AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಕಮಿಷನ್​ ಆರೋಪ ಮಾಡಿರುವ ವಿಚಾರವಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ ಸಚಿವ ಎನ್ ಚಲುವರಾಯಸ್ವಾಮಿ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ
ಎನ್ ಚಲುವರಾಯಸ್ವಾಮಿ ಮತ್ತು ಹೆಚ್​ ಡಿ ಕುಮಾರಸ್ವಾಮಿ
ಮಂಜುನಾಥ ಕೆಬಿ
| Edited By: |

Updated on: Jul 08, 2023 | 9:05 PM

Share

ಹಾಸನ: ಎಲ್ಲವೂ ನನಗೆ ಗೊತ್ತು ಎನ್ನುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಬಳಿ ಕಮಿಷನ್ ಆರೋಪದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ (N Chaluvaraya Swamy) ಸವಾಲು ಹಾಕಿದರು. ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಕಮಿಷನ್​ ಆರೋಪ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಅವರು, ಫೈಲ್​, ಸಿಡಿ, ಪೆನ್​ಡ್ರೈವ್​ ಇದೆ ಎಂದು ಹೊಸದಾಗಿ ಹೇಳಿದ್ದಾರಾ? ಅವರು ಹೀಗೆ ಹೇಳಿದ್ದನ್ನು ಬಹಳ ದಿನದಿಂದ ನಾನು ನೋಡಿದ್ದೇನೆ ಎಂದರು.

ಅಧಿಕಾರ ಇಲ್ಲದಿದ್ದಾಗ ಯಾವಾಗ ಸಮಾಧಾನದಿಂದ ಕೆಲಸ ಮಾಡಿದ್ದಾರೆ? ಬಜೆಟ್ ಮಂಡಿಸುವಾಗ ವಿಪಕ್ಷ ನಾಯಕರಾಗಿ ಕುಮಾರಸ್ವಾಮಿ ಬಂದಿದ್ದಾರಾ? ಬಜೆಟ್​ ಅಧಿವೇಶನಕ್ಕೆ ಬರದೆ ಆ ಬಗ್ಗೆ ಮಾತಾಡಲು ನೈತಿಕತೆ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ ಸಚಿವರು, ಕುಮಾರಸ್ವಾಮಿ ಎಲ್ಲವೂ ನನಗೆ ಗೊತ್ತು ಅಂತಾರೆ. ಅವರ ಬಳಿ ಏನೂ ಇರಲ್ಲ ಆದರೂ ಇದೆ ಎಂದು ಹೇಳುತ್ತಾರೆ. ಒಂದು ವೇಳೆ ಏನಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಇದನ್ನೂ ಓದಿ: ಅವತ್ತು ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ್ದಿರಿ, ಇವತ್ತೂ ಅದೇ ಪರಿಸ್ಥಿತಿ ಅಲ್ಲವಾ? ಚಲುವರಾಯಸ್ವಾಮಿನೂ ರಿಸೈನ್ ಮಾಡಲಿ: ಕುಮಾರಸ್ವಾಮಿ

ವೈಯಕ್ತಿಕವಾಗಿ ಒಳ್ಳೆಯ ಬಜೆಟ್ ಎಂದ ಬಿಜೆಪಿ

ರಾಜ್ಯ ಬಜೆಟ್​ ಬಗ್ಗೆ ಬಿಜೆಪಿ ನಾಯಕರಿಂದ ಟೀಕೆ ವಿಚಾರವಾಗಿ ಮಾತನಾಡಿದ ಚಲುವರಾಯಸ್ವಾಮಿ, ಯಾವುದಾದರು ವಿರೋಧ ಪಕ್ಷ ಬಜೆಟ್​ ಒಪ್ಪಿಕೊಂಡಿದ್ದು ಇದೆಯಾ ಎಂದು ಪ್ರಶ್ನಿಸಿದರು. ಇಂತಹ ಬಜೆಟ್ ಯಾರೂ ಮಾಡಲು ಆಗಲ್ಲ. ಬಿಜೆಪಿ ಅಧಿಕಾರದಲ್ಲಿದ್ದರೆ ಯೋಜನೆ ಜಾರಿ ಮಾಡಲು ಆಗುತ್ತಿರಲಿಲ್ಲ. ಪ್ರಣಾಳಿಕೆಯಲ್ಲಿ ಕೊಟ್ಟ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದೇವೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ವಾಸ್ತವ ಹೇಳಿದರೆ ಬಿಜೆಪಿಯವರಿಗೆ ಅರಗಿಸಿಕೊಕೊಳ್ಳಲು ಆಗುತ್ತಿಲ್ಲ. ವೈಯಕ್ತಿಕವಾಗಿ ಬಿಜೆಪಿಯ ಅನೇಕರು ಒಳ್ಳೆಯ ಬಜೆಟ್​ ಎಂದಿದ್ದಾರೆ

ರಾಜ್ಯದಲ್ಲಿ ಮುಂಗಾರು‌ ಮಳೆ ಕೊರತೆಯಾಗಿದೆ. ಹೀಗಾಗಿ ನಾಡಿನ ಜನತೆಗಾಗಿ ಶೃಂಗೇರಿಗೆ ಹೋಗಿ ಪೂಜೆ ಮಾಡಿದ್ದೇನೆ ಎಂದು ಹೇಳಿದ ಕೃಷಿ ಸಚಿವರು, ಬಿತ್ತನೆ ಶುರುವಾಗಿದೆ, ಇದೇ ರೀತಿ ಮಳೆಯಾದರೆ ಎಲ್ಲವೂ ಸರಿಯಾಗಲಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ