AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ

ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ
ನಿತೀಶ್ ಕುಮಾರ್
TV9 Web
| Edited By: |

Updated on:Sep 15, 2022 | 8:22 PM

Share

ಪಾಟ್ನಾ: 2024 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೇರಿದ್ದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ (special status) ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಗುರುವಾರ ಭರವಸೆ ನೀಡಿದ್ದಾರೆ. ನಮಗೆ ಸರ್ಕಾರ ರಚಿಸಲು ಅವಕಾಶ ಸಿಕ್ಕರೆ, ನಾವು ಖಂಡಿತವಾಗಿಯೂ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುತ್ತೇವೆ. ನಾನು ಬಿಹಾರದ ಬಗ್ಗೆ ಮಾತ್ರವಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾದ ಇತರ ರಾಜ್ಯಗಳ ಬಗ್ಗೆಯೂ ಮಾತನಾಡುತ್ತಿದ್ದೇನೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿತೀಶ್ ಹೇಳಿದ್ದಾರೆ. ನಿತೀಶ್ ಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು ವಿಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಹಲವಾರು ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ಬಿಜೆಪಿ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಿದರು. ಅವರು 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈ ವಿಷಯವನ್ನು ಜನತಾ ದಳವು ಕಾರ್ಯತಂತ್ರವಾಗಿ ಎತ್ತಿದೆ.

ಒಂದು ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದರೆ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಕೇಂದ್ರ-ರಾಜ್ಯ ನಿಧಿಯ ಅನುಪಾತವು 90:10 ಆಗಿದೆ, ಇದು ಇತರ ರಾಜ್ಯಗಳಿಗೆ ಅನುಪಾತಕ್ಕಿಂತ ಹೆಚ್ಚು ಅನುಕೂಲಕರವಾಗಿರುತ್ತದೆ. ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

ಸಂವಿಧಾನವು ರಾಜ್ಯಗಳಿಗೆ ಯಾವುದೇ ವಿಶೇಷ ವರ್ಗಕ್ಕೆ ಅವಕಾಶವನ್ನು ಹೊಂದಿಲ್ಲ. ಆದಾಗ್ಯೂ, ಈಗ ನಿಷ್ಕ್ರಿಯವಾಗಿರುವ ಯೋಜನಾ ಆಯೋಗದ ಭಾಗವಾಗಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಎಂಬ ಸಂಸ್ಥೆಯು ಹಲವಾರು ಅಂಶಗಳ ಆಧಾರದ ಮೇಲೆ ಈ 11 ರಾಜ್ಯಗಳಿಗೆ ವಿಶೇಷ ಸ್ಥಾನಮಾನವನ್ನು ಶಿಫಾರಸು ಮಾಡಿದೆ.

ತಾನು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ನಿತೀಶ್ ಹೇಳಿದ್ದರೂ  ಬಿಜೆಪಿಯನ್ನು ಎದುರಿಸಲು ಒಗ್ಗೂಡುವ ಯಾವುದೇ ವಿರೋಧ ಪಕ್ಷದ ಪ್ರಮುಖ ಧ್ವನಿಯಾಗಿ ಅವರು ತಮ್ಮನ್ನು  ನೋಡುತ್ತಾರೆ ಎಂಬುದನ್ನು ಈ ಘೋಷಣೆಗಳು ತೋರಿಸುತ್ತವೆ.

Published On - 8:20 pm, Thu, 15 September 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು