AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ
ಏಕನಾಥ್ ಶಿಂಧೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 14, 2022 | 6:32 PM

Share

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರಿಗೆ ಗೃಹ ಮತ್ತು ಹಣಕಾಸು ಇಲಾಖೆ ನೀಡಲಾಗಿದೆ. ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂಟಿವಾರ್ ಅವರನ್ನು ಅರಣ್ಯ ಸಚಿವರನ್ನಾಗಿ ಮಾಡಲಾಗಿದೆ, ಅವರು ಈ ಹಿಂದೆಯೂ ಇದೇ ಖಾತೆ ನಿಭಾಯಿಸಿದ್ದರು. ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಖಾತೆ ನೀಡಲಾಗಿದ್ದು, ಸಂಸದೀಯ ವ್ಯವಹಾರ ಖಾತೆಗಳನ್ನೂ ಇವರು ನೋಡಿಕೊಳ್ಳಲಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ  ಶಿವಸೇನಾದಿಂದ ದೀಪಕ್ ಕೇಸರ್ಕರ್ ಅವರಿಗೆ ಶಾಲಾ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದ್ದು, ಅಬ್ದುಲ್ ಸತ್ತಾರ್ ವರಿಗೆ ಕೃಷಿ ಖಾತೆ ನೀಡಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಲ್ಲಿ ಬಂಡಾಯವೆದ್ದು ಸರ್ಕಾರ ಪತನವಾಗುವಂತೆ ಮಾಡಿದ ಏಕನಾಥ್ ಶಿಂಧೆ, ಆಮೇಲೆ ಬಿಜೆಪಿ ಜತೆ ಕೈಜೋಡಿಸಿ ಮಹಾ ಮುಖ್ಯಮಂತ್ರಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sun, 14 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು