ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್

ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕೈ ನಾಯಕರಿಗೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಬಹಿರಂಗ ಸವಾಲು ಹಾಕಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ: ಕೈ ನಾಯಕರಿಗೆ ಬಿಜೆಪಿ ಶಾಸಕ ಸವಾಲ್
Shivanagowda Nayak
Edited By:

Updated on: Oct 08, 2022 | 5:08 PM

ರಾಯಚೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕರ್ನಾಕದಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ. ಒಂದು ಪಕ್ಷದ ಮೇಲೆ ಮತ್ತೊಂದು ಪಕ್ಷದವರ ಆರೋಪ- ಪ್ರತ್ಯಾರೋಪಗಳ ಅಬ್ಬರ ಜೋರಾಗಿವೆ.

ಇದರ ಮಧ್ಯೆ ರಾಯಚೂರಿನಲ್ಲಿ ಬಿಜೆಪಿ ಶಾಸಕ ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್, ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ಕಾಂಗ್ರೆಸ್​ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ರಾಯಚೂರು ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ  ಶಾಸಕ ಶಿವನಗೌಡ ನಾಯಕ್, ಜಿಲ್ಲೆಯಲ್ಲಿ ಕಾಂಗ್ರೆಸ್ 7 ಕ್ಷೇತ್ರ ಗೆದ್ದರೆ ಅರ್ಧಭಾಗ ಮೀಸೆ ಬೋಳಿಸಿಕೊಳ್ತಿನಿ ಎಂದು ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ಇಡಿ ವಿಚಾರಣೆ ಅಂತ್ಯ: ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕೆಂದ ಡಿಕೆಶಿ

ರಾಯಚೂರು ಜಿಲ್ಲೆಯಲ್ಲಿ ಏಳು ಸೀಟ್​ನಲ್ಲಿ ಏಳಕ್ಕೆ ಏಳು ಗೆದ್ದು ಬಿಡ್ತೀವಿ ಅಂತ ಕಾಂಗ್ರೆಸ್​ನವರು ಅಂತಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸೀಟ್ ಗೆದ್ದರೆ ನಾನು ಒತ್ತಟ್ಟಿನ(ಅರ್ಧಭಾಗ)ಮೀಸೆ ಬೋಳಿಸಿಕೊಳ್ಳಿತ್ತೇನೆ ಎಂದು ಕೈ ನಾಯಕರಿಗೆ ಬಹಿರಂಗ ಸವಾಲು ಹಾಕಿದರು.

ಕಾಂಗ್ರೆಸ್ ಏಳಕ್ಕೆ ಏಳು ಸೀಟ್ ಗೆಲ್ಲುವುದು ಅದು ಅಸಾಧ್ಯವಾದ ಮಾತು. ನಮ್ಮ ಜಿಲ್ಲೆಯಲ್ಲಿ ನಾವು ಕನಿಷ್ಠ 5 ಸೀಟ್ ಗೆಲ್ಲುತ್ತೇವೆ.ಇದು ನಮ್ಮ ವಚನ. ಶಿವನಗೌಡರೇ ನೀವು ನಿಲ್ಲೋದು ಬೇಡ ಅಂತ ಪಕ್ಷ ಹೇಳಿದರೂ ಅದಕ್ಕೆ ನಾನ್ ರೆಡಿ. ಏಳು ಕ್ಷೇತ್ರದಲ್ಲಿ ಓಡಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸೋದಕ್ಕೆ ರೆಡಿ ಎಂದು ಹೇಳಿದರು.

ಇದನ್ನೂ ಓದಿ: ಯಡಿಯೂರಪ್ಪಗೆ “ಗಿರಾಕಿ” ಎಂದು ಜರಿದ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ .ಶಿವನಗೌಡ ನಾಯಕ್. ಮೊನ್ನೆ ಕುಮಾರಸ್ವಾಮಿ ಹೈದರಾಬಾದ್​ಗೆ ಹೋಗಿದ್ದ. ಅಲ್ಲಿ ಚುನಾವಣೆಗೆ ದುಡ್ಡು ಕೀಳೋಕೆ ಹೋಗಿದ್ದ. ಚುನಾವಣೆ ಬಂದಾಗ ಅಲ್ಲಿ ಇಲ್ಲಿ ಓಡಾಡಿ. ಹಾಗೇ ಬ್ರದರ್ ಹೀಗೆ ಬ್ರದರ್ ಅಂತ ಕಣ್ಣೀರು ಹಾಕಿ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us