AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ

ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ
ನಿತೀಶ್ ಕುಮಾರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 15, 2022 | 8:22 PM

Share

ಪಾಟ್ನಾ: 2024 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೇರಿದ್ದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ (special status) ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಗುರುವಾರ ಭರವಸೆ ನೀಡಿದ್ದಾರೆ. ನಮಗೆ ಸರ್ಕಾರ ರಚಿಸಲು ಅವಕಾಶ ಸಿಕ್ಕರೆ, ನಾವು ಖಂಡಿತವಾಗಿಯೂ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುತ್ತೇವೆ. ನಾನು ಬಿಹಾರದ ಬಗ್ಗೆ ಮಾತ್ರವಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾದ ಇತರ ರಾಜ್ಯಗಳ ಬಗ್ಗೆಯೂ ಮಾತನಾಡುತ್ತಿದ್ದೇನೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿತೀಶ್ ಹೇಳಿದ್ದಾರೆ. ನಿತೀಶ್ ಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು ವಿಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಹಲವಾರು ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ಬಿಜೆಪಿ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಿದರು. ಅವರು 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈ ವಿಷಯವನ್ನು ಜನತಾ ದಳವು ಕಾರ್ಯತಂತ್ರವಾಗಿ ಎತ್ತಿದೆ.

ಒಂದು ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದರೆ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಕೇಂದ್ರ-ರಾಜ್ಯ ನಿಧಿಯ ಅನುಪಾತವು 90:10 ಆಗಿದೆ, ಇದು ಇತರ ರಾಜ್ಯಗಳಿಗೆ ಅನುಪಾತಕ್ಕಿಂತ ಹೆಚ್ಚು ಅನುಕೂಲಕರವಾಗಿರುತ್ತದೆ. ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

ಸಂವಿಧಾನವು ರಾಜ್ಯಗಳಿಗೆ ಯಾವುದೇ ವಿಶೇಷ ವರ್ಗಕ್ಕೆ ಅವಕಾಶವನ್ನು ಹೊಂದಿಲ್ಲ. ಆದಾಗ್ಯೂ, ಈಗ ನಿಷ್ಕ್ರಿಯವಾಗಿರುವ ಯೋಜನಾ ಆಯೋಗದ ಭಾಗವಾಗಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಎಂಬ ಸಂಸ್ಥೆಯು ಹಲವಾರು ಅಂಶಗಳ ಆಧಾರದ ಮೇಲೆ ಈ 11 ರಾಜ್ಯಗಳಿಗೆ ವಿಶೇಷ ಸ್ಥಾನಮಾನವನ್ನು ಶಿಫಾರಸು ಮಾಡಿದೆ.

ತಾನು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ನಿತೀಶ್ ಹೇಳಿದ್ದರೂ  ಬಿಜೆಪಿಯನ್ನು ಎದುರಿಸಲು ಒಗ್ಗೂಡುವ ಯಾವುದೇ ವಿರೋಧ ಪಕ್ಷದ ಪ್ರಮುಖ ಧ್ವನಿಯಾಗಿ ಅವರು ತಮ್ಮನ್ನು  ನೋಡುತ್ತಾರೆ ಎಂಬುದನ್ನು ಈ ಘೋಷಣೆಗಳು ತೋರಿಸುತ್ತವೆ.

Published On - 8:20 pm, Thu, 15 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ