AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಕಣಕ್ಕೆ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತು ಖನಿಜ ನಿಗಮ ಮಾಜಿ ಅದ್ಯಕ್ಷ ಎಸ್.ಲಿಂಗಮೂರ್ತಿ ನಡುವಿನ ಶೀತಲಸಮರ ಹಿನ್ನಲೆ ನಡೆಸಲಾದ ಸಂಧಾನಸಭೆ ವಿಫಲಗೊಂಡಿದೆ.

ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಕಣಕ್ಕೆ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್
ಶಾಸಕ ಗೂಳಿಹಟ್ಟಿ ಚಂದ್ರೇಶರ್ ಮತ್ತು ಎಸ್.ಲಿಂಗಮೂರ್ತಿ
TV9 Web
| Edited By: Rakesh Nayak Manchi|

Updated on: Dec 13, 2022 | 7:56 AM

Share

ಚಿತ್ರದುರ್ಗ: ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (MLA Goolihatti Sekhar) ಮತ್ತು ಖನಿಜ ನಿಗಮ ಮಾಜಿ ಅದ್ಯಕ್ಷ ಎಸ್.ಲಿಂಗಮೂರ್ತಿ (S.Lingamurthy) ನಡುವೆ ನಡೆಯುತ್ತಿರುವ ವಾಕ್ಸಮರವು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುತ್ತಿದೆ. ಹೀಗಾಗಿ ಇಬ್ಬರನ್ನು ರಾಜಿ ಮಾಡಲು ಹೊಸದುರ್ಗ (Hosadurga) ಪಟ್ಟಣದಲ್ಲಿ ನಡೆದ ಸಂಧಾನ ಸಭೆ ನಡೆಸಲಾಯಿತು. ಆದರೆ ಈ ಸಭೆಯು ವಿಫಲಗೊಂಡಿದೆ. ಮುಂದಿನ ಬಾರಿ ಪಕ್ಷದಿಂದ ತನಗೆ ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ, ನೀಡದಿದ್ದರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಸವಾಲು ಹಾಕಿದ್ದಾರೆ. ಈ ರಾಜಕೀಯ ಬೆಳವಣಿಗೆಯು ಚುನಾವಣೆ ಸಮಯದಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆ ಇದೆ.

ಹೊಸದುರ್ಗದ ಪಟ್ಟಣದಲ್ಲಿ‌ ಕಳಪೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡಿದ್ದ ಖನಿಜ ನಿಗಮ‌ ಮಾಜಿ ಅದ್ಯಕ್ಷ ಎಸ್.ಲಿಂಗಮೂರ್ತಿ ಅವರು, ಹೊಸದುರ್ಗದಲ್ಲಿ ಜನರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಭ್ರಷ್ಟ ಶಾಸಕ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕರು, ಎಸ್.ಲಿಂಗಮೂರ್ತಿ ಭ್ರಷ್ಟ ಎಂಬುದು ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಟಿಕೆಟ್ ತಪ್ಪಿಸಲು ಅಪಪ್ರಚಾರ ನಡೆಯುತ್ತಿದೆ ಎಂದಿದ್ದರು.

ಇದನ್ನೂ ಓದಿ: ರಾಜ್ಯದ 20 ಜಿಲ್ಲೆಗಳಲ್ಲಿ ನಾವೆಲ್ಲರೂ ಒಟ್ಟಿಗೆ ಬಸ್​ ಯಾತ್ರೆ ಮಾಡುತ್ತೇವೆ: ಸಿದ್ದರಾಮಯ್ಯ

ಹೊಸದುರ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿರುವ ಗೂಳಿಹಟ್ಟಿ ಶೇಖರ್ ಮತ್ತು ಲಿಂಗಮೂರ್ತಿ ನಡುವಿನ ಟೀಕಾಪ್ರಹಾರಗಳು ಪಕ್ಷಕ್ಕೆ ಧಕ್ಕೆ ಉಂಟು ಮಾಡಿದ್ದಲ್ಲದೆ, ಗೊಂದಲದ ವಾತಾವಣ ನಿರ್ಮಾಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ನಾಯಕರು ಸಂಧಾನ ಸಭೆಗೆ ಮುಂದಾಗಿದ್ದರು. ಅದರಂತೆ ಹೊಸದುರ್ಗ ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ಎಂಎಲ್​ಸಿ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾದ್ಯಕ್ಷ ಎ.ಮುರುಳಿ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಯಿತು.

ಇಬ್ಬರು ನಾಯಕರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಗೆ ಗೂಳಿಹಟ್ಟಿ ಶೇಖರ್ ಮತ್ತು ಲಿಂಗಮೂರ್ತಿ ಅವರು ಭಾಗಿಯಾಗಿದ್ದರು. ಪಕ್ಷದ ಸೂಚನೆಯಂತೆ ನಡೆದುಕೊಳ್ಳಲು ಸಭೆಯಲ್ಲಿ ಸೂಚನೆ ನೀಡಲಾಯಿತು. ಆದರೆ ಈ ಸಭೆ ಬಹುತೇಕ ವಿಫಲಗೊಂಡಂತೆ ಎದ್ದು ಕಾಣುತ್ತಿದೆ. ಸಭೆಯಲ್ಲಿ ಸಮಾಧಾನಗೊಂಡಂತೆ ಕಾಣದ ಗೂಳಿಹಟ್ಟಿ ಶೇಖರ್, ಬಿಜೆಪಿ ಟಿಕೆಟ್ ನೀಡಿದರೆ ಬಿಜೆಪಿಯಿಂದ‌ ಸ್ಪರ್ದಿಸುತ್ತೇನೆ, ಬಿಜೆಪಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ‌ ಸ್ಪರ್ಧಿಸುತ್ತೇನೆ. ಸೋತರೆ ಲೋಕಸಭೆ ಚುನಾವಣೆಗೂ‌ ಸ್ಪರ್ಧಿಸುತ್ತೇನೆ‌ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್