AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು.

‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ
ಇಮ್ರಾನ್ ಪ್ರತಾಪ್ ಗಡಿ
TV9 Web
| Edited By: |

Updated on: Nov 17, 2021 | 9:25 AM

Share

ಬೆಂಗಳೂರು: ‘ನೀವು ಟಿಪ್ಪು ಸುಲ್ತಾನ್ ನೆಲದಿಂದ ಬಂದವರು’. ‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’. ‘ನಿಮಗೆ ತಲೆ ಬಾಗುವುದು ತಿಳಿದಿಲ್ಲ, ತಲೆ ಎತ್ತುವುದು ತಿಳಿದಿದೆ’ ಅಂತ ಕಾಂಗ್ರೆಸ್ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಭಾಷಣ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ನ.16) ನಡೆದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು. ಶಾಹಿನ್ ಭಾಗ್ ಮಾದರಿ ಹೋರಾಟ ಹೈದರಾಬಾದ್ನಲ್ಲಿ ಏಕಿಲ್ಲ ಎಂದು ಪ್ರಶ್ನಿಸಿ ವಿವಾದ ಹುಟ್ಟುಹಾಕಿದ್ದರು. ಇಮ್ರಾನ್ ವಿರುದ್ಧ ಹೈದರಾಬಾದ್ ಪೋಲಿಸರು ಕೇಸ್ ಕೂಡಾ ದಾಖಲಿಸಿದ್ದರು.

ಅಧಿಕಾರಕ್ಕಾಗಿ ಆಡಳಿತಶಾಹಿ ಆಥವಾ ಕಾರ್ಯಾಂಗವನ್ನ ಮುಸ್ಲಿಂಮರು ವಶಕ್ಕೆ ಪಡೆದುಕೊಳ್ಳಬೇಕು ಅಂತ ಇಮ್ರಾನ್ ವಿವಾದ ಸೃಷ್ಟಿಸಿದ್ದರು. ಉತ್ತರ ಪ್ರದೇಶ ಮೂಲದ ನಾಯಕ ಇಮ್ರಾನ್ ಉರ್ದು ಕವಿಯೂ ಅಗಿದ್ದಾರೆ. ಇವರು ಉತ್ತರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪವನ್ನು ಹೊಂದಿದ್ದಾರೆ.

ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಕೆಲವರು ಡಿಕೆಶಿ, ಡಿಕೆಶಿ ಅಂತ ಮತ್ತು ಜಮೀರ್ ಹೆಸರು ಹೇಳಿ ಘೋಷಣೆ ಕೂಗಿದ್ದಾರೆ. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ. ಈ ನಡುವೆ ಇದು ಪೂರ್ವ ನಿಯೋಜಿತ ಪ್ಲ್ಯಾನ್ ಎಂಬ ಗುಸುಗುಸು ಕೂಡಾ ಕೇಳಿಬಂದಿದೆ.

ಇದನ್ನೂ ಓದಿ ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ

ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು