ಬದಲಾಗುತ್ತಾ ಯುಪಿಎ ಮೈತ್ರಿಕೂಟದ ಹೆಸರು? ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ನಡೆಯಿತು ಚರ್ಚೆ

ಪಿಡಿಎ (ಪ್ರೊಗ್ರೆಸ್ಸಿವ್ ಡೆಮಾಕ್ರಟಿಕ್ ಅಲೈನ್ಸ್), ಎನ್​​ಪಿಎ (ನ್ಯಾಷನಲ್ ಪ್ರೊಗ್ರೆಸ್ಸಿವ್ ಅಲೈನ್ಸ್), ಐಡಿಎ (ಇಂಡಿಯಾ ಡೆಮಾಕ್ರಟಿಕ್ ಅಲೈನ್ಸ್), ಯುಪಿಎ3 ಎಂಬ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.

ಬದಲಾಗುತ್ತಾ ಯುಪಿಎ ಮೈತ್ರಿಕೂಟದ ಹೆಸರು? ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ನಡೆಯಿತು ಚರ್ಚೆ
ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ
Image Credit source: PTI
Edited By:

Updated on: Jul 18, 2023 | 3:21 PM

ಬೆಂಗಳೂರು, ಜುಲೈ 18: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಮಣಿಸಲು ಕಾರ್ಯತಂತ್ರ ರೂಪಿಸುವುದಕ್ಕಾಗಿ ಪ್ರತಿಪಕ್ಷಗಳ ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇದೇ ವೇಳೆ, ಯುಪಿಎ (United Progressive Alliance) ಮೈತ್ರಿಕೂಟದ ಹೆಸರು ಬದಲಾಯಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಯುಪಿಎ ಬದಲಿಗೆ ನಾಲ್ಕು ಹೆಸರುಗಳನ್ನು ಸಭೆಯಲ್ಲಿ ಸೂಚಿಸಲಾಗಿದೆ. ಆದರೆ, ಈ ಪೈಕಿ ಯಾವುದೇ ಹೆಸರನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ.

ಪಿಡಿಎ (ಪ್ರೊಗ್ರೆಸ್ಸಿವ್ ಡೆಮಾಕ್ರಟಿಕ್ ಅಲೈನ್ಸ್), ಎನ್​​ಪಿಎ (ನ್ಯಾಷನಲ್ ಪ್ರೊಗ್ರೆಸ್ಸಿವ್ ಅಲೈನ್ಸ್), ಐಡಿಎ (ಇಂಡಿಯಾ ಡೆಮಾಕ್ರಟಿಕ್ ಅಲೈನ್ಸ್), ಯುಪಿಎ3 ಎಂಬ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೆ, ಮೈತ್ರಿಕೂಟದ ನಾಯಕತ್ವದ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್, ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿದೆ. ಅಂತಿಮವಾಗಿ ಮೂರ್ನಾಲ್ಕು ಸುತ್ತಿನ ಸಭೆಯ ಬಳಿಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ದ್ವೇಷ ರಾಜಕಾರಣದ ವಿರುದ್ಧ ಸಾಮೂಹಿಕ ಹೋರಾಟಕ್ಕೆ ನಿರ್ಧಾರ

ಬೆಂಗಳೂರಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಾಲ್ಗೊಂಡಿರುವ 26 ರಾಷ್ಟ್ರೀಯ ವಿಪಕ್ಷಗಳು ಒಕ್ಕೂಟದ ಉದ್ದೇಶ ಹಾಗೂ ಗುರಿಗೆ ಸಂಬಂಧಿಸಿ ಸಾಮೂಹಿಕ ಸಂಕಲ್ಪ ಮಾಡಿಕೊಂಡಿವೆ. ದ್ವೇಷ ರಾಜಕಾರಣದ ವಿರುದ್ದ ಸಾಮೂಹಿಕ ಹೋರಾಟಕ್ಕೆ ನಿರ್ಧಾರ ಕೈಗೊಂಡಿವೆ. ಸಾರ್ವಜನಿಕ ಉದ್ದಿಮೆಗಳ ಸಂರಕ್ಷಣೆಗೆ ನಿರ್ಣಯ ಕೈಗೊಳ್ಳಲಾಗಿದೆ. ಮಣಿಪುರದ ಗಲಭೆ ವಿಚಾರ ಕೂಡ ಸಾಮೂಹಿಕ ಸಂಕಲ್ಪದ ವೇಳೆ ಪ್ರಸ್ತಾಪವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಲೋಕಸಭೆಗೆ ಒಟ್ಟಾಗಿ ಸ್ಪರ್ಧೆ ಮಾಡುವ ನಿರ್ಣಯ ಕೈಗೊಳ್ಳಲಾಗಿದ್ದು, ಸೀಟು ಹಂಚಿಕೆಗೆ ಸಂಬಂಧಿಸಿ ರಾಜ್ಯವಾರು ಸಮಿತಿಗಳ ರಚನೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಯಾವ ಯಾವ ರಾಜ್ಯ ಗಳಲ್ಲಿ ಎಷ್ಟೆಷ್ಟು ಸೀಟು ಹಂಚಿಕೆ ಎಂಬ ನಿರ್ಧಾರ ಮಾಡಲು ಪ್ರತ್ಯೇಕ ಸಮಿತಿ ಮಾಡಲು ತೀರ್ಮಾನಿಸಲಾಗಿದೆ. ಸಾಮೂಹಿಕ ಸಂಕಲ್ಪಕ್ಕೆ ಸಮ್ಮತಿ ಸೂಚಿಸಿ 26 ಪ್ರತಿಪಕ್ಷಗಳ ನಾಯಕರು ಸಹಿ ಹಾಕಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us