AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕುಟುಂಬದಿಂದ 3ನೇ ವ್ಯಕ್ತಿ ಎಲೆಕ್ಷನ್​ಗೆ ಬಂದರೆ ರಾಜೀನಾಮೆ ಕೊಡ್ತೀನಿ; ಸಚಿವ ಮುರುಗೇಶ್ ನಿರಾಣಿ

ಮೊದಲಿನಿಂದಲೂ ನಮ್ಮಿಬ್ಬರಿಗೆ ಎಲೆಕ್ಷನ್​ಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ತಿಳಿಸಿದ ಮುರುಗೇಶ್ ನಿರಾಣಿ, ನಾನಾಗಲಿ, ನನ್ನ ತಮ್ಮನಾಗಲಿ ರಾಮದುರ್ಗದಲ್ಲಿ ಕಾಲಿಟ್ಟಿಲ್ಲ ಎಂದು ಸ್ಪಷ್ಟತೆ ನೀಡಿದ್ದಾರೆ.

ನಮ್ಮ ಕುಟುಂಬದಿಂದ 3ನೇ ವ್ಯಕ್ತಿ ಎಲೆಕ್ಷನ್​ಗೆ ಬಂದರೆ ರಾಜೀನಾಮೆ ಕೊಡ್ತೀನಿ; ಸಚಿವ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ
TV9 Web
| Edited By: sandhya thejappa|

Updated on:Jun 01, 2022 | 12:18 PM

Share

ಬೆಳಗಾವಿ: ನಮ್ಮ ಕುಟುಂಬದಿಂದ 3ನೇ ಸಹೋದರ ಎಲೆಕ್ಷನ್​ಗೆ (Election) ಬಂದರೆ ರಾಜೀನಾಮೆ ನೀಡುತ್ತೇನೆ. ಆದರೆ, ನಿರಾಣಿ ಕುಟುಂಬದ 3ನೇಯವರು ರಾಜಕೀಯಕ್ಕೆ ಬರಲ್ಲ. ನಾನು, ಸಹೋದರ ಹನುಮಂತ ನಿರಾಣಿಯಿಂದ ಮಾತ್ರ ಸ್ಪರ್ಧೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿಕೆ ನೀಡಿದ್ದಾರೆ. ಪ್ರಧಾನಮಂತ್ರಿ ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ನಮ್ಮಿಬ್ಬರಿಗೆ ಎಲೆಕ್ಷನ್​ಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ತಿಳಿಸಿದ ಮುರುಗೇಶ್ ನಿರಾಣಿ, ನಾನಾಗಲಿ, ನನ್ನ ತಮ್ಮನಾಗಲಿ ರಾಮದುರ್ಗದಲ್ಲಿ ಕಾಲಿಟ್ಟಿಲ್ಲ ಎಂದು ಸ್ಪಷ್ಟತೆ ನೀಡಿದ್ದಾರೆ.

ಬಿವೈ ವಿಜಯೇಂದ್ರಗೆ ಭವಿಷ್ಯ ಇದೆ- ಮುರುಗೇಶ್ ನಿರಾಣಿ: ಇದೇ ವೇಳೆ ಬಿವೈ ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಿಂದ 20 ಜನರ ಪಟ್ಟಿ ಹೈಕಮಾಂಡ್‌ಗೆ ಕಳುಹಿಸಿದ್ದೆವು. ಅದರಲ್ಲಿ ನಾಲ್ಕು ಜನರನ್ನ ಹೈಕಮಾಂಡ್ ಆಯ್ಕೆ ಮಾಡಿದೆ. ನಾವು ಕಳುಹಿಸಿದ ಪಟ್ಟಿಯಲ್ಲಿನ ಹೆಸರು ಆಯ್ಕೆ ಮಾಡಿದ್ದಾರೆ. ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ಆಯ್ಕೆ ಮಾಡಲಾಗಿದೆ. ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಭವಿಷ್ಯ ಇದೆ ಎಂದರು.

ವಿಜಯೇಂದ್ರಗೆ ಆರ್​ಎಸ್​ಎಸ್​​, ಪಕ್ಷದ ಹಿರಿಯರ ಆಶೀರ್ವಾದ ಇದೆ. ಮುಂಬರುವ ದಿನಗಳಲ್ಲಿ ಒಳ್ಳೆಯ ನಾಯಕರಾಗಿ ಬರುತ್ತಾರೆ. ರಾಜ್ಯದ ತುಂಬಾ ಪಕ್ಷ‌ ಸಂಘಟನೆಯ ಕೆಲಸ ಮಾಡುತ್ತಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಹಿರಿಯರಿಗೆ ಅವಕಾಶ ಕೊಟ್ಟಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ತಲೆಬಾಗಲೇಬೇಕು ಎಂದು ನಿರಾಣಿ ತಿಳಿಸಿದರು.

ಇದನ್ನೂ ಓದಿ
Image
ಕೇಂದ್ರದಿಂದ ರಾಜ್ಯಕ್ಕೆ 8633 ಕೋಟಿ ರೂ. ಜಿ.ಎಸ್​.ಟಿ ಪರಿಹಾರ: ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್​ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ
Image
ಕೊಪ್ಪಳದ ಕಿಷ್ಕಿಂಧೆಯಲ್ಲೇ ಹನುಮ ಹುಟ್ಟಿದ್ದ ಎನ್ನುವುದಕ್ಕೆ ಏನೆಲ್ಲಾ ಕುರುಹುಗಳಿವೆ?
Image
ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗೃಹ ನಿರ್ಮಾಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ
Image
ಹಳ್ಳಿಗಳ ನಾಡಿಮಿಡಿತ ಅರಿತ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಜನ್ಮದಿನ ಇಂದು

ಇದನ್ನೂ ಓದಿ: ಕೊಪ್ಪಳದ ಕಿಷ್ಕಿಂಧೆಯಲ್ಲೇ ಹನುಮ ಹುಟ್ಟಿದ್ದ ಎನ್ನುವುದಕ್ಕೆ ಏನೆಲ್ಲಾ ಕುರುಹುಗಳಿವೆ?

ಆರ್‌ಎಸ್ಎಸ್ ಕುರಿತು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದ ಬಗ್ಗೆ ಮಾತನಾಡಿದ ನಿರಾಣಿ, ಈ ಬಗ್ಗೆ ಈಗಾಗಲೇ ದೊಡ್ಡವರು ಉತ್ತರ ಕೊಟ್ಟಿದ್ದಾರೆ. ಆರ್‌ಎಸ್ಎಸ್​ನವರು ಸ್ವಂತದ ಸಲುವಾಗಿ ಏನೂ ಮಾಡದೇ ದೇಶಕ್ಕೆ ತ್ಯಾಗ ಮಾಡಿದ್ದಾರೆ. ತಮ್ಮನ್ನೇ ತಾವು ಸಮರ್ಪಣೆ ಮಾಡಿಕೊಂಡಿದ್ದಾರೆ. ಅವರೇನು ಫೈವ್ ಸ್ಟಾರ್ ಹೋಟೆಲ್‌ನಲ್ಲಿ ಇರಲ್ಲ, ವಿಮಾನದಲ್ಲಿ ಅಡ್ಡಾಡಲ್ಲ. ಅತ್ಯಂತ ಕಟ್ಟ ಕಡೆಯ ಮನುಷ್ಯ ಯಾವ ರೀತಿ ಜೀವನ ಮಾಡುತ್ತಾನೆ ಆ ರೀತಿ ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ದೇಶದ ಸಲುವಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡವರಿಗೆ ಬೇರೆಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅಭಿಪ್ರಾಯಪಟ್ಟರು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Wed, 1 June 22

Follow Us
Web contact
Web contact

TV9 Kannada

Read More