AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಕಮಿಷನ್​ ಆರೋಪ ಮಾಡಿರುವ ವಿಚಾರವಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ ಸಚಿವ ಎನ್ ಚಲುವರಾಯಸ್ವಾಮಿ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ
ಎನ್ ಚಲುವರಾಯಸ್ವಾಮಿ ಮತ್ತು ಹೆಚ್​ ಡಿ ಕುಮಾರಸ್ವಾಮಿ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on: Jul 08, 2023 | 9:05 PM

Share

ಹಾಸನ: ಎಲ್ಲವೂ ನನಗೆ ಗೊತ್ತು ಎನ್ನುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಬಳಿ ಕಮಿಷನ್ ಆರೋಪದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ (N Chaluvaraya Swamy) ಸವಾಲು ಹಾಕಿದರು. ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಕಮಿಷನ್​ ಆರೋಪ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಅವರು, ಫೈಲ್​, ಸಿಡಿ, ಪೆನ್​ಡ್ರೈವ್​ ಇದೆ ಎಂದು ಹೊಸದಾಗಿ ಹೇಳಿದ್ದಾರಾ? ಅವರು ಹೀಗೆ ಹೇಳಿದ್ದನ್ನು ಬಹಳ ದಿನದಿಂದ ನಾನು ನೋಡಿದ್ದೇನೆ ಎಂದರು.

ಅಧಿಕಾರ ಇಲ್ಲದಿದ್ದಾಗ ಯಾವಾಗ ಸಮಾಧಾನದಿಂದ ಕೆಲಸ ಮಾಡಿದ್ದಾರೆ? ಬಜೆಟ್ ಮಂಡಿಸುವಾಗ ವಿಪಕ್ಷ ನಾಯಕರಾಗಿ ಕುಮಾರಸ್ವಾಮಿ ಬಂದಿದ್ದಾರಾ? ಬಜೆಟ್​ ಅಧಿವೇಶನಕ್ಕೆ ಬರದೆ ಆ ಬಗ್ಗೆ ಮಾತಾಡಲು ನೈತಿಕತೆ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ ಸಚಿವರು, ಕುಮಾರಸ್ವಾಮಿ ಎಲ್ಲವೂ ನನಗೆ ಗೊತ್ತು ಅಂತಾರೆ. ಅವರ ಬಳಿ ಏನೂ ಇರಲ್ಲ ಆದರೂ ಇದೆ ಎಂದು ಹೇಳುತ್ತಾರೆ. ಒಂದು ವೇಳೆ ಏನಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಇದನ್ನೂ ಓದಿ: ಅವತ್ತು ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ್ದಿರಿ, ಇವತ್ತೂ ಅದೇ ಪರಿಸ್ಥಿತಿ ಅಲ್ಲವಾ? ಚಲುವರಾಯಸ್ವಾಮಿನೂ ರಿಸೈನ್ ಮಾಡಲಿ: ಕುಮಾರಸ್ವಾಮಿ

ವೈಯಕ್ತಿಕವಾಗಿ ಒಳ್ಳೆಯ ಬಜೆಟ್ ಎಂದ ಬಿಜೆಪಿ

ರಾಜ್ಯ ಬಜೆಟ್​ ಬಗ್ಗೆ ಬಿಜೆಪಿ ನಾಯಕರಿಂದ ಟೀಕೆ ವಿಚಾರವಾಗಿ ಮಾತನಾಡಿದ ಚಲುವರಾಯಸ್ವಾಮಿ, ಯಾವುದಾದರು ವಿರೋಧ ಪಕ್ಷ ಬಜೆಟ್​ ಒಪ್ಪಿಕೊಂಡಿದ್ದು ಇದೆಯಾ ಎಂದು ಪ್ರಶ್ನಿಸಿದರು. ಇಂತಹ ಬಜೆಟ್ ಯಾರೂ ಮಾಡಲು ಆಗಲ್ಲ. ಬಿಜೆಪಿ ಅಧಿಕಾರದಲ್ಲಿದ್ದರೆ ಯೋಜನೆ ಜಾರಿ ಮಾಡಲು ಆಗುತ್ತಿರಲಿಲ್ಲ. ಪ್ರಣಾಳಿಕೆಯಲ್ಲಿ ಕೊಟ್ಟ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದೇವೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ವಾಸ್ತವ ಹೇಳಿದರೆ ಬಿಜೆಪಿಯವರಿಗೆ ಅರಗಿಸಿಕೊಕೊಳ್ಳಲು ಆಗುತ್ತಿಲ್ಲ. ವೈಯಕ್ತಿಕವಾಗಿ ಬಿಜೆಪಿಯ ಅನೇಕರು ಒಳ್ಳೆಯ ಬಜೆಟ್​ ಎಂದಿದ್ದಾರೆ

ರಾಜ್ಯದಲ್ಲಿ ಮುಂಗಾರು‌ ಮಳೆ ಕೊರತೆಯಾಗಿದೆ. ಹೀಗಾಗಿ ನಾಡಿನ ಜನತೆಗಾಗಿ ಶೃಂಗೇರಿಗೆ ಹೋಗಿ ಪೂಜೆ ಮಾಡಿದ್ದೇನೆ ಎಂದು ಹೇಳಿದ ಕೃಷಿ ಸಚಿವರು, ಬಿತ್ತನೆ ಶುರುವಾಗಿದೆ, ಇದೇ ರೀತಿ ಮಳೆಯಾದರೆ ಎಲ್ಲವೂ ಸರಿಯಾಗಲಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!