AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕೊವಿಡ್ ಲಾಕ್​ಡೌನ್ ಅಲ್ಲ, ಬಿಜೆಪಿಯ ಲಾಕ್​ಡೌನ್​; ಡಿಕೆ ಶಿವಕುಮಾರ್ ಹೇಳಿಕೆ

ನಾವು ಕುಡಿಯುವ ನೀರಿಗಾಗಿ ನಡೆಯುತ್ತೇವೆ. ನಾವು ವಾಕ್ ಫಾರ್ ವಾಟರ್ ಮಾಡುತ್ತೇವೆ. ಅವರಿಗೂ ಕಾವೇರಿ ನೀರು ಕುಡಿಸುತ್ತೇವೆ. ವರ್ತಕರು, ವ್ಯಾಪಾರಿಗಳ ಮೇಲೆ ಗದಾಪ್ರಹಾರ ಮಾಡುತ್ತಿದ್ದಾರೆ.

ಇದು ಕೊವಿಡ್ ಲಾಕ್​ಡೌನ್ ಅಲ್ಲ, ಬಿಜೆಪಿಯ ಲಾಕ್​ಡೌನ್​; ಡಿಕೆ ಶಿವಕುಮಾರ್ ಹೇಳಿಕೆ
ಡಿ ಕೆ ಶಿವಕುಮಾರ್
TV9 Web
| Updated By: sandhya thejappa|

Updated on:Jan 05, 2022 | 11:56 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಇದು ಕೊವಿಡ್ ಲಾಕ್​ಡೌನ್, ಕೊವಿಡ್ ಕರ್ಫ್ಯೂ ಅಲ್ಲ. ಇದು ಬಿಜೆಪಿ ಕರ್ಫ್ಯೂ, ಬಿಜೆಪಿಯ ಲಾಕ್​ಡೌನ್ ಅಂತ ಹೇಳಿದ್ದಾರೆ. ಅವರಿಗೆ ರಾಜಕಾರಣ ಮಾಡಲು ಈಗ ಟಫ್ ಆಗುತ್ತಿದೆ. ತಮ್ಮ ರಾಜಕಾರಣಕ್ಕಾಗಿ ಟಫ್ ರೂಲ್ಸ್ ತಂದಿದ್ದಾರೆ. ಮೆರವಣಿಗೆ ಮಾಡಬೇಡಿ, ಪ್ರತಿಭಟನೆ ಮಾಡಬೇಡಿ ಅಂದಿದ್ದಾರೆ. ನಾವು ಮೆರವಣಿಗೆ ಮಾಡಲ್ಲ, ನೀರಿಗಾಗಿ ನಡೆಯುತ್ತೇವೆ ಅಂತ ಡಿಕೆಶಿ ತಿಳಿಸಿದ್ದಾರೆ.

ನಾವು ಕುಡಿಯುವ ನೀರಿಗಾಗಿ ನಡೆಯುತ್ತೇವೆ. ನಾವು ವಾಕ್ ಫಾರ್ ವಾಟರ್ ಮಾಡುತ್ತೇವೆ. ಅವರಿಗೂ ಕಾವೇರಿ ನೀರು ಕುಡಿಸುತ್ತೇವೆ. ವರ್ತಕರು, ವ್ಯಾಪಾರಿಗಳ ಮೇಲೆ ಗದಾಪ್ರಹಾರ ಮಾಡುತ್ತಿದ್ದಾರೆ. ರಾಜಕಾರಣ, ನಮ್ಮ ಮೇಲಿನ ದ್ವೇಷಕ್ಕೆ ವೀಕೆಂಡ್ ಲಾಕ್​ಡೌನ್ ಜಾರಿಗೊಳಿಸಿದ್ದಾರೆ. ನೈಟ್ ಕರ್ಫ್ಯೂ ಜಾರಿಮಾಡಿ ಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸಿದ್ದಾರೆ. ಈ ಸರ್ಕಾರ ವರ್ತಕರ ಕೊಲೆ ಮಾಡುವುದೊಂದು ಬಾಕಿಯಿದೆ ಅಂತ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಯಾರೂ ನಡೆಯದಂತೆ ನೋಡಿಕೊಳ್ಳಲು ಆಗುತ್ತಾ. ಅವರಿಗೆ ಜನರ ಪ್ರಾಣ ಮುಖ್ಯವಿಲ್ಲ, ಅವರ ಪಕ್ಷ ಮುಖ್ಯವಾಗಿದೆ. ಮೊದಲ ಅಲೆಯಲ್ಲಿ ಸ್ವಿಮ್ಮಿಂಗ್ ಪೂಲ್​ಗೆ ಇಳಿದಿದ್ದರಲ್ಲ. ಸಚಿವ ಸುಧಾಕರ್ ವಿರುದ್ಧ ಮೊದಲು ಪ್ರಕರಣ ದಾಖಲಿಸಲಿ. ಸಚಿವ ಶ್ರೀರಾಮುಲು, ಬಿಎಸ್​ವೈ ವಿರುದ್ಧ ಕೇಸ್ ದಾಖಲಿಸಲಿ. ಸಿಎಂ ಮದುವೆಯಲ್ಲಿ ಭಾಗಿಯಾಗಿದ್ದರಲ್ಲ ಕೇಸ್ ದಾಖಲಿಸಲಿ ಅಂತ ಡಿಕೆಶಿ ಹೇಳಿದ್ದಾರೆ.

ಬೆಂಗಳೂರಿನ ಜನರಿಗೆ ನೀರು ಸಿಗಲು ಪ್ರಾರ್ಥನೆ ಮಾಡಲು ನಡೆಯುತ್ತೇವೆ. ನಮ್ಮದು ಪ್ರತಿಭಟನೆ ಅಲ್ಲ ಪ್ರಾರ್ಥನೆ. ನಾವು ಧರಣಿ ಮಾಡುತ್ತಿಲ್ಲ. ಯಾವ ಬದಲಾವಣೆ ಇಲ್ಲ. ಈಗಾಗಲೇ ಶಾಸಕಾಂಗ ಪಕ್ಷದ ನಾಯಕರ ಹತ್ತಿರ ಮಾತನಾಡಿದ್ದೇನೆ. ನಿಯಮದ ಪ್ರಕಾರವೇ ನಡೆಯುತ್ತೇವೆ. ನಮ್ಮ ಮೇಲಿನ ರಾಜಕಾರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಅಂತ ಶಿವಕುಮಾರ್ ಅಭಿಪ್ರಾಯಪಟ್ಟರು

ಇದನ್ನೂ ಓದಿ

250 ಕ್ಕಿಂತ ಹೆಚ್ಚು ಭತ್ತದ ತಳಿಗಳನ್ನು ಕಾಪಾಡಿ ಸಂಶೋಧನೆ ಮೂಲಕ ಸಾಧನೆ ಮಾಡಿದ ಮಂಡ್ಯ ರೈತ ಬೋರೇಗೌಡರಿಗೆ ನವನಕ್ಷತ್ರ ಸನ್ಮಾನ

ಬಳ್ಳಾರಿಯ ವಿಮ್ಸ್‌ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 21 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

Published On - 11:50 am, Wed, 5 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!