AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ
ಏಕನಾಥ್ ಶಿಂಧೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 14, 2022 | 6:32 PM

Share

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರಿಗೆ ಗೃಹ ಮತ್ತು ಹಣಕಾಸು ಇಲಾಖೆ ನೀಡಲಾಗಿದೆ. ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂಟಿವಾರ್ ಅವರನ್ನು ಅರಣ್ಯ ಸಚಿವರನ್ನಾಗಿ ಮಾಡಲಾಗಿದೆ, ಅವರು ಈ ಹಿಂದೆಯೂ ಇದೇ ಖಾತೆ ನಿಭಾಯಿಸಿದ್ದರು. ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಖಾತೆ ನೀಡಲಾಗಿದ್ದು, ಸಂಸದೀಯ ವ್ಯವಹಾರ ಖಾತೆಗಳನ್ನೂ ಇವರು ನೋಡಿಕೊಳ್ಳಲಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ  ಶಿವಸೇನಾದಿಂದ ದೀಪಕ್ ಕೇಸರ್ಕರ್ ಅವರಿಗೆ ಶಾಲಾ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದ್ದು, ಅಬ್ದುಲ್ ಸತ್ತಾರ್ ವರಿಗೆ ಕೃಷಿ ಖಾತೆ ನೀಡಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಲ್ಲಿ ಬಂಡಾಯವೆದ್ದು ಸರ್ಕಾರ ಪತನವಾಗುವಂತೆ ಮಾಡಿದ ಏಕನಾಥ್ ಶಿಂಧೆ, ಆಮೇಲೆ ಬಿಜೆಪಿ ಜತೆ ಕೈಜೋಡಿಸಿ ಮಹಾ ಮುಖ್ಯಮಂತ್ರಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sun, 14 August 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!