಾಶವಿದೆ. ಸದ್ಯ ಡಾ.ಜಿ.ಪರಮೇರ್​ ಹೋಂ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Fri, 3 November 23