AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ ಸಿಎಂ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ: ರಾಜ್ಯಪಾಲರ ಆಕ್ರೋಶ

ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನಡುವೆ ನಡೆಯುತ್ತಿರುವ ಅಂತರ್ಯುದ್ಧ ಕೊನೆಗೊಳ್ಳುತ್ತಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಪಂಜಾಬ್​​ ಸಿಎಂ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ: ರಾಜ್ಯಪಾಲರ ಆಕ್ರೋಶ
ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 07, 2023 | 3:35 PM

ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ನಡುವಿನ ಗುದ್ದಾಟ ಇದೀಗ ದೆಹಲಿಯಿಂದ ಪಂಜಾಬ್​​​ಗೆ ತಲುವಿದೆ.  ಹೌದು ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕ್ರೇಜಿವಾಲ್​​ ಮತ್ತು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರ ಮಧ್ಯೆ ಆಡಳಿತ್ಮಾಕ ವಾಗ್ವಾದ ನಡೆಯುತ್ತಿದೆ. ಇದೀಗ ಈ ಗಾಳಿ ಪಂಜಾಬ್​​ಗೂ ಬಿಸಿದೆ. ಪಂಜಾಬ್​​ನಲ್ಲಿ ಕೂಡ ಇಂತಹದೇ ಸ್ಥಿತಿ ತಲೆದೂರಿದೆ. ಕೆಲವು ದಿನಗಳಿಂದ ಪಂಜಾಬ್ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವೆ ಒಂದಲ್ಲ ಒಂದು ವಿಷಯಕ್ಕೆ ಒಳಜಗಳ ಉಂಟಾಗುತ್ತಿದೆ. ಈ ಹಿಂದೆ ಪರೋಕ್ಷವಾಗಿ ಒಬ್ಬರನ್ನೊಬ್ಬರು ದೂರುತ್ತಿದ್ದರು, ಇದೀಗ ನೇರ ನೇರ ವಾಗ್ದಾಳಿ ನಡೆಸುತ್ತಿದ್ದಾರೆ. ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್ (Banwari Lal Purohit) ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನಡುವೆ ನಡೆಯುತ್ತಿರುವ ಅಂತರ್ಯುದ್ಧ ಕೊನೆಗೊಳ್ಳುತ್ತಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಮತ್ತೆ ತಮ್ಮ ವಿರುದ್ಧ ಕೆಟ್ಟಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಸಿಎಂ ವಿರುದ್ಧ ದೂರು ನೀಡುವೇ ಎಂದು ರಾಜ್ಯಪಾಲರು ಹೇಳಿದ್ದಾರೆ. ಸಿಎಂ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದದಿಂದಾಗಿ ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕಾರವಾದ ವಿಧೇಯಕಗಳು ರಾಜ್ಯಪಾಲರಿಂದ ಅಂಗೀಕಾರವಾಗಿಲ್ಲ ಎಂದು ಹೇಳಲಾಗಿದೆ.

ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ರಾಜ್ಯಪಾಲರು, ಸಿಎಂ ಭಗವಂತ್ ಮಾನ್ ಅವರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜೂನ್‌ನಲ್ಲಿ ವಿಧಾನಸಭೆ ಅಧಿವೇಶನ ಕರೆದಾಗಿನಿಂದ ಭಗವಂತ್ ಮಾನ್ ಅವರು ತಮ್ಮ ವರ್ಚಸ್ಸು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ರಾಜ್ಯಪಾಲ ಬನ್ವಾರಿ ಲಾಲ್‌ ಪುರೋಹಿತ್‌ ಹೇಳಿದ್ದಾರೆ.

ನನ್ನ ವಿರುದ್ಧ ತಪ್ಪು ಪದ ಬಳಕೆ

ವಿಧಾನಸೌಧದ ಕಲಾಪದ ವೇಳೆ ಎಲ್ಲರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ತಮ್ಮ ವಿರುದ್ಧ ತಪ್ಪು ಪದಗಳನ್ನು ಬಳಸಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ಸದನದಲ್ಲಿ ಮಾತನಾಡುವಾಗ ರಾಜ್ಯಪಾಲರು ಪತ್ರ ಬರೆಯುತ್ತಲೇ ಇರುತ್ತಾರೆ, ಸೋಮಾರಿ ಎಂಬಿತ್ಯಾದಿ ಪದಗಳನ್ನು ಬಳಸಲಾಗಿದೆ. ಒಬ್ಬ ಮುಖ್ಯಮಂತ್ರಿ ಇಂತಹ ಭಾಷೆ ಬಳಸಬಾರದು ಎಂದು ರಾಜ್ಯಪಾಲರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್​​ ಸಿಎಂ ಅಮರಿಂದರ್​ ಸಿಂಗ್​ ರಾಜೀನಾಮೆ?-ಬಿಜೆಪಿ ಹಾದಿಯನ್ನೇ ತುಳಿಯಿತಾ ಕಾಂಗ್ರೆಸ್​ !

ಸಿಎಂಗೆ ಸದನದಲ್ಲಿ ಕಾನೂನಿನ ರಕ್ಷಣೆ ಇದೆ

ಸದನದಲ್ಲಿ ಕಾನೂನು ರಕ್ಷಣೆ ಇರುವುದರಿಂದ ಮುಖ್ಯಮಂತ್ರಿಗೆ ರಕ್ಷಣೆ ನೀಡಲಾಗಿದೆ. ಸದನದ ಹೊರಗೆ ಇದೇ ಆರೋಪ ಮಾಡಿದ್ದರೆ ಇಷ್ಟೊತ್ತಿಗೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತಿದ್ದೆ. ಸಿಎಂ ಮಾನಹಾನಿ ಮಾಡುತ್ತಿದ್ದಾರೆ ಎಂದು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಆರೋಪಿಸಿದ್ದಾರೆ.

ರಾಜ್ಯಪಾಲರ ಮೇಲೆ ಒತ್ತಡ ಹೇರಿಕೆ ಅಥವಾ ಬೆದರಿಕೆ ಆರೋಪದ ಮೇಲೆ ಮುಖ್ಯಮಂತ್ರಿ ಭಗವನ್​ ಮಾನ್ ವಿರುದ್ಧವೂ ಕಾನೂನು ಕ್ರಮ ಜರುಗಿಸಬಹುದು ಎಂದು ರಾಜ್ಯಪಾಲರು ಹೇಳಿದ್ದಾರೆ. ಮುಖ್ಯಮಂತ್ರಿ ಅವರ ತಮ್ಮ ಭಾಷೆಯ ಬಗ್ಗೆ ನಿಗಾವಹಿಸಬೇಕು ಮತ್ತು ಕಾರಣವಿಲ್ಲದೆ ನಿಂದನೆ ಮಾಡಬಾರದು. ರಾಜ್ಯಪಾಲರಿಗೆ ಹಲವು ಅಧಿಕಾರಗಳಿವೆ. ನಾನು ಬೇಕಾದರೆ ಮುಖ್ಯಮಂತ್ರಿಗಳ ಪ್ರತಿ ತಪ್ಪು ಹೇಳಿಕೆಗೆ ನಾನು ಪ್ರತಿಕ್ರಿಯಿಸಬಹುದು, ಆದರೆ ನಾನು ಹಾಗೆ ಮಾಡುವುದಿಲ್ಲ ಎಂದು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:31 pm, Mon, 7 August 23

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್