Rahul Gandhi in Wayanad: ಬಿಜೆಪಿ ನಾಯಕರು ನನ್ನನ್ನು ಅರ್ಥ ಮಾಡಿಕೊಂಡಿಲ್ಲ, ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ

ಅವರು ಪೊಲೀಸರನ್ನು ಕಳುಹಿಸಿದರೆ, ನನ್ನ ಮನೆ ಕಸಿದುಕೊಂಡರೆ ಅಥವಾ ಕೆಲವು ಪ್ರಕರಣಗಳನ್ನು ದಾಖಲಿಸಿದರೆ ಅಥವಾ ನನ್ನನ್ನು ಸಂಸತ್ತಿನಿಂದ ಹೊರಹಾಕಿದರೆ ನಾನು ಹೆದರುತ್ತೇನೆ ಎಂದು ಅವರು ಭಾವಿಸುತ್ತಾರೆ. ಆದರೆ ಅವರ ಆ ಭಾವನೆ ತಪ್ಪು. ನಾನು ನನ್ನ ಹೋರಾಟವನ್ನು ಮುಂದುವರಿಸುತ್ತೇನೆ ಎಂದ ರಾಹುಲ್ ಗಾಂಧಿ

Rahul Gandhi in Wayanad: ಬಿಜೆಪಿ ನಾಯಕರು ನನ್ನನ್ನು ಅರ್ಥ ಮಾಡಿಕೊಂಡಿಲ್ಲ, ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ
ವಯನಾಡಿನಲ್ಲಿ ರಾಹುಲ್ ಗಾಂಧಿ
Follow us
|

Updated on: Apr 11, 2023 | 8:22 PM

ಕಲ್ಪಟ್ಟಾ(ವಯನಾಡ್): ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಅವರು ಎಲ್ಲವನ್ನೂ ಕಸಿದುಕೊಳ್ಳಬಹುದು, ನನ್ನನ್ನು ಮತ್ತು ಜೈಲಿಗೆ ಕಳುಹಿಸಬಹುದು. ಆದರೆ ನನ್ನನ್ನು ಹೆದರಿಸಲು ಅಥವಾ ನನ್ನಲ್ಲಿ ಭಯಹುಟ್ಟಿಸಲು ಸಾಧ್ಯವಿಲ್ಲ. ನಾನು ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇನೆ ಎಂದು ಹೇಳಿದ್ದಾರೆ. ಲೋಕಸಭೆಯಿಂದ ಅನರ್ಹಗೊಂಡ ನಂತರ ಕೇರಳದಲ್ಲಿರುವ ತಮ್ಮ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಮೊದಲನೇ ಬಾರಿ ಭೇಟಿ ನೀಡಿದ್ದಾರೆ. ವಯನಾಡಿನಲ್ಲಿ (Wayanad) ಭಾವನಾತ್ಮಕವಾಗಿ ಭಾಷಣ ಮಾಡಿದ ರಾಹುಲ್, ಸರ್ಕಾರದ ವಿರುದ್ಧದ ನನ್ನ ಹೋರಾಟವು ನಾಲ್ಕು ಅಥವಾ ಐದು ಜನರಿಂದ ಮಾರ್ಗದರ್ಶನ ಮತ್ತು ನಿಯಂತ್ರಿಸಲ್ಪಟ್ಟಿದೆ. ಅದು ಮುಂದುವರಿಯಲಿದೆ.

ಅವರು ಪೊಲೀಸರನ್ನು ಕಳುಹಿಸಿದರೆ, ನನ್ನ ಮನೆ ಕಸಿದುಕೊಂಡರೆ ಅಥವಾ ಕೆಲವು ಪ್ರಕರಣಗಳನ್ನು ದಾಖಲಿಸಿದರೆ ಅಥವಾ ನನ್ನನ್ನು ಸಂಸತ್ತಿನಿಂದ ಹೊರಹಾಕಿದರೆ ನಾನು ಹೆದರುತ್ತೇನೆ ಎಂದು ಅವರು ಭಾವಿಸುತ್ತಾರೆ. ಆದರೆ ಅವರ ಆ ಭಾವನೆ ತಪ್ಪು. ನಾನು ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ. ಇದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ, ಒಂದು ದ್ವೇಷ ಮತ್ತು ವಿಭಜನೆಯಿಂದ ಮುಂದುವರಿದರೆ ಮತ್ತು ಇನ್ನೊಂದು, ಸಹಾನುಭೂತಿಯಿಂದ ಮುಂದೆ ಸಾಗುತ್ತದೆ.

ನನ್ನ ಎಂಪಿ ಟ್ಯಾಗ್ ಕಿತ್ತುಕೊಳ್ಳಲಾಗಿದೆ ಆದರೆ ವಯನಾಡಿನ ಜನರೊಂದಿಗೆ ನನ್ನ ಒಡನಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ನಾನು ಮನೆಗೆ ವಾಪಾಸ್ ಬಂದಂತೆ. ನೀವು ನನ್ನನ್ನು ಕುಟುಂಬದ ಸದಸ್ಯರಂತೆ ಪರಿಗಣಿಸುತ್ತೀರಿ ಎಂದು ರಾಹುಲ್ ಹೇಳಿದ್ದಾರೆ. 2019 ರಲ್ಲಿ 4,00,000 ಮತಗಳ ಅಂತರದಿಂದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ನಾನು ಕೇಳಿದ ಪ್ರಶ್ನೆಗಳಿಂದಾಗಿ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನಾನು ಪ್ರಧಾನಿಗೆ ಒಂದೇ ಒಂದು ಪ್ರಶ್ನೆ ಕೇಳಿದೆ. ದೇಶದಲ್ಲಿ 609 ನೇ ಸ್ಥಾನದಲ್ಲಿದ್ದ ಕೈಗಾರಿಕೋದ್ಯಮಿ (ಗೌತಮ್ ಅದಾನಿ) ಮೋದಿ ಅಧಿಕಾರಕ್ಕೆ ಬಂದ ನಂತರ 2 ನೇ ಸ್ಥಾನಕ್ಕೇರಿದ್ದು ಹೇಗೆ? ಅವರಿಗಾಗಿ ವಿಮಾನ ನಿಲ್ದಾಣ ಮತ್ತು ಬಂದರು ನಿಯಮಗಳನ್ನು ಬದಲಾಯಿಸಿರುವುದನ್ನು ನಾವು ನೋಡಿದ್ದೇವೆ. ಯಾರೂ ನನ್ನನ್ನು ಮೌನಗೊಳಿಸಲು ಸಾಧ್ಯವಿಲ್ಲ. ನಾನು ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುವೆ ಎಂದಿದ್ದಾರೆ ರಾಹುಲ್.

ನಾನು ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮತ್ತು ಅದರ ನಾಯಕರಿಗೆ ಗೊತ್ತಿಲ್ಲ. ಅವರಿಗೆ ನಾನು ಹೆದರುವುದೂ ಇಲ್ಲ ಹಲವು ವರ್ಷಗಳ ನಂತರ ಬಿಜೆಪಿ ಮತ್ತು ಅದರ ನಾಯಕರು ನನ್ನನ್ನು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ನನಗೆ ಆಶ್ಚರ್ಯವಾಗಿದೆ. ನಾನು ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನಾಲ್ಕು ವರ್ಷಗಳ ಹಿಂದೆ ವಯನಾಡ್‌ಗೆ ಸ್ಪರ್ಧಿಸಲು ಬಂದಾಗ, ಪ್ರಚಾರವು ವಿಭಿನ್ನವಾಗಿತ್ತು. ಅದರಲ್ಲಿ ಹೆಚ್ಚು ಪ್ರೀತಿ ಕಾಣುತ್ತಿತ್ತು. ಆ ಸಂಬಂಧವನ್ನು ನಾನು ಮುಂದುವರಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಯಾರ ಸಲಹೆ ತೆಗೆದುಕೊಳ್ಳುತ್ತಾರೋ ಎಂಬುದು ನನಗೆ ಗೊತ್ತಿಲ್ಲ: ಅನಿಲ್ ಆಂಟನಿ

ರಾಹುಲ್ ಜೊತೆ ನಿಂತಿದ್ದಕ್ಕಾಗಿ ವಯನಾಡ್ ಜನತೆಗೆ ಧನ್ಯವಾದ ಎಂದು ರಾಹುಲ್ ಗಾಂಧಿಯವರ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ ಸರ್ಕಾರ ಮತ್ತು ಅದರ ಕುರಿತ ಪ್ರಶ್ನೆಯನ್ನು ಕೇಳಿದ ವ್ಯಕ್ತಿಯ ಮೇಲೆ ಹೇಗೆ ದಾಳಿ ಮಾಡಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಆದರೆ ನೀವು ಅವನನ್ನು ಹೀಗೆ ಮೌನಗೊಳಿಸಲು ಸಾಧ್ಯವಿಲ್ಲ. ಯಾವಾಗಲೂ ಸುಳ್ಳು ಹೇಳುವವರಿಗೆ ಸತ್ಯವು ಯಾವಾಗಲೂ ಅಹಿತಕರವಾಗಿರುತ್ತದೆ ಎಂಬುದು ಸತ್ಯ.ಇದು ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ, ಆದರೆ ಇಡೀ ದೇಶಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್