AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು.

‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ
ಇಮ್ರಾನ್ ಪ್ರತಾಪ್ ಗಡಿ
TV9 Web
| Edited By: sandhya thejappa|

Updated on: Nov 17, 2021 | 9:25 AM

Share

ಬೆಂಗಳೂರು: ‘ನೀವು ಟಿಪ್ಪು ಸುಲ್ತಾನ್ ನೆಲದಿಂದ ಬಂದವರು’. ‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’. ‘ನಿಮಗೆ ತಲೆ ಬಾಗುವುದು ತಿಳಿದಿಲ್ಲ, ತಲೆ ಎತ್ತುವುದು ತಿಳಿದಿದೆ’ ಅಂತ ಕಾಂಗ್ರೆಸ್ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಭಾಷಣ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ನ.16) ನಡೆದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು. ಶಾಹಿನ್ ಭಾಗ್ ಮಾದರಿ ಹೋರಾಟ ಹೈದರಾಬಾದ್ನಲ್ಲಿ ಏಕಿಲ್ಲ ಎಂದು ಪ್ರಶ್ನಿಸಿ ವಿವಾದ ಹುಟ್ಟುಹಾಕಿದ್ದರು. ಇಮ್ರಾನ್ ವಿರುದ್ಧ ಹೈದರಾಬಾದ್ ಪೋಲಿಸರು ಕೇಸ್ ಕೂಡಾ ದಾಖಲಿಸಿದ್ದರು.

ಅಧಿಕಾರಕ್ಕಾಗಿ ಆಡಳಿತಶಾಹಿ ಆಥವಾ ಕಾರ್ಯಾಂಗವನ್ನ ಮುಸ್ಲಿಂಮರು ವಶಕ್ಕೆ ಪಡೆದುಕೊಳ್ಳಬೇಕು ಅಂತ ಇಮ್ರಾನ್ ವಿವಾದ ಸೃಷ್ಟಿಸಿದ್ದರು. ಉತ್ತರ ಪ್ರದೇಶ ಮೂಲದ ನಾಯಕ ಇಮ್ರಾನ್ ಉರ್ದು ಕವಿಯೂ ಅಗಿದ್ದಾರೆ. ಇವರು ಉತ್ತರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪವನ್ನು ಹೊಂದಿದ್ದಾರೆ.

ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಕೆಲವರು ಡಿಕೆಶಿ, ಡಿಕೆಶಿ ಅಂತ ಮತ್ತು ಜಮೀರ್ ಹೆಸರು ಹೇಳಿ ಘೋಷಣೆ ಕೂಗಿದ್ದಾರೆ. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ. ಈ ನಡುವೆ ಇದು ಪೂರ್ವ ನಿಯೋಜಿತ ಪ್ಲ್ಯಾನ್ ಎಂಬ ಗುಸುಗುಸು ಕೂಡಾ ಕೇಳಿಬಂದಿದೆ.

ಇದನ್ನೂ ಓದಿ ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ

ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ