AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಕಮಿಷನ್​ ಆರೋಪ ಮಾಡಿರುವ ವಿಚಾರವಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ ಸಚಿವ ಎನ್ ಚಲುವರಾಯಸ್ವಾಮಿ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ
ಎನ್ ಚಲುವರಾಯಸ್ವಾಮಿ ಮತ್ತು ಹೆಚ್​ ಡಿ ಕುಮಾರಸ್ವಾಮಿ
ಮಂಜುನಾಥ ಕೆಬಿ
| Edited By: Rakesh Nayak Manchi|

Updated on: Jul 08, 2023 | 9:05 PM

Share

ಹಾಸನ: ಎಲ್ಲವೂ ನನಗೆ ಗೊತ್ತು ಎನ್ನುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಬಳಿ ಕಮಿಷನ್ ಆರೋಪದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ (N Chaluvaraya Swamy) ಸವಾಲು ಹಾಕಿದರು. ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಕಮಿಷನ್​ ಆರೋಪ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಅವರು, ಫೈಲ್​, ಸಿಡಿ, ಪೆನ್​ಡ್ರೈವ್​ ಇದೆ ಎಂದು ಹೊಸದಾಗಿ ಹೇಳಿದ್ದಾರಾ? ಅವರು ಹೀಗೆ ಹೇಳಿದ್ದನ್ನು ಬಹಳ ದಿನದಿಂದ ನಾನು ನೋಡಿದ್ದೇನೆ ಎಂದರು.

ಅಧಿಕಾರ ಇಲ್ಲದಿದ್ದಾಗ ಯಾವಾಗ ಸಮಾಧಾನದಿಂದ ಕೆಲಸ ಮಾಡಿದ್ದಾರೆ? ಬಜೆಟ್ ಮಂಡಿಸುವಾಗ ವಿಪಕ್ಷ ನಾಯಕರಾಗಿ ಕುಮಾರಸ್ವಾಮಿ ಬಂದಿದ್ದಾರಾ? ಬಜೆಟ್​ ಅಧಿವೇಶನಕ್ಕೆ ಬರದೆ ಆ ಬಗ್ಗೆ ಮಾತಾಡಲು ನೈತಿಕತೆ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ ಸಚಿವರು, ಕುಮಾರಸ್ವಾಮಿ ಎಲ್ಲವೂ ನನಗೆ ಗೊತ್ತು ಅಂತಾರೆ. ಅವರ ಬಳಿ ಏನೂ ಇರಲ್ಲ ಆದರೂ ಇದೆ ಎಂದು ಹೇಳುತ್ತಾರೆ. ಒಂದು ವೇಳೆ ಏನಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದರು.

ಇದನ್ನೂ ಓದಿ: ಅವತ್ತು ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ್ದಿರಿ, ಇವತ್ತೂ ಅದೇ ಪರಿಸ್ಥಿತಿ ಅಲ್ಲವಾ? ಚಲುವರಾಯಸ್ವಾಮಿನೂ ರಿಸೈನ್ ಮಾಡಲಿ: ಕುಮಾರಸ್ವಾಮಿ

ವೈಯಕ್ತಿಕವಾಗಿ ಒಳ್ಳೆಯ ಬಜೆಟ್ ಎಂದ ಬಿಜೆಪಿ

ರಾಜ್ಯ ಬಜೆಟ್​ ಬಗ್ಗೆ ಬಿಜೆಪಿ ನಾಯಕರಿಂದ ಟೀಕೆ ವಿಚಾರವಾಗಿ ಮಾತನಾಡಿದ ಚಲುವರಾಯಸ್ವಾಮಿ, ಯಾವುದಾದರು ವಿರೋಧ ಪಕ್ಷ ಬಜೆಟ್​ ಒಪ್ಪಿಕೊಂಡಿದ್ದು ಇದೆಯಾ ಎಂದು ಪ್ರಶ್ನಿಸಿದರು. ಇಂತಹ ಬಜೆಟ್ ಯಾರೂ ಮಾಡಲು ಆಗಲ್ಲ. ಬಿಜೆಪಿ ಅಧಿಕಾರದಲ್ಲಿದ್ದರೆ ಯೋಜನೆ ಜಾರಿ ಮಾಡಲು ಆಗುತ್ತಿರಲಿಲ್ಲ. ಪ್ರಣಾಳಿಕೆಯಲ್ಲಿ ಕೊಟ್ಟ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದೇವೆ. ಹಂತ ಹಂತವಾಗಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ವಾಸ್ತವ ಹೇಳಿದರೆ ಬಿಜೆಪಿಯವರಿಗೆ ಅರಗಿಸಿಕೊಕೊಳ್ಳಲು ಆಗುತ್ತಿಲ್ಲ. ವೈಯಕ್ತಿಕವಾಗಿ ಬಿಜೆಪಿಯ ಅನೇಕರು ಒಳ್ಳೆಯ ಬಜೆಟ್​ ಎಂದಿದ್ದಾರೆ

ರಾಜ್ಯದಲ್ಲಿ ಮುಂಗಾರು‌ ಮಳೆ ಕೊರತೆಯಾಗಿದೆ. ಹೀಗಾಗಿ ನಾಡಿನ ಜನತೆಗಾಗಿ ಶೃಂಗೇರಿಗೆ ಹೋಗಿ ಪೂಜೆ ಮಾಡಿದ್ದೇನೆ ಎಂದು ಹೇಳಿದ ಕೃಷಿ ಸಚಿವರು, ಬಿತ್ತನೆ ಶುರುವಾಗಿದೆ, ಇದೇ ರೀತಿ ಮಳೆಯಾದರೆ ಎಲ್ಲವೂ ಸರಿಯಾಗಲಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್