AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ
ಏಕನಾಥ್ ಶಿಂಧೆ
TV9 Web
| Edited By: |

Updated on:Aug 14, 2022 | 6:32 PM

Share

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರಿಗೆ ಗೃಹ ಮತ್ತು ಹಣಕಾಸು ಇಲಾಖೆ ನೀಡಲಾಗಿದೆ. ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂಟಿವಾರ್ ಅವರನ್ನು ಅರಣ್ಯ ಸಚಿವರನ್ನಾಗಿ ಮಾಡಲಾಗಿದೆ, ಅವರು ಈ ಹಿಂದೆಯೂ ಇದೇ ಖಾತೆ ನಿಭಾಯಿಸಿದ್ದರು. ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಖಾತೆ ನೀಡಲಾಗಿದ್ದು, ಸಂಸದೀಯ ವ್ಯವಹಾರ ಖಾತೆಗಳನ್ನೂ ಇವರು ನೋಡಿಕೊಳ್ಳಲಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ  ಶಿವಸೇನಾದಿಂದ ದೀಪಕ್ ಕೇಸರ್ಕರ್ ಅವರಿಗೆ ಶಾಲಾ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದ್ದು, ಅಬ್ದುಲ್ ಸತ್ತಾರ್ ವರಿಗೆ ಕೃಷಿ ಖಾತೆ ನೀಡಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಲ್ಲಿ ಬಂಡಾಯವೆದ್ದು ಸರ್ಕಾರ ಪತನವಾಗುವಂತೆ ಮಾಡಿದ ಏಕನಾಥ್ ಶಿಂಧೆ, ಆಮೇಲೆ ಬಿಜೆಪಿ ಜತೆ ಕೈಜೋಡಿಸಿ ಮಹಾ ಮುಖ್ಯಮಂತ್ರಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sun, 14 August 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ