AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವತ್ತಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆ ಮೇಲೆ ನಡೆದ ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆಯಾಗಿದೆ. ಇದು ವಿಪಕ್ಷ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ಕಮಿಷನ್ ಆರೋಪಗಳನ್ನು ಮಾಡಲು ಆರಂಭಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗವಾಗಿವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯImage Credit source: PTI
TV9 Web
| Edited By: Rakesh Nayak Manchi|

Updated on: Oct 14, 2023 | 3:14 PM

Share

ಬೆಂಗಳೂರು, ಅ.14: ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವತ್ತಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆ ಮೇಲೆ ನಡೆದ ಐಟಿ ದಾಳಿ (IT Raid) ರಾಜಕೀಯ ತಿರುವು ಪಡೆದುಕೊಂಡಿದ್ದು, ಲೋಕಸಭೆ ಹೊಸ್ತಿಲಲ್ಲಿ ವಿಪಕ್ಷ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದೆ. ಅಲ್ಲದೆ, ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿದ್ದ ಕಮಿಷನ್ ಆರೋಪವನ್ನು ಮುಂದುವರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಬಿಲ್​ಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಆಗ ಬಿಲ್ ಹಣ ಕೊಡದೇ ಕಮಿಷನ್ ಕುದುರಿಸುವ ಕೆಲಸ ಆಗುತ್ತಿತ್ತು. ಈಗ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಅಪಾರ ಹಣ ಸಿಕ್ಕಿದೆ. ಈವರೆಗೂ ಗುತ್ತಿಗೆದಾರರ ಮನೆಯಲ್ಲಿ ಇಷ್ಟು ದೊಡ್ಡ ಹಣ ಸಿಕ್ಕಿರಲಿಲ್ಲ ಎಂದರು.

ಇದನ್ನೂ ಓದಿ: ಬಂಡಲ್‌ಗಳಷ್ಟು ಹಣ ಯಾರದ್ದು? ಐಟಿ ರೇಡ್‌ ಬೆನ್ನಲ್ಲೇ ಹುಟ್ಟಿಕೊಂಡ ರಾಜಕೀಯ ನಂಟು!

42 ಕೋಟಿ ಸಿಕ್ಕಿದ್ದಕ್ಕೂ ಗುತ್ತಿಗೆದಾರರ ಹಣ ಬಿಡುಗಡೆ ಆಗಿದ್ದಕ್ಕೂ ಲೆಕ್ಕ ಸರಿ ಇದೆ. ಸಿಕ್ಕಿಬಿದ್ದವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಕಾಂಟ್ರಾಕ್ಟರ್. ಇಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷರು ಬಹಳ ಆತ್ಮೀಯರು. ಯಾರು ಕಮೀಷನ್ ಕೊಟ್ಟಿದ್ದಾರೋ ಅವರಿಗೆ ಹಣ ಕೊಟ್ಟಿದ್ದಾರೆ. ಬಡಪಾಯಿಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಅವರು ಕೂಡಲೇ ತಾವೇ ಮಾಡಿರುವ ಆಯೋಗದ ಮೂಲಕ ತನಿಖೆ ಮಾಡಿಸಲಿ ಎಂದು ಹೇಳಿದ ಬೊಮ್ಮಾಯಿ, ಗುತ್ತಿಗೆದಾರರು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಹಿಂದೆ ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್ ಆರೋಪ ಮಾಡಿದ್ದೀರಿ. ಈಗ 50 ಪರ್ಸೆಂಟ್ ಸರ್ಕಾರದ ಜೊತೆ ಕೆಲಸ ಮಾಡುತ್ತಿದ್ದೀರಿ. ಯಾವ ಸರ್ಕಾರ ಸರಿ ಅಂತಾ ನೀವೇ ಆಲೋಚನೆ ಮಾಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು