AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಸಚಿವ ಕೆ.ವೆಂಕಟೇಶ್​ ಪ್ರಶ್ನೆ

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್​ ಪ್ರಶ್ನೆ ಮಾಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Jun 03, 2023 | 3:29 PM

Share

ಮೈಸೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ (Minister K Venkatesh)​ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಧ್ಯಮದರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ನಮ್ಮ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ಕಷ್ಟ ಪಡಬೇಕಾಯಿತು. 25 ಜನ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ಮೂಲಕ ಹಸುವಿನ ಮೃತದೇಹ ಹೂಳಬೇಕಾಯಿತು. ಹಾಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಗೋಶಾಲೆಗಳನ್ನು ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ ಎಂದು ಸಚಿವ ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಗೋಮಾಂಸ ದಂಧೆ: ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಅಮುಲ್​ ವಿಚಾರವಾಗಿ ಮಾತನಾಡಿದ ಅವರು ರಾಜ್ಯಕ್ಕೆ ಅಮುಲ್​ ಬಂದಿಲ್ಲ. ಅಮುಲ್​ ಉತ್ಪನ್ನಗಳಿಂದ ನಂದಿನಿ ಉತ್ಪನ್ನಗಳಿಗೆ ತೊಂದರೆ ಆಗಿಲ್ಲ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಾಂಸಕ್ಕಾಗಿ ಗೋವುಗಳ ಮಾರಣಹೋಮ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮಾಂಸಕ್ಕಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ. ಗೋವುಗಳ ಕಳ್ಳತನ ಮಾಡಿ ದಂಧೆಕೋರರು ಗೋಹತ್ಯೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲೆಯ N.R ಪುರ‌‌ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ‌, ಎಂಟು ಕಾಲುಗಳು ಪತ್ತೆ ಆಗಿವೆ.

ಇದನ್ನೂ ಓದಿ: Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ

ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, N.Rಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಬಿಡುತ್ತಿಲ್ಲ. ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿದೆ. ಸತ್ತಿಹಳ್ಳಿ ಗ್ರಾಮದಲ್ಲಿ ಗೋವುಗಳ ಕಳ್ಳತನ ನಡೆದಿದ್ದು, ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಕಳ್ಳತನ ಮಾಡಿದ ಗೋವುಗಳ ಮಾಂಸವನ್ನು ದಂಧೆಕೋರರು ಮಾರಾಟ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Sat, 3 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್