AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಲು ಕರ್ನಾಟಕದ ಪ್ರಭಾವಿ ಮಠಗಳಿಂದ ಶಿಫಾರಸು

ಕರಾವಳಿ, ಮಧ್ಯ ಮತ್ತು ಉತ್ತರ ಕರ್ನಾಟಕದ ಪ್ರಭಾವಿ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಲು ಕರ್ನಾಟಕದ ಪ್ರಭಾವಿ ಮಠಗಳಿಂದ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 26, 2022 | 3:06 PM

Share

ದೆಹಲಿ: ಮುಂಬರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೀಡುವಂತೆ ಕರ್ನಾಟಕ ಮೂರು ಪ್ರಭಾವಿ ಮಠಗಳು ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿವೆ. ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಇತ್ತೀಚೆಗಷ್ಟೇ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ದಾವಣಗೆರೆ ಮೂಲದ ಡಾ.ಸಿ.ಆರ್.ನಸೀರ್ ಅಹ್ಮದ್ ಅವರಿಗೆ ಟಿಕೆಟ್ ನೀಡಬೇಕು ಎಂದು ಕರಾವಳಿ, ಮಧ್ಯ ಮತ್ತು ಉತ್ತರ ಕರ್ನಾಟಕದ ಪ್ರಭಾವಿ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿದ್ದಾರೆ. ಡಾ.ಸಿ.ಆರ್.ನಸೀರ್ ಅಹ್ಮದ್ ಅವರು ಪ್ರಸ್ತುತ ರಾಜ್ಯ ಯೋಜನಾ ಆಯೋಗದ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ

ಶಿಕಾರಿಪುರ ಕ್ಷೇತ್ರದಲ್ಲಿ (Shikaripura Constituency) ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಸ್ಪರ್ಧಿಸುತ್ತಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಹೇಳಿಕೆಯು ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಭೀತಿ ಉಂಟು ಮಾಡಿದೆ. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವಯಸ್ಸಿನ ಕಾರಣದಿಂದ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದ್ದ ಹಲವು ನಾಯಕರು ಇದೀಗ ನಿರಾಶೆಗೆ ಜಾರಿದ್ದಾರೆ.

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು. ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸದಿದ್ದರೆ ತಮಗೂ ಟಿಕೆಟ್ ಸಿಗುವುದು ಅನುಮಾನ ಎಂದು ಹಲವರು ಸ್ವತಃ ವಿಶ್ಲೇಷಿಸಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರದಿಂದ 2023ಕ್ಕೆ 75 ವರ್ಷ ದಾಟುವ ಹಿರಿಯ ನಾಯಕರಿಗೆ ಟಿಕೆಟ್ ಸಿಗುವ ಸಾಧ್ಯತೆಯ ಬಗ್ಗೆ ಆತಂಕ ಉಂಟಾಗಿದೆ.

Published On - 11:46 am, Tue, 26 July 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು