AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ

ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ತಮ್ಮ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ
ವಿ ಸೋಮಣ್ಣ
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on: Jan 06, 2024 | 12:07 PM

Share

ಬೆಂಗಳೂರು, ಜನವರಿ 06: ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.

ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: ದೇವೇಗೌಡರು ನನ್ನ ಗುರುಗಳು, ನಾನವರ ಶಿಷ್ಯ ಎಂದ ಮಾಜಿ ಸಚಿವ ವಿ ಸೋಮಣ್ಣ

ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಆಗುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು. ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಮಾತನಾಡಿದರು.

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ

ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್​ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.

ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Haniyadka
Kiran Haniyadka
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ