AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 5:36 PM

Share

ಶಿವಮೊಗ್ಗ: ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು ಸಾಕುವುದರಲ್ಲಿ ಸಾರ್ಥಕತೆ ಇದೆ ಎಂದು ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga Jnanendra) ತಿರುಗೇಟು ನೀಡಿದರು. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಪಶುಸಂಗೋಪನಾ ಸಚಿವರು ಕಟುಕರ ರೀತಿ ಮಾತನಾಡುವುದು ಸರಿಯಲ್ಲ, ಮೊದಲು ಅದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದರು. ಯಾರನ್ನು ತೃಪ್ತಿಪಡಿಸಬೇಕೆಂದು ಈ ರೀತಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಇದು ತುಂಬಾ ದಿನ ನಡೆಯುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಎಲ್ಲರೂ ತಾಯಿಯ ಎದೆಹಾಲು ನಿಲ್ಲಿಸಿದ ಬಳಿಕ ಹಸುವಿನ ಹಾಲನ್ನು ಕುಡಿಯುತ್ತಾರೆ. ಹೀಗಾಗಿಯೇ ಗೋ ಅನ್ನು ತಾಯಿ ಎಂದು ಕರೆಯುತ್ತಾರೆ. ಇತ್ತೀಚೆಗೆ ನಾವು ಸಾವಯವ ಕೃಷಿಯತ್ತ ವಾಲುತ್ತಿದ್ದೇವೆ. ಇದಕ್ಕಾಗಿ ಜಾನುವಾರುಗಳು ಬೇಕೇ ಬೇಕು. ಇಂದು ಜಾನುವಾರು ಗೊಬ್ಬರಕ್ಕೆ ಬೆಲೆ ಎಷ್ಟಾಗಿದೆ ಎಂಬುದನ್ನು ಎಲ್ಲರೂ ಯೋಚಿಸಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Anti-Cow Slaughter Act :ಕರ್ನಾಟಕದಲ್ಲಿ ಶುರುವಾಯ್ತು ಗೋವು ಗಲಾಟೆ: ಬಿಜೆಪಿ-ಕಾಂಗ್ರೆಸ್‌ ಮಧ್ಯೆ ‘ಗೋಹತ್ಯೆ’ ಸಮರ

ಪಶು ಸಂಗೋಪನೆ ‌ಸಚಿವ ಮೆಂಟಲ್ ಎಂದ ಪ್ರಭು ಚೌಹಾನ್

ಬೀದರ್​ನಲ್ಲಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿಕೆ ನೀಡಿದ್ದು, ಕಾಂಗ್ರೆಸ್​ನವರಿಗೆ ಕಾನೂನಿನ ಬಗ್ಗೆ ಅರಿವಿಲ್ಲ. ಅವರೆ 1964 ರಲ್ಲಿ ಗೋ ಹತ್ಯೆ ಕಾನೂನು ಜಾರಿಗೆ ತಂದಿದ್ದಾರೆ. ಕಾಂಗ್ರೆಸ್​ನವರು ಜಾರಿ ಮಾಡಿದ ಕಾನೂನನ್ನ ನಾವು ಕಠಿಣ ಮಾಡಿದ್ದೇವೆ. ಕಾಂಗ್ರೆಸ್​ನ ಪಶು ಸಂಗೋಪನೆ ‌ಸಚಿವರು ಮೆಂಟಲ್ ಆಗಿದ್ದಾರೆ. ಅವರ ಖಾತೆ ಬದಲಾವಣೆ ಮಾಡಬೇಕು. ಇಲ್ಲಾ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಸಿಎಂಗೆ ಪ್ರಭು‌ ಚೌಹಾನ್​ ಮನವಿ ಮಾಡಿದರು.

ಇದನ್ನೂ ಓದಿ: ನಾನು ಪ್ರಾಣಿಹತ್ಯೆ ನಿಷೇಧ ಪರ, ಆದ್ರೆ ಸಂಪುಟದಲ್ಲಿ ಮಾತಾಡಲ್ಲ: ರಾಮಲಿಂಗಾ ರೆಡ್ಡಿ

ಗೋ ಹತ್ಯೆ ಕಾನೂನು ರದ್ದಾದ್ರೆ ಉಗ್ರ ಹೋರಾಟ 

ಒಂದು‌ ಸಮುದಾಯಕ್ಕೆ ಖುಷಿ ಪಡಿಸಲು ಗೋ ಹತ್ಯೆ ಕಾನೂನು ನಿಷೇಧ ರದ್ದತಿ ಬಗ್ಗೆ ಮಾತಾನಾಡುತ್ತಿದ್ದಾರೆ. ಜನರು ಕಾಂಗ್ರೆಸ್​ ಪಕ್ಷಕ್ಕೆ ಆಶಿರ್ವಾದ ಮಾಡಿದ್ದಾರೆ. ಅಂಹಕಾರ ಬಿಟ್ಟು ಜನರ ಸೇವೆ ಮಾಡಿ. ಒಂದು ವೇಳೆ ಕಾಂಗ್ರೆಸ್​ ಗೋ ಹತ್ಯೆ ಕಾನೂನು ರದ್ದು ಮಾಡಿದರೆ ರಾಜ್ಯದಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ. ತಾವೇ ಕಾನೂನು ಮಾಡಿದ್ದನ್ನ ಈಗ ಅವರೇ ರದ್ದು ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಇದು ಆಶ್ಚರ್ಯ ಸಂಗತಿ ಎಂದರು.

ಜನ ಸಾಮಾನ್ಯರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಾರೆ: ಬಿ.ವೈ ವಿಜಯೇಂದ್ರ 

ಮೈಸೂರಿನಲ್ಲಿ ಈ ಕುರಿತಾಗಿ ಶಾಸಕ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಚಿವರ ಹೇಳಿಕೆಯನ್ನು ನೋಡಿದರೆ ದೇಶದ ಸಂಸ್ಕೃತಿ ಅರಿವು, ಕಾಳಜಿ ಇಲ್ಲದ ವ್ಯಕ್ತಿ. ಈ ರೀತಿಯ ಉಡಾಫೆ ಹೇಳಿಕೆಯನ್ನ ರಾಜ್ಯದ ಜನರು ನಿರೀಕ್ಷೆ ಮಾಡಿರಲಿಲ್ಲ. ಅನೇಕ ಸಚಿವರು ಗೆದ್ದಿರುವ ವಿಶ್ವಾಸದಲ್ಲಿ ಅನೇಕ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ನಮ್ಮ ಹಿಂದು ಸಂಸ್ಕೃತಿ ಪರಂಪರೆ ಗೊತ್ತಿದ್ದರೆ ಈ ರೀತಿ ಹೇಳಿಕೆ ಕೊಡುತ್ತಿರಲಿಲ್ಲ. ನಾಳೆಯಿಂದ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಜನ ಸಾಮಾನ್ಯರು ಕೂಡ ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ