ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್

| Updated By: ರಮೇಶ್ ಬಿ. ಜವಳಗೇರಾ

Updated on: Oct 08, 2022 | 5:08 PM

ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕೈ ನಾಯಕರಿಗೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಬಹಿರಂಗ ಸವಾಲು ಹಾಕಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್
Shivanagowda Nayak
Follow us on

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಕದಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ. ಒಂದು ಪಕ್ಷದ ಮೇಲೆ ಮತ್ತೊಂದು ಪಕ್ಷದವರ ಆರೋಪ- ಪ್ರತ್ಯಾರೋಪಗಳ ಅಬ್ಬರ ಜೋರಾಗಿವೆ.

ಇದರ ಮಧ್ಯೆ ರಾಯಚೂರಿನಲ್ಲಿ ಬಿಜೆಪಿ ಶಾಸಕ ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್, ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕಾಂಗ್ರೆಸ್​ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ರಾಯಚೂರು ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ  ಶಾಸಕ ಶಿವನಗೌಡ ನಾಯಕ್, ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ದರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ಇಡಿ ವಿಚಾರಣೆ ಅಂತ್ಯ: ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕೆಂದ ಡಿಕೆಶಿ

ರಾಯಚೂರು ಜಿಲ್ಲೆಯಲ್ಲಿ ಏಳು ಸೀಟ್​ನಲ್ಲಿ ಏಳಕ್ಕೆ ಏಳು ಗೆದ್ದು ಬಿಡ್ತೀವಿ ಅಂತ ಕಾಂಗ್ರೆಸ್​ನವರು ಅಂತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸೀಟ್ ಗೆದ್ದರೆ ನಾನು ಒತ್ತಟ್ಟಿನ(ಅರ್ಧಭಾಗ)ಮೀಸೆ ಬೋಳಿಸಿಕೊಳ್ಳಿತ್ತೇನೆ ಎಂದು ಕೈ ನಾಯಕರಿಗೆ ಬಹಿರಂಗ ಸವಾಲು ಹಾಕಿದರು.

ಕಾಂಗ್ರೆಸ್ ಏಳಕ್ಕೆ ಏಳು ಸೀಟ್ ಗೆಲ್ಲುವುದು ಅದು ಅಸಾಧ್ಯವಾದ ಮಾತು. ನಮ್ಮ ಜಿಲ್ಲೆಯಲ್ಲಿ ನಾವು ಕನಿಷ್ಠ 5 ಸೀಟ್ ಗೆಲ್ಲುತ್ತೇವೆ.ಇದು ನಮ್ಮ ವಚನ. ಶಿವನಗೌಡರೇ ನೀವು ನಿಲ್ಲೋದು ಬೇಡ ಅಂತ ಪಕ್ಷ ಹೇಳಿದರೂ ಅದಕ್ಕೆ ನಾನ್ ರೆಡಿ. ಏಳು ಕ್ಷೇತ್ರದಲ್ಲಿ ಓಡಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸೋದಕ್ಕೆ ರೆಡಿ ಎಂದು ಹೇಳಿದರು.

ಇದನ್ನೂ ಓದಿ: ಯಡಿಯೂರಪ್ಪಗೆ “ಗಿರಾಕಿ” ಎಂದು ಜರಿದ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ .ಶಿವನಗೌಡ ನಾಯಕ್. ಮೊನ್ನೆ ಕುಮಾರಸ್ವಾಮಿ ಹೈದರಾಬಾದ್​ಗೆ ಹೋಗಿದ್ದ. ಅಲ್ಲಿ ಚುನಾವಣೆಗೆ ದುಡ್ಡು ಕೀಳೋಕೆ ಹೋಗಿದ್ದ. ಚುನಾವಣೆ ಬಂದಾಗ ಅಲ್ಲಿ ಇಲ್ಲಿ ಓಡಾಡಿ. ಹಾಗೇ ಬ್ರದರ್ ಹೀಗೆ ಬ್ರದರ್ ಅಂತ ಕಣ್ಣೀರು ಹಾಕಿ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ