AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ಮಕ್ಕಳು ಭಾಗಿ ಆರೋಪ: ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದ ಹೆಚ್​ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲೂ ವರ್ಗಾವಣೆ ದಂಧೆ ನಡೆದಿತ್ತು ಎಂಬ ಆರೋಪಕ್ಕೆ ಹೆಚ್​​.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ಮಕ್ಕಳು ಭಾಗಿ ಆರೋಪ: ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ
Sahadev Mane
| Edited By: |

Updated on:Jul 06, 2023 | 2:25 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವಧಿಯಲ್ಲೂ ವರ್ಗಾವಣೆ ದಂಧೆ (Transfer Allegations) ನಡೆದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ  ಹೆಚ್​​.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ವಿಚಾರದಲ್ಲಿ ನನ್ನ ಮಕ್ಕಳು ಭಾಗಿಯಾಗಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಮಕ್ಕಳಿಂದ ಅಧಿಕಾರ ದುರ್ಬಳಕೆ ಆಗಿದ್ದರೇ ದಾಖಲೆ ನೀಡಿ. ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ವಿಧಾನಸೌಧದಲ್ಲಿ ಹೇಳಿದ್ದಾರೆ.

ಇನ್ನು ಕಾಂಗ್ರೆಸ್​​ ಸರ್ಕಾರದ ವರ್ಗಾವಣೆ ದಂಧೆ ಆರೋಪಕ್ಕೆ ಸಾಕ್ಷಿ ಎಂಬಂತೆ ಪೈನ್ ಡ್ರೈವ್ ಅಸ್ತ್ರ ವಿಚಾರವಾಗಿ ಮಾತನಾಡಿದ ಅವರು ಹೆದರಿ ಓಡೋಗಲ್ಲ, ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆ ನೋಡೋಣ. ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್​ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಹೇಳಬೇಕಲ್ಲ ಎಂದರು.

ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಿಲ್ಲ.  ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಯಾವತ್ತಾದರೂ ದಾಖಲೆ ಬಿಡುಗಡೆ ಮಾಡಿದ್ರಾ?ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದನ್ನ ನೋಡಲೇ ಇಲ್ಲ. ತಾರ್ಕಿಕ ಅಂತ್ಯ ಎಂಬುದು ನನ್ನಿಂದ ಅಲ್ಲ, ಈ ದೇಶದ ವ್ಯವಸ್ಥೆ. ರಾಜಕೀಯ ಪ್ರಭಾವ, ಧನ ಬಲ ಇರುವವರಿಂದ ತಾರ್ಕಿಕ ಅಂತ್ಯ ಅಸಾಧ್ಯ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ

ನಾಗಮಂಗಲ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು ಡೆತ್​ನೋಟ್​​ನಲ್ಲಿ ಸಚಿವ ಎನ್​.ಚಲುವರಾಯಸ್ವಾಮಿ ಹೆಸರು ಪ್ರಸ್ತಾಪ ಇದೆ. ಈವರೆಗೂ ಎಫ್​​ಐಆರ್ ದಾಖಲಾಗಿಲ್ಲ. ಕಾಂಗ್ರೆಸ್​ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ನಾಗಮಂಗಲ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದ ಬಗ್ಗೆ ನಿಯಮ 60ರ ಅಡಿ ಚರ್ಚೆಗೆ ಸಮಯ ಕೊಡುವಂತೆ ಹೆಚ್​ ಡಿ ಕುಮಾರಸ್ವಾಮಿ ಸ್ಪೀಕರ್​​ಗೆ ಮನವಿ ಮಾಡಿದರು. ಇನ್ನು ಚಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯಿಸಲಿರುವ ಜೆಡಿಎಸ್​ ಶಾಸಕರು ಸದನದಲ್ಲಿ ಪಟ್ಟು ಹಿಡಿದಿದ್ದಾರೆ.

ಹೆಚ್​ಡಿ.ಕುಮಾರಸ್ವಾಮಿ ಅವಧಿಯಲ್ಲೂ ವರ್ಗಾವಣೆ ದಂಧೆ: ಸಿದ್ದರಾಮಯ್ಯ ಪೊರೋಕ್ಷ ವಾಗ್ದಾಳಿ

ಕುಮಾರಸ್ವಾಮಿ ಯಾವಾಗಲೂ ಹಿಟ್ ಆ್ಯಂಡ್​ ರನ್ ಮಾಡುತ್ತಾರೆ. ಹಾಗಾದರೇ ಹೆಚ್​ಡಿಕೆ ಸರ್ಕಾರ ಇದ್ದಾಗ ಹಣ ತೆಗೆದುಕೊಂಡಿದ್ದಾರಾ? ಆ ರೀತಿ ಊಹಿಸಿಕೊಳ್ಳುವುದು ಸರಿಯಲ್ಲ. ಯಾವ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪುತ್ರ ಯತೀಂದ್ರ ಮನೆಯಲ್ಲಿ ಇರುತ್ತಾರೆ, ಅವರು ಮಾಜಿ ಶಾಸಕ. ಹೆಚ್​.ಡಿ.ಕುಮಾರಸ್ವಾಮಿ ಮನೆಯಲ್ಲಿ ಅವರ ಪುತ್ರ ಇರುತ್ತಾರೆ ಹೆಚ್​. ಡಿ ಕುಮಾರಸ್ವಾಮಿ ಅಣ್ಣ ಸಚಿವರು ಆಗಿದ್ದರು, ಅವರ ತಂದೆ ಪಿಎಂ ಆಗಿದ್ದವರು. ಅಣ್ಣ, ಮಕ್ಕಳು ಶಾಸಕರು ಆಗಿದ್ದರು, ಏನಂತ ಕರೆಯಬೇಕು. ನಾನು ಇದಕ್ಕೆಲ್ಲಾ ಅಧಿವೇಶನದಲ್ಲೇ ಉತ್ತರ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Thu, 6 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ