AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲ್ಲಿಯಿಂದ ಬೆಂಗಳೂರಿಗೆ ಬಂದಿಳಿದ ಜಗದೀಶ್ ಶೆಟ್ಟರ್​, ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು(ಜನವರಿ 25) ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಇದೀಗ ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಶೆಟ್ಟರ್​ ಹೇಳಿದ್ದೇನು? ಇಲ್ಲಿದೆ ವಿವರ

ದಿಲ್ಲಿಯಿಂದ ಬೆಂಗಳೂರಿಗೆ ಬಂದಿಳಿದ ಜಗದೀಶ್ ಶೆಟ್ಟರ್​, ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?
ಮಾಜಿ ಸಿಎಂ ಜಗದೀಶ್ ಶೆಟ್ಟರ್
TV9 Web
| Edited By: |

Updated on:Jan 25, 2024 | 10:43 PM

Share

ಬೆಂಗಳೂರು, (ಜನವರಿ 25): ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇದೀಗ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶೆಟ್ಟರ್ ಅವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ​ಬಿಜೆಪಿ ನಮ್ಮ ಮನೆ, ವಾಪಸ್ ಬಂದಿರುವುದು ಬಹಳ ಸಂತಸವಾಗುತ್ತಿದೆ.ಬಿಜೆಪಿ ರಾಷ್ಟ್ರೀಯ ನಾಯಕರು ಗೌರವದಿಂದ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಾನು ಬಿಜೆಪಿಗೆ ಮರಳಲು ಪವರ್​ಫುಲ್ ನಾಯಕ ಮೋದಿಯೇ ಕಾರಣ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ನಾಯಕರು ಗೌರವದಿಂದ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಾನು ಬಿಜೆಪಿಗೆ ಮರಳಲು ಪವರ್​ಫುಲ್ ನಾಯಕ ಮೋದಿಯೇ ಕಾರಣ. ಗೌರವ ಸಿಕ್ಕಿಲ್ಲವೆಂದು ಪಕ್ಷ ಬಿಟ್ಟಿದ್ದೆ, ಇಂದು ಪಕ್ಷ ಗೌರವ ಕೊಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲೂ ಗೌರವವಿತ್ತು, ಆದರೆ ಅದು ನಮ್ಮ ಮನೆಯಲ್ಲ. ನಮ್ಮ ಮನೆಗೆ ವಾಪಸ್ ಬಂದಿರುವುದು ನನಗೆ ತುಂಬಾ ಖುಷಿಕೊಟ್ಟಿದೆ ಎಂದು ಹೇಳಿದರು.

ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯಲ್ಲ ಎಂದ ವಿಜಯೇಂದ್ರ

ಇನ್ನು ಇದೇ ವೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದರಿಂದ ಕೊಟ್ಟಂತಾಗಿದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನ ಗೆಲ್ಲುವ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿಸಿದರು. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ. ಈ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಂತಸದಿಂದಿದ್ದಾರೆ ಎಂದೂ ಅವರು ತಿಳಿಸಿದರು. ಬಿಜೆಪಿ ಕರ್ನಾಟಕದ ಭದ್ರಕೋಟೆ ಎಂದು ಸಾಬೀತು ಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜೀನಾಮೆ ನೀಡಿದ ಶೆಟ್ಟರ್

ಬಳಿಕ ಶೆಟ್ಟರ್​ ಅವರು ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ರಾಜೀನಾಮೆ ಪತ್ರ ನೀಡಿದರು. ಖುದ್ದು ಬಂದು ರಾಜೀನಾಮೆ ಪತ್ರ ನೀಡುವಂತೆ ಹೊರಟ್ಟಿ ಸೂಚಿಸಿದ್ದರು. ಅದರಂತೆ ಇದೀಗ ಶೆಟ್ಟರ್ ಅವರು ತಮ್ಮ ಲೆಟರ್ ಹೆಡ್​ನಲ್ಲಿ ಟೈಪ್ ಮಾಡದೇ ಹಸ್ತಾಕ್ಷರದಲ್ಲಿ ಬರೆದ ರಾಜೀನಾಮೆ ಪತ್ರ ಸಲ್ಲಿಸಿದರು.

Published On - 10:31 pm, Thu, 25 January 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು