AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್​​ಡ್ರೈವ್‌ ಬಿಡುಗಡೆ ಮಾಡಿದರೆ ಅದರಲ್ಲಿನ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು: ಎಂಬಿ ಪಾಟೀಲ್

ಹೆಚ್​ಡಿ ಕುಮಾರಸ್ವಾಮಿ ಅವರು ಪೆನ್​ಡ್ರೈವ್ ಬಿಡುಗಡೆ ಮಾಡಿದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಮಠಮಾನ್ಯಗಳ ಅನುದಾನ ಕಡಿತ ಮಾಡಿದ್ದಾರೆ ಎಂದು ಸಿಸಿ ಪಾಟೀಲ್ ಆರೋಪವಾಗಿ ಮಾತನಾಡಿದ ಅವರು, ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ ಎಂದರು.

ಪೆನ್​​ಡ್ರೈವ್‌ ಬಿಡುಗಡೆ ಮಾಡಿದರೆ ಅದರಲ್ಲಿನ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು: ಎಂಬಿ ಪಾಟೀಲ್
ಎಂಬಿ ಪಾಟೀಲ್ ಮತ್ತು ಹೆಚ್​ಡಿ ಕುಮಾರಸ್ವಾಮಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 09, 2023 | 5:37 PM

Share

ವಿಜಯಪುರ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಪೆನ್​ಡ್ರೈವ್ ಬಿಡುಗಡೆ ಮಾಡಿದರೆ ಅದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದರು. ಜಿಲ್ಲೆಯ ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಮಾತನಾಡಿದ ಅವರು, ಪೆನ್​​ಡ್ರೈವ್‌ನಲ್ಲಿರುವ ಸತ್ಯಾಸತ್ಯತೆ ಬಗ್ಗೆ ತಿಳಿದುಕೊಳ್ಳಬೇಕಾದರೆ ಪೆನ್​​ಡ್ರೈವ್ ಬಗ್ಗೆ ತನಿಖೆ ಮಾಡಬೇಕು. ಪೆನ್​​ಡ್ರೈವ್​ನಲ್ಲಿ ಸತ್ಯವಾದದ್ದು ಇದ್ದರೆ ಅದನ್ನೂ ತನಿಖೆ ಮಾಡಬೇಕಾಗುತ್ತದೆ ಎಂದರು.

ಪೆನ್​​ಡ್ರೈವ್‌ನಲ್ಲಿರುವ ಧ್ವನಿ ಯಾರದು ಎಂಬುದನ್ನು ಪರಿಶೀಲಿಸಬೇಕು. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಏಕೆಂದರೆ, ಈಗೆಲ್ಲ ಮಿಮಿಕ್ರಿ ಬೇರೆ ಮಾಡುತ್ತಾರೆ. ಕುಮಾರಸ್ವಾಮಿ ಅವರು ಪೆನ್​ಡ್ರೈವ್​​​ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ: ಎಂಬಿ ಪಾಟೀಲ್

ಮಠಮಾನ್ಯಗಳ ಅನುದಾನ ಕಡಿತ ಮಾಡಿದ್ದಾರೆ ಎಂಬ ಮಾಜಿ ಸಚಿವ ಸಿಸಿ ಪಾಟೀಲ್ ಆರೋಪದ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ. ಮಠ ಮಾನ್ಯಗಳ ಬಗ್ಗೆ ಅಪಾರ ಗೌರವ ಇದೆ. ಸಿ.ಸಿ.ಪಾಟೀಲ್ ಮಠ ಇದ್ದರೂ ಹೇಳಲಿ, ಅವರಿಗೂ ಹಣ ಕೊಡುತ್ತೇವೆ. ನಾವು ಭೇದ ಭಾವ ಮಾಡಲ್ಲ. ಹಿಂದೂ ಮಠಗಳು, ಕ್ರಿಶ್ಚಿಯನ್ ಚರ್ಚಗಳಿಗೆ, ಮುಸ್ಲಿಂ ಮಸೀದಿ, ಜೈನರ ಬಸದಿ, ಬೌದ್ಧ ವಿಹಾರಗಳನ್ನ ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಅನುದಾನ‌ ಕೊಡುತ್ತೇವೆ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಚಲುವರಾಯಸ್ವಾಮಿ

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಎಂಬಿ ಪಾಟೀಲ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವಾರು ಕಾಮಗಾರಿಯಲ್ಲಿ‌ ನಿಗದಿತ ಮೊತ್ತಕ್ಕಿಂತ ಹೆಚ್ಚು ಮೊತ್ತ ಬಿಡುಗಡೆ ಮಾಡಿಸಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ. ಸಿಸಿ ಪಾಟೀಲರು ತಮ್ಮ ಬಜೆಟ್​ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಸಿಸಿ ಪಾಟೀಲರು ಯಾಕೆ ಹೆಚ್ಚು ಖರ್ಚು ಮಾಡಿದರು, ಗೊತ್ತಲ್ಲ ಎಂದು ಟಾಂಗ್ ನೀಡಿದರು.

ನೀರಾವರಿ ಇಲಾಖೆಯಲ್ಲಿ 10-15 ಸಾವಿರ ಕೋಟಿ ಹೆಚ್ಚು ಖರ್ಚು ಮಾಡಿದ್ದಾರೆ. ಬಜೆಟ್​​ಗಿಂತ ಹೆಚ್ಚು ಯಾಕೆ ಖರ್ಚು ಮಾಡಿದ್ದೀರಿ? ಜನರನ್ನ ಯಾಕೆ ಮರಳು ಮಾಡಿದ್ದೀರಿ? ಇದರ‌ ಹಿಂದಿನ ಉದ್ದೇಶ ಏನು? ಎಂದು ಪ್ರಶ್ನಿಸಿದ ಎಂಬಿ ಪಾಟೀಲ್, ಬಿಬಿಎಂಪಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಲೂಟಿ ಹೊಡೆಯಲು ಬಜೆಟ್​ಗಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದಾರೆ. ಬಜೆಟ್​ಗಿಂತ ಹೆಚ್ಚು ಖರ್ಚು ಮಾಡುವಾಗ ನಿಮ್ಮ ಶಿಸ್ತು ಎಲ್ಲಿತ್ತು ? ನೀವು ಮಾಡಿದ ಅಕ್ರಮಗಳನ್ನ, ಅಶಿಸ್ತನ್ನ ಎಳೆ-ಎಳೆಯಾಗಿ ನಮ್ಮ ಸಿಎಂ ಬಜೆಟ್ ಪುಸ್ತಕದಲ್ಲಿಯೆ ಹೇಳಿ ಬಿಟ್ಟಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ